AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಕೇರಳದಲ್ಲಿ ಎಸ್​ಡಿಪಿಐ ಬೆಂಬಲ ತಿರಸ್ಕರಿಸಿದ ಕಾಂಗ್ರೆಸ್​

ಕೇರಳದಲ್ಲಿ ಎಸ್​ಡಿಪಿಐ ಬೆಂಬಲವನ್ನು ತಿರಸ್ಕರಿಸಲಾಗಿದೆ ಎಂದು ಕಾಂಗ್ರೆಸ್​ ಸ್ಪಷ್ಟಪಡಿಸಿದೆ. ಕೇರಳದ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿವಾದಗಳ ಸುಳಿಯಲ್ಲಿ ಸಿಲುಕಿದ್ದಾರೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ವಿಭಾಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲವನ್ನು ಕಾಂಗ್ರೆಸ್ ಸ್ವೀಕರಿಸಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದರು.

ಲೋಕಸಭಾ ಚುನಾವಣೆ: ಕೇರಳದಲ್ಲಿ ಎಸ್​ಡಿಪಿಐ ಬೆಂಬಲ ತಿರಸ್ಕರಿಸಿದ ಕಾಂಗ್ರೆಸ್​
ಸತೀಶನ್
ನಯನಾ ರಾಜೀವ್
|

Updated on: Apr 05, 2024 | 8:23 AM

Share

ಕೇರಳದಲ್ಲಿ ಎಸ್​ಡಿಪಿಐ ಬೆಂಬಲವನ್ನು ತಿರಸ್ಕರಿಸಲಾಗಿದೆ ಎಂದು ಕಾಂಗ್ರೆಸ್​ ಸ್ಪಷ್ಟಪಡಿಸಿದೆ. ಕೇರಳದ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿವಾದಗಳ ಸುಳಿಯಲ್ಲಿ ಸಿಲುಕಿದ್ದಾರೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ವಿಭಾಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲವನ್ನು ಕಾಂಗ್ರೆಸ್ ಸ್ವೀಕರಿಸಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದರು.

ಆದರೆ, ಈಗ ಕಾಂಗ್ರೆಸ್​ ಎಸ್‌ಡಿಪಿಐ ಬೆಂಬಲವನ್ನು ಸ್ವೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷವನ್ನು ಬೆಂಬಲಿಸುವುದಾಗಿ ಎಸ್​ಡಿಪಿಐ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್​ ಈ ಹೇಳಿಕೆ ಬಿಡುಗಡೆ ಮಾಡಿದೆ.

ಕಾಂಗ್ರೆಸ್​ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದ ಎರಡನ್ನೂ ವಿರೋಧಿಸುತ್ತದೆ. ಎಸ್​ಡಿಪಿಐ ನೀಡಿದ ಬೆಂಬಲವೂ ಅದೇ ರೀತಿಯಲ್ಲಿದೆ. ಯುಡಿಎಫ್ ಅಲ್ಪಸಂಖ್ಯಾತ ಉಗ್ರವಾದ ಮತ್ತು ಬಹುಸಂಖ್ಯಾತ ಉಗ್ರವಾದ ಎರಡಕ್ಕೂ ವಿರುದ್ಧವಾಗಿದೆ. ಅವರ ಬೆಂಬಲವನ್ನು ನಾವು ತೆಗೆದುಕೊಳ್ಳುವುದಿಲ್ಲ. ಆ ನಿಲುವು ಎಸ್‌ಡಿಪಿಐಗೂ ಅನ್ವಯಿಸುತ್ತದೆ.

ಮತ್ತಷ್ಟು ಓದಿ: ‘ಭಾರತ್ ಮಾತಾ ಕೀ ಜೈ’, ‘ಜೈ ಹಿಂದ್’ ಘೋಷಣೆ ಮುಸ್ಲಿಮರ ಕೊಡುಗೆ: ಕೇರಳ ಸಿಎಂ ಪಿಣರಾಯಿ ವಿಜಯನ್

ಎಸ್‌ಡಿಪಿಐ ಬೆಂಬಲ ನೀಡಿದಾಗ ನಾವು ಅದನ್ನು ಸ್ವೀಕರಿಸಲಿಲ್ಲ ಅಥವಾ ಸ್ವಾಗತಿಸಲಿಲ್ಲ. ನಾವು ಈ ವಿಷಯವನ್ನು ಚರ್ಚಿಸಿದ್ದೇವೆ ಮತ್ತು ಅದನ್ನು ತಿರಸ್ಕರಿಸಲು ನಿರ್ಧರಿಸಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ವಿಡಿ ಸತೀಶನ್ ಹೇಳಿದ್ದಾರೆ.

ಕೇರಳ ರಾಜ್ಯದಲ್ಲಿ 20 ಸಂಸದೀಯ ಕ್ಷೇತ್ರಗಳಿವೆ. ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್ ಡಿಎಫ್ ಮೈತ್ರಿಕೂಟ, ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ದೇಶದಲ್ಲಿ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಮುಖವೆಂದು ಪರಿಗಣಿಸಲಾದ ಎಸ್‌ಟಿಪಿಐ ಕಾಂಗ್ರೆಸ್‌ಗೆ ಬೆಂಬಲ ನೀಡಿರುವುದನ್ನು ಸಿಪಿಎಂ ಲೇವಡಿ ಮಾಡಿದೆ. ಮತ್ತು ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕೂಡ ಈ ವಿಷಯವನ್ನು ಕೈಗೆತ್ತಿಕೊಂಡು ಪ್ರಚಾರ ಆರಂಭಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ