AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾ ಕಾಂಗ್ರೆಸ್​​ನಿಂದ ಮತ್ತೊಬ್ಬ ಶಾಸಕ ಪಕ್ಷಾಂತರ ಸಾಧ್ಯತೆ?

Goa Congress: ಲಾರೆಂಕೊ ಎಎಪಿಗೆ ಹೋಗುವ ಸಾಧ್ಯತೆಯ ಬಗ್ಗೆ ಕೇಳಿದಾಗ, ಎಐಸಿಸಿ ಗೋವಾದ  ಉಸ್ತುವಾರಿ  ವಹಿಸಿರುವ ದಿನೇಶ್  ಗುಂಡು ರಾವ್ ಅವರು "ಹೆಚ್ಚಿನ ಗೊಂದಲವನ್ನು ಸೃಷ್ಟಿಸಲು ಬಯಸುವ ಜನರಿಂದ ಎಲ್ಲಾ ರೀತಿಯ ವದಂತಿಗಳು ಹರಡುತ್ತಿವೆ. ಇಂಥಾ ವದಂತಿಗಳಿಗೆ ಪ್ರತಿಕ್ರಿಯಿಸಬೇಕು ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ.

ಗೋವಾ ಕಾಂಗ್ರೆಸ್​​ನಿಂದ ಮತ್ತೊಬ್ಬ ಶಾಸಕ ಪಕ್ಷಾಂತರ ಸಾಧ್ಯತೆ?
ಗೋವಾ ಕಾಂಗ್ರೆಸ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 03, 2021 | 11:35 AM

ಪಣಜಿ: ಹಿರಿಯ ನಾಯಕ ಲುಯಿಝಿನೊ ಫಲೆರೊ (Luizinho Faleiro) ತೃಣಮೂಲ ಕಾಂಗ್ರೆಸ್ (TMC) ಗೆ ಸೇರಿದ ನಂತರ 40 ಸದಸ್ಯರ ವಿಧಾನಸಭೆಯಲ್ಲಿ ಕೇವಲ ನಾಲ್ಕು ಶಾಸಕರು ಉಳಿದಿದ್ದಾರೆ. ಅದೇ ವೇಳೆ ಗೋವಾದಲ್ಲಿ ಕಾಂಗ್ರೆಸ್​​ನ ಇನ್ನೊಬ್ಬ ಶಾಸಕರು ಪಕ್ಷಾಂತರಕ್ಕೆ ಮುಂದಾಗುವ ಸಾಧ್ಯತೆ ಇದೆ ಎಂದು ದಿ ಇಂಡಿಯನ್ ಎಕ್ಸ್​​​ಪ್ರೆಸ್ ವರದಿ ಮಾಡಿದೆ.  ಕರ್ಟೋರಿಮ್‌ನ ಕಾಂಗ್ರೆಸ್ ಶಾಸಕ ಅಲೆಕ್ಸೊ ರೆಜಿನಾಲ್ಡೊ ಲಾರೆಂಕೊ ( Aleixo Reginaldo Lourenco) ಅವರು ಆಮ್ ಆದ್ಮಿ ಪಕ್ಷ (AAP) ಸೇರುವ ಬಗ್ಗೆ ಯೋಚಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಎಪಿ ರಾಜ್ಯದಲ್ಲಿ ಒಂದು ವರ್ಷದಿಂದ ಬಿರುಸಿನ ಪ್ರಚಾರ ನಡೆಸುತ್ತಿದೆ. ಪಶ್ಚಿಮ ಬಂಗಾಳವನ್ನು ಮೀರಿ ಪಕ್ಷವು ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತಿರುವುದರಿಂದ ಟಿಎಂಸಿ ಗೋವಾದ ಚುನಾವಣಾ ರಾಜಕೀಯದಲ್ಲಿ ಪ್ರವೇಶಿಸಿದೆ.

ಲಾರೆಂಕೊ ಎಎಪಿಗೆ ಹೋಗುವ ಸಾಧ್ಯತೆಯ ಬಗ್ಗೆ ಕೇಳಿದಾಗ, ಎಐಸಿಸಿ ಗೋವಾದ  ಉಸ್ತುವಾರಿ  ವಹಿಸಿರುವ ದಿನೇಶ್  ಗುಂಡು ರಾವ್ ಅವರು “ಹೆಚ್ಚಿನ ಗೊಂದಲವನ್ನು ಸೃಷ್ಟಿಸಲು ಬಯಸುವ ಜನರಿಂದ ಎಲ್ಲಾ ರೀತಿಯ ವದಂತಿಗಳು ಹರಡುತ್ತಿವೆ. ಇಂಥಾ ವದಂತಿಗಳಿಗೆ ಪ್ರತಿಕ್ರಿಯಿಸಬೇಕು ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ.

ಫಲೆರೊ ನಿರ್ಗಮನದ ಕೆಲವು ದಿನಗಳ ಮುಂಚೆ, ಕಾಂಗ್ರೆಸ್ ಅವರ ನಿರ್ಗಮನದ ಮಾತನ್ನು ನಿರಾಕರಿಸಿದ್ದು ಅದನ್ನು “ವದಂತಿಗಳು” ಎಂದೇ ಹೇಳಿತ್ತು.

ತನ್ನ ಕ್ಷೇತ್ರದಲ್ಲಿ ನಡೆದ ಕೆಲಸದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸೆಪ್ಟೆಂಬರ್ 30 ರಂದು ಪೋಸ್ಟ್ ಮಾಡಿದ್ದ ಲಾರೆಂಕೊ “ನಮ್ಮ ಕೆಲಸ ಮುಂದುವರಿಯುತ್ತದೆ, ಯಾವುದೇ ರಾಜಕೀಯ ವಿಷಯವಲ್ಲ, ಅಥವಾ ನನ್ನ ಪಕ್ಷದ ವಿಷಯಗಳಿಂದ ದೂರವಿಡಲಾಗಿದೆ. ಮೊದಲು ನಮ್ಮ ಜನರು ಮತ್ತು ನಮ್ಮ ಕರ್ತವ್ಯ. ದೇವರ ಆಶೀರ್ವಾದ ನಮ್ಮೊಂದಿಗೆ ಇದೆ ಮತ್ತು ಸರಿಯಾದ ಸಮಯದಲ್ಲಿ ನಾವು ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ, ಏಕೆಂದರೆ ಕೆಲವು ಕೊಳಕು ನಾಯಕರು ನಮ್ಮ ಪ್ರಗತಿಯನ್ನು ನಾಶಪಡಿಸಿದರು.ಈಗ ಒಳ್ಳೆಯ ನಿರ್ಧಾರಗಳಿಗೆ ಸಮಯ ಇಲ್ಲ ವೈಯಕ್ತಿಕ ಅಜೆಂಡಾ ಆದರೆ ನನ್ನ ಜನರಿಗೆ ಉತ್ತಮವಾದುದನ್ನುನೀಡುವುದು ನಮ್ಮ ಧ್ಯೇಯವಾಕ್ಯವಾಗಿದೆ ಎಂದಿದ್ದರು.

ಏತನ್ಮಧ್ಯೆ, ಭಾರತದ ಮಾಜಿ ಫುಟ್ಬಾಲ್ ಆಟಗಾರ ಡೆನ್ಜಿಲ್ ಫ್ರಾಂಕೊ ಮತ್ತು ಗೋವಾ ಬಾಕ್ಸಿಂಗ್ ಅಸೋಸಿಯೇಶನ್ ಉಪಾಧ್ಯಕ್ಷ ಲೆನ್ನಿ ಡಿ’ಗಾಮ ಶನಿವಾರ ಟಿಎಂಸಿಗೆ ಸೇರಿದರು. ತೃಣಮೂಲ ಶಾಸಕ , , ಭಾರತದ ಮಾಜಿ ಕ್ರಿಕೆಟಿಗ ಹಾಗೂ ಬಂಗಾಳ ಸಚಿವ ಮನೋಜ್ ತಿವಾರಿ ಹಾಗೂ ಭಾರತದ ಮಾಜಿ ಫುಟ್ಬಾಲ್ ಆಟಗಾರ, ಪಕ್ಷದ ಮಾಜಿ ಸಂಸದ ಪ್ರಸೂನ್ ಬ್ಯಾನರ್ಜಿ ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಡಿ’ಗಾಮ ಭಾರತದ ಏಕೈಕ ಬಾಕ್ಸಿಂಗ್ ಅಧಿಕಾರಿಯಾಗಿದ್ದರು.

ಇದನ್ನೂ ಓದಿ:  ಡ್ರಗ್ಸ್​ ಪಾರ್ಟಿ: ಎನ್​ಸಿಬಿ ಬಲೆಗೆ ಬಿದ್ದ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​

ಇದನ್ನೂ ಓದಿ:  ರೇವ್​ ಪಾರ್ಟಿ ಮೇಲೆ ದಾಳಿ: ಬಾಲಿವುಡ್ ಸೂಪರ್​ ಸ್ಟಾರ್​ ನಟನ ಪುತ್ರ ಎನ್​ಸಿಬಿ ವಶಕ್ಕೆ

ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ