Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ: ಕೇರಳದಲ್ಲಿ ಎಸ್​ಡಿಪಿಐ ಬೆಂಬಲ ತಿರಸ್ಕರಿಸಿದ ಕಾಂಗ್ರೆಸ್​

ಕೇರಳದಲ್ಲಿ ಎಸ್​ಡಿಪಿಐ ಬೆಂಬಲವನ್ನು ತಿರಸ್ಕರಿಸಲಾಗಿದೆ ಎಂದು ಕಾಂಗ್ರೆಸ್​ ಸ್ಪಷ್ಟಪಡಿಸಿದೆ. ಕೇರಳದ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿವಾದಗಳ ಸುಳಿಯಲ್ಲಿ ಸಿಲುಕಿದ್ದಾರೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ವಿಭಾಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲವನ್ನು ಕಾಂಗ್ರೆಸ್ ಸ್ವೀಕರಿಸಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದರು.

ಲೋಕಸಭಾ ಚುನಾವಣೆ: ಕೇರಳದಲ್ಲಿ ಎಸ್​ಡಿಪಿಐ ಬೆಂಬಲ ತಿರಸ್ಕರಿಸಿದ ಕಾಂಗ್ರೆಸ್​
ಸತೀಶನ್
Follow us
ನಯನಾ ರಾಜೀವ್
|

Updated on: Apr 05, 2024 | 8:23 AM

ಕೇರಳದಲ್ಲಿ ಎಸ್​ಡಿಪಿಐ ಬೆಂಬಲವನ್ನು ತಿರಸ್ಕರಿಸಲಾಗಿದೆ ಎಂದು ಕಾಂಗ್ರೆಸ್​ ಸ್ಪಷ್ಟಪಡಿಸಿದೆ. ಕೇರಳದ ವಯನಾಡಿನಿಂದ ನಾಮಪತ್ರ ಸಲ್ಲಿಸಿದ ನಂತರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿವಾದಗಳ ಸುಳಿಯಲ್ಲಿ ಸಿಲುಕಿದ್ದಾರೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ವಿಭಾಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲವನ್ನು ಕಾಂಗ್ರೆಸ್ ಸ್ವೀಕರಿಸಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದರು.

ಆದರೆ, ಈಗ ಕಾಂಗ್ರೆಸ್​ ಎಸ್‌ಡಿಪಿಐ ಬೆಂಬಲವನ್ನು ಸ್ವೀಕರಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಕೇರಳದಲ್ಲಿ ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷವನ್ನು ಬೆಂಬಲಿಸುವುದಾಗಿ ಎಸ್​ಡಿಪಿಐ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್​ ಈ ಹೇಳಿಕೆ ಬಿಡುಗಡೆ ಮಾಡಿದೆ.

ಕಾಂಗ್ರೆಸ್​ ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದ ಎರಡನ್ನೂ ವಿರೋಧಿಸುತ್ತದೆ. ಎಸ್​ಡಿಪಿಐ ನೀಡಿದ ಬೆಂಬಲವೂ ಅದೇ ರೀತಿಯಲ್ಲಿದೆ. ಯುಡಿಎಫ್ ಅಲ್ಪಸಂಖ್ಯಾತ ಉಗ್ರವಾದ ಮತ್ತು ಬಹುಸಂಖ್ಯಾತ ಉಗ್ರವಾದ ಎರಡಕ್ಕೂ ವಿರುದ್ಧವಾಗಿದೆ. ಅವರ ಬೆಂಬಲವನ್ನು ನಾವು ತೆಗೆದುಕೊಳ್ಳುವುದಿಲ್ಲ. ಆ ನಿಲುವು ಎಸ್‌ಡಿಪಿಐಗೂ ಅನ್ವಯಿಸುತ್ತದೆ.

ಮತ್ತಷ್ಟು ಓದಿ: ‘ಭಾರತ್ ಮಾತಾ ಕೀ ಜೈ’, ‘ಜೈ ಹಿಂದ್’ ಘೋಷಣೆ ಮುಸ್ಲಿಮರ ಕೊಡುಗೆ: ಕೇರಳ ಸಿಎಂ ಪಿಣರಾಯಿ ವಿಜಯನ್

ಎಸ್‌ಡಿಪಿಐ ಬೆಂಬಲ ನೀಡಿದಾಗ ನಾವು ಅದನ್ನು ಸ್ವೀಕರಿಸಲಿಲ್ಲ ಅಥವಾ ಸ್ವಾಗತಿಸಲಿಲ್ಲ. ನಾವು ಈ ವಿಷಯವನ್ನು ಚರ್ಚಿಸಿದ್ದೇವೆ ಮತ್ತು ಅದನ್ನು ತಿರಸ್ಕರಿಸಲು ನಿರ್ಧರಿಸಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಮತ್ತು ಹಿರಿಯ ಕಾಂಗ್ರೆಸ್ ಶಾಸಕ ವಿಡಿ ಸತೀಶನ್ ಹೇಳಿದ್ದಾರೆ.

ಕೇರಳ ರಾಜ್ಯದಲ್ಲಿ 20 ಸಂಸದೀಯ ಕ್ಷೇತ್ರಗಳಿವೆ. ಆಡಳಿತಾರೂಢ ಸಿಪಿಎಂ ನೇತೃತ್ವದ ಎಲ್ ಡಿಎಫ್ ಮೈತ್ರಿಕೂಟ, ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ದೇಶದಲ್ಲಿ ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಮುಖವೆಂದು ಪರಿಗಣಿಸಲಾದ ಎಸ್‌ಟಿಪಿಐ ಕಾಂಗ್ರೆಸ್‌ಗೆ ಬೆಂಬಲ ನೀಡಿರುವುದನ್ನು ಸಿಪಿಎಂ ಲೇವಡಿ ಮಾಡಿದೆ. ಮತ್ತು ರಾಷ್ಟ್ರಮಟ್ಟದಲ್ಲಿ ಬಿಜೆಪಿ ಕೂಡ ಈ ವಿಷಯವನ್ನು ಕೈಗೆತ್ತಿಕೊಂಡು ಪ್ರಚಾರ ಆರಂಭಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್