AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ, ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಮಧ್ಯೆ ಅಜ್ಜಿ ಊರಿಗೆ ಪ್ರವಾಸ ಹೊರಟ ರಾಹುಲ್ ಗಾಂಧಿ?

ಸೋಮವಾರ ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಿಸುತ್ತಿದ್ದು ಭಾನುವಾರ ಸಂಜೆ ರಾಹುಲ್ ಗಾಂಧಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ರಾಹುಲ್ ಎಲ್ಲಿಗೆ ಹೋಗಿದ್ದಾರೆ ಎಂಬುದನ್ನು ಪಕ್ಷ ಹೇಳಿಲ್ಲ ಆದರೆ ಅವರು ಇಟಲಿಗೆ ಹೋಗಿದ್ದಾರೆ ಎಂದು ಕೆಲವು ಮೂಲಗಳು ವರದಿ ಮಾಡಿವೆ.

ರೈತರ ಪ್ರತಿಭಟನೆ, ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಮಧ್ಯೆ ಅಜ್ಜಿ ಊರಿಗೆ ಪ್ರವಾಸ ಹೊರಟ ರಾಹುಲ್ ಗಾಂಧಿ?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: ಸಾಧು ಶ್ರೀನಾಥ್​|

Updated on: Dec 28, 2020 | 11:44 AM

Share

ನವದೆಹಲಿ: ಕೇಂದ್ರದ  ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 33ನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ, ಇಂದು ಕಾಂಗ್ರೆಸ್ ಪಕ್ಷದ 136ನೇ ಸಂಸ್ಥಾಪನಾ ದಿನವೂ ಆಗಿದೆ. ಇದೆಲ್ಲದರ ನಡುವೆಯೇ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

ಇದು ಅಲ್ಪಾವಧಿಯ ಅವರ ವೈಯಕ್ತಿಕ ಪ್ರವಾಸ ಎಂದು ಕಾಂಗ್ರೆಸ್ ವಕ್ತಾರ ರಣ್​ದೀಪ್ ಸುರ್ಜೇವಾಲಾ ಹೇಳಿದ್ದಾರೆ. ರಾಹುಲ್ ಗಾಂಧಿ ಎಲ್ಲಿಗೆ ಹೋಗಿದ್ದಾರೆ ಎಂಬ ವಿಷಯವನ್ನು ಬಿಟ್ಟು ಕೊಡದ ಸುರ್ಜೇವಾಲ ಸ್ವಲ್ಪ ದಿನ ಅವರು ಇಲ್ಲಿರುವುದಿಲ್ಲ ಎಂದಷ್ಟೇ ಹೇಳಿದ್ದಾರೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಇಟಲಿಯತ್ತ ರಾಹುಲ್? ಆದರೆ ಕೆಲವು ಮೂಲಗಳ ಪ್ರಕಾರ ರಾಹುಲ್ ಭಾನುವಾರ ಕತಾರ್ ಏರ್​ವೇಸ್ ಮೂಲಕ ಇಟಲಿ ದೇಶದ ಮಿಲಾನ್ ನಗರಕ್ಕೆ ಹೋಗಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲಿ ಅವರ ಅಜ್ಜಿ ವಾಸವಾಗಿದ್ದು, ಈ ಹಿಂದೆಯೂ ರಾಹುಲ್ ಈ ರೀತಿ ಪ್ರವಾಸ ಕೈಗೊಂಡಿದ್ದರು. ಕಾಂಗ್ರೆಸ್ ಪಕ್ಷದ ನಾಯಕತ್ವದ ಬಗ್ಗೆ ತೀರ್ಮಾನ ಕೈಗೊಳ್ಳುವ ಹೊತ್ತಲ್ಲಿ ರಾಹುಲ್ ವಿದೇಶ ಪ್ರಯಾಣ ಬೆಳೆಸಿರುವುದು ಪಕ್ಷದಲ್ಲಿಯೇ ಅಸಮಾಧಾನಕ್ಕೆ ಕಾರಣವಾಗಿದೆ.

ರಾಹುಲ್ ಗಾಂಧಿ ವಿದೇಶದಲ್ಲಿ ಕೂತು ಸರ್ಕಾರವನ್ನು ಪ್ರಶ್ನಿಸಲಿದ್ದಾರೆಯೇ?

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ
ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು