AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Congress Files: ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಹಗರಣಗಳ ಕುರಿತು ಬಿಜೆಪಿಯಿಂದ ‘ಕಾಂಗ್ರೆಸ್ ಫೈಲ್ಸ್’ ಸರಣಿ ಶುರು

ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಮತ್ತು ಹಗರಣಗಳ ಬಗ್ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್ ವಿರುದ್ಧ  ಕಾಂಗ್ರೆಸ್ ಫೈಲ್ಸ್ ಎಂಬ ಸರಣಿಯನ್ನು ಪ್ರಾರಂಭಿಸಿದೆ.

Congress Files: ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಹಗರಣಗಳ ಕುರಿತು ಬಿಜೆಪಿಯಿಂದ ‘ಕಾಂಗ್ರೆಸ್ ಫೈಲ್ಸ್’ ಸರಣಿ ಶುರು
ಕಾಂಗ್ರೆಸ್ ಫೈಲ್ಸ್
Follow us
ನಯನಾ ರಾಜೀವ್
|

Updated on:Apr 02, 2023 | 3:05 PM

ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಮತ್ತು ಹಗರಣಗಳ ಬಗ್ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್ ವಿರುದ್ಧ  ಕಾಂಗ್ರೆಸ್ ಫೈಲ್ಸ್ ಎಂಬ ಸರಣಿಯನ್ನು ಪ್ರಾರಂಭಿಸಿದೆ, ಅದರ ಮೊದಲ ಸಂಚಿಕೆಯಲ್ಲಿ ಕಾಂಗ್ರೆಸ್ ಆಡಳಿತದ ಭ್ರಷ್ಟಾಚಾರ ಮತ್ತು ಹಗರಣಗಳ ಬಗ್ಗೆ ಉಲ್ಲೇಖಿಸಲಾಗಿದೆ. 2ಜಿ ಪ್ರಕರಣ, ಕಲ್ಲಿದ್ದಲು ಹಗರಣ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಸಾಲು ಸೇರಿದಂತೆ ವಿವಿಧ ಹಗರಣಗಳಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಭಾಗಿಯಾಗಿದೆ ಎಂದು ಆರೋಪಿಸಿ “ಕಾಂಗ್ರೆಸ್ ಫೈಲ್ಸ್” ಎಂಬ ವಿಡಿಯೋ ಸರಣಿಯ ಮೊದಲ ಸಂಚಿಕೆಯನ್ನು ಪಕ್ಷವು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ.

ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರಿರುವ ಮೂರು ನಿಮಿಷಗಳ ವೀಡಿಯೊ ಕ್ಲಿಪ್, ಯುಪಿಎ ಅವಧಿಯಲ್ಲಿ ನಡೆದಿದೆ ಎನ್ನಲಾದ 48,20,69,00,00,000 ರೂ. ಮೌಲ್ಯದ ಹಗರಣಗಳನ್ನು ಪಟ್ಟಿಮಾಡಿದೆ .

ಈ ಮೊತ್ತದಲ್ಲಿ 24 INS ವಿಕ್ರಾಂತ್ , 300 ರಫೇಲ್ ವಿಮಾನಗಳು ಮತ್ತು 1000 ಮಂಗಳಯಾನ ಯೋಜನೆಗಳನ್ನು ಪ್ರಾರಂಭಿಸಬಹುದು ಎಂದು ಹೇಳಲಾಗಿದೆ. ಕಾಂಗ್ರೆಸ್‌ನ ಹಗರಣ, ಭ್ರಷ್ಟಾಚಾರಕ್ಕೆ ದೇಶ ಬೆಲೆ ತೆರಬೇಕಾಗಿದ್ದು, ಕಾಂಗ್ರೆಸ್‌ನಿಂದಾಗಿ ನಮ್ಮ ದೇಶ ಪ್ರಗತಿ ಮತ್ತು ಅಭಿವೃದ್ಧಿ ಪಥದಲ್ಲಿ ಹಿಂದೆ ಬಿದ್ದಿದೆ ಎಂದು ಬಿಜೆಪಿ ಹೇಳಿದೆ.

ಕಳೆದ 10 ವರ್ಷಗಳ ಕಾಂಗ್ರೆಸ್ ಸರ್ಕಾರದ ಅವಧಿಯನ್ನು ಉಲ್ಲೇಖಿಸಿದ ಬಿಜೆಪಿ, ಅಗಸ್ಟಾ ವೆಸ್ಟ್‌ಲ್ಯಾಂಡ್ ಸಿಇಒ ಲಂಚ ನೀಡಿದ್ದಾರೆ ಎಂದು ಆರೋಪ, ವಿವಿಐಪಿ ಹೆಲಿಕಾಪ್ಟರ್ ಖರೀದಿಯಲ್ಲಿ 350 ಕೋಟಿ ಲಂಚ, ಒಂದು ಲಕ್ಷದ 86 ಸಾವಿರ ಕೋಟಿ ಕಲ್ಲಿದ್ದಲು ಹಗರಣ, ಒಂದು ಲಕ್ಷದ 86 ಸಾವಿರ ಕೋಟಿ ಹಗರಣವನ್ನು ಉಲ್ಲೇಖಿಸಿ, ಸುಮಾರು 10 ಸಾವಿರ ಕೋಟಿಯ ಎಂಎನ್‌ಆರ್‌ಇಜಿಎ ಹಗರಣ, 70 ಸಾವಿರ ಕೋಟಿ ಕಾಮನ್‌ವೆಲ್ತ್ ಹಗರಣ ಮತ್ತು ಇಟಲಿಯಿಂದ ಹೆಲಿಕಾಪ್ಟರ್ ಡೀಲ್‌ನಲ್ಲಿ 362 ಕೋಟಿ ಲಂಚ ಪಡೆದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮತ್ತು ಹಗರಣಗಳ ಸರ್ಕಾರವಾಗಿದೆ ಎಂದು ಹೇಳಿದರು.

ವಿಡಿಯೋದ ಕೊನೆಯಲ್ಲಿ, ಇದು ಕೇವಲ ಕಾಂಗ್ರೆಸ್ ಹಗರಣಗಳ ಟ್ರೇಲರ್​ ಅಷ್ಟೇ, ಚಿತ್ರ ಇನ್ನೂ ಬಾಕಿ ಇದೆ ಎಂದು ಹೇಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Sun, 2 April 23

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ