AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲದಲ್ಲಿ ಅಡ್ಡಮತದಾನದಿಂದ ಬಿಜೆಪಿಗೆ ಗೆಲುವು, ಕಾಂಗ್ರೆಸ್​ಗೆ ಆತಂಕ, ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

68 ಸದಸ್ಯ ಬಲದ ವಿಧಾನಸಭೆಯಲ್ಲಿ ಕೇವಲ 25 ಶಾಸಕರನ್ನು ಹೊಂದಿದ್ದರೂ ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗೆ ಜಯ ತಂದುಕೊಟ್ಟಿದೆ. ಕಾಂಗ್ರೆಸ್​ ಶಾಸಕರ ಅಡ್ಡ ಮತದಾನದಿಂದ ಬಿಜೆಪಿ ಗೆಲುವು ಸಾಧಿಸಿರುವುದಕ್ಕೆ ಸುಖು ಸರ್ಕಾರದ ವಿರುದ್ಧ ಅವರಿಗಿರುವ ಅಸಮಾಧಾನವೇ ಕಾರಣ ಎನ್ನಲಾಗಿದೆ.

ಹಿಮಾಚಲದಲ್ಲಿ ಅಡ್ಡಮತದಾನದಿಂದ ಬಿಜೆಪಿಗೆ ಗೆಲುವು, ಕಾಂಗ್ರೆಸ್​ಗೆ ಆತಂಕ, ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ
Image Credit source: Newsclick
ನಯನಾ ರಾಜೀವ್
|

Updated on:Feb 28, 2024 | 10:36 AM

Share

ಭಾರಿ ಬಹುಮತ ಪಡೆದು ಮೂರು ರಾಜ್ಯಗಳಲ್ಲಿ ಗೆದ್ದಿ ಬೀಗಿದ್ದ ಕಾಂಗ್ರೆಸ್(Congress)​ ಒಂದು ರಾಜ್ಯದಲ್ಲಿ ಅರಿವಿಲ್ಲದಂತೆ ಕುಸಿದುಬಿದ್ದಿದೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್​ ಶಾಸಕರು ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ(Himachal Pradesh)ದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 68 ಸದಸ್ಯ ಬಲದ ವಿಧಾನಸಭೆಯಲ್ಲಿ 25 ಶಾಸಕರನ್ನು ಹೊಂದಿದ್ದರೂ ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗೆ ಗೆಲುವು ತಂದುಕೊಡುವಲ್ಲಿ ಜಯ ಸಾಧಿಸಿದೆ.

ಬಿಜೆಪಿಗೆ ಮತ ಚಲಾಯಿಸಿದ ಆರು ಶಾಸಕರು ಮುಖ್ಯಮಂತ್ರಿ ಸುಖ್ವಿಂದರ್​ ಸಿಂಗ್ ಸುಖು ಅವರ ಆಡಳಿತದ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಅವರೊಂದಿಗೆ ಮಾತುಕತೆ ನಡೆಸುವಂತೆ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಮಲ್ಲಿಕಾರ್ಜುನ ಖರ್ಗೆ ನಿಯೋಜಿಸಿದ್ದಾರೆ.

ಹಿಮಾಚಲಪ್ರದೇಶದಲ್ಲಿ 68 ಸದಸ್ಯ ಬಲದ ಪೈಕಿ 40 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಆಡಳಿತಾರೂಢ ಕಾಂಗ್ರೆಸ್​ ಪಕ್ಷವು ಮೂರು ಪಕ್ಷೇತರ ಶಾಸಕರ ಬಲವನ್ನೂ ಹೊಂದಿತ್ತು. ಆದರೆ ಕಾಂಗ್ರೆಸ್​ ಪಕ್ಷದ ಆರು ಶಾಸಕರು ಹಾಗೂ ಮೂರು ಮಂದಿ ಪಕ್ಷೇತರ ಶಾಸಕರು ಅಡ್ಡ ಮತದಾನ ಮಾಡಿರುವುದರಿಂದ ಕಾಂಗ್ರೆಸ್​ ಪಕ್ಷದ ಅಧಿಕೃತ ಅಭ್ಯರ್ಥಿ ಅಭಿಷೇಕ್​ ಸಿಂಘ್ವಿ ಸೋಲು ಅನುಭವಿಸಿದ್ದಾರೆ.

ಮತ್ತಷ್ಟು ಓದಿ: ಹಿಮಾಚಲದತ್ತ ಡಿಕೆ ಶಿವಕುಮಾರ್: ಪಕ್ಷದ ಹಿತವೇ ಮುಖ್ಯವಾದರೆ ಡಿಸಿಎಂ ಹುದ್ದೆಗೆ ರಾಜೀನಾಮೆ ನೀಡಲಿ, ಅಶೋಕ್ ಆಗ್ರಹ

ಕಾಂಗ್ರೆಸ್​ ಅಭ್ಯರ್ಥಿ ಮನುಸಿಂಘ್ವಿ ಮತ್ತು ಬಿಜೆಪಿಯ ಹರ್ಷ ಮಹಾಜನ್ ನಡುವೆ ಪೈಪೋಟಿ ಎದುರಾಗಿತ್ತು. ಇಬ್ಬರೂ 34-34 ಮತ ಗಳಿಸಿದ್ದರು. ಹೀಗಾಗಿ ವಿಜೇತರನ್ನು ಘೋಷಿಸಲು ಚೀಟಿ ಎತ್ತಲಾಯಿತು, ಮಹಾಜನ್​ಗೆ ಅದೃಷ್ಟ ಒಲಿಯಿತು. ಕಾಂಗ್ರೆಸ್‌ನ ಪ್ರತಿಷ್ಠೆಗೆ ಹೊಡೆತಕ್ಕಿಂತ ನಷ್ಟವು ತುಂಬಾ ದೊಡ್ಡದಾಗಿದೆ.ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿಯಿರುವುದು ಕಾಂಗ್ರೆಸ್‌ನ ಆತಂಕವನ್ನು ಹೆಚ್ಚಿಸಿದೆ.

ಬಿಜೆಪಿಯು ಗುರುವಾರ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸರಕಾರ ಇದೀಗ ಅಲ್ಪ ಸಂಖ್ಯಾತವಾಗಿದೆ, ಸರಕಾರದಲ್ಲಿ ಬೇಲಿ ಹಾಕುವವರು ಈ ಕಡೆ ಬರಲು ಸಿದ್ಧರಿದ್ದಾರೆ, ಸರ್ಕಾರದ ಬಗ್ಗೆ ಅಸಮಾಧಾನವಿದೆ. ಕಾಂಗ್ರೆಸ್ ಬಹುಮತ ಪಡೆದು ಆಡಳಿತ ಮಾಡುತ್ತಿರುವ ಮೂರು ರಾಜ್ಯಗಳಲ್ಲಿ ಹಿಮಾಚಲ ಪ್ರದೇಶ ಕೂಡ ಒಂದಾಗಿತ್ತು.

ಎಸ್​ಟಿ ಸೋಮಶೇಖರ್ ಅಡ್ಡಮತದಾನ ರಾಜ್ಯಸಭಾ ಚುನಾವಣೆಯಲ್ಲಿ ಯಶವಂತಪುರ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್ ಅಡ್ಡಮತದಾನ ಮಾಡಿದ್ದಾರೆ. ಶಿವರಾಮ ಹೆಬ್ಬಾರ್ ಗೈರಾಗಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:21 am, Wed, 28 February 24

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ