ಭಾರತದ ಪರಿಸ್ಥಿತಿ ಕ್ಲಿಷ್ಟಕರವಾಗಿದೆ: ಆರ್ಥಿಕ ಸಮೀಕ್ಷೆ, ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ವಾಗ್ದಾಳಿ

ಬಜೆಟ್‌ಗೂ ಮುನ್ನ ಸರ್ಕಾರ 2023-24ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಆದರೆ ದುರದೃಷ್ಟವಶಾತ್ ಆರ್ಥಿಕ ಪರಿಸ್ಥಿತಿ ನಿರಾಶಾದಾಯಕವಾಗಿದೆ. ಆಹಾರ ಹಣದುಬ್ಬರವು ಅನಿಯಂತ್ರಿತವಾಗಿದೆ ಮತ್ತು ಗ್ರಾಮೀಣ ಭಾರತವು ಹಿಂದುಳಿದಿದೆ ಎಂದು ಅವರು ಹೇಳಿದ್ದಾರೆ.

ಭಾರತದ ಪರಿಸ್ಥಿತಿ ಕ್ಲಿಷ್ಟಕರವಾಗಿದೆ: ಆರ್ಥಿಕ ಸಮೀಕ್ಷೆ, ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ವಾಗ್ದಾಳಿ
ಜೈರಾಮ್ ರಮೇಶ್​

Updated on: Jul 23, 2024 | 9:04 AM

ಕೇಂದ್ರ ಸರ್ಕಾರ  ಮಂಡಿಸಿರುವ ಆರ್ಥಿಕ ಸಮೀಕ್ಷೆಯನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಶ್ನೆಯನ್ನು ಕೇಳಿದ್ದಾರೆ. ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಅವರು, ಅಕ್ಕಿ, ಗೋಧಿ ಅಥವಾ ರಾಗಿ, ಬೇಳೆಕಾಳುಗಳು ಮತ್ತು ಎಣ್ಣೆಕಾಳುಗಳನ್ನು ಉತ್ಪಾದಿಸುವ ಮೂಲಕ ಸಣ್ಣ ರೈತರು ಆದಾಯ ಗಳಿಸಲು ಸಾಧ್ಯವಿಲ್ಲ ಎಂದು ಅವರು ಬರೆದಿದ್ದಾರೆ. ಹಣ್ಣುಗಳು ಮತ್ತು ತರಕಾರಿಗಳು, ಮೀನುಗಾರಿಕೆ, ಕೋಳಿ, ಡೈರಿ ಸೇರಿದಂತೆ ಹೆಚ್ಚಿನ ಮೌಲ್ಯದ ಕೃಷಿಯತ್ತ ಸಾಗಬೇಕಾಗಿದೆ.

ಬಜೆಟ್‌ಗೂ ಮುನ್ನ ಸರ್ಕಾರ ಮಂಡಿಸಿದ ಆರ್ಥಿಕ ಪರಾಮರ್ಶೆಯಲ್ಲಿ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಥಿಕ ಬೆಳವಣಿಗೆ ದರ ಶೇ.6.5ರಿಂದ 7.0ರಷ್ಟಿದೆ ಎಂದು ಅಂದಾಜಿಸಲಾಗಿದೆ. ಅಲ್ಲದೆ, ಆರ್ಥಿಕತೆಯಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಅಗತ್ಯತೆಯೊಂದಿಗೆ ರಫ್ತುಗಳನ್ನು ಹೆಚ್ಚಿಸಲು ಚೀನಾದಿಂದ ಹೆಚ್ಚಿನ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಬೆಂಬಲಿಸುತ್ತದೆ.

ಆರ್ಥಿಕ ಪರಿಸ್ಥಿತಿ ನಿರಾಶಾದಾಯಕವಾಗಿದೆ
ಬಜೆಟ್‌ಗೂ ಮುನ್ನ ಸರ್ಕಾರ 2023-24ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಆದರೆ ದುರದೃಷ್ಟವಶಾತ್ ಆರ್ಥಿಕ ಪರಿಸ್ಥಿತಿ ನಿರಾಶಾದಾಯಕವಾಗಿದೆ. ಆಹಾರ ಹಣದುಬ್ಬರವು ಅನಿಯಂತ್ರಿತವಾಗಿದೆ ಮತ್ತು ಗ್ರಾಮೀಣ ಭಾರತವು ಹಿಂದುಳಿದಿದೆ ಎಂದು ಅವರು ಹೇಳಿದ್ದಾರೆ. ಆರ್ಥಿಕ ಸಮೀಕ್ಷೆಯಲ್ಲಿ ಮೋದಿ ಸರ್ಕಾರದ ರೈತ ವಿರೋಧಿ ಮನಸ್ಥಿತಿ ಬಯಲಿಗೆ ಬಂದಿದೆ ಎಂದು ಆರೋಪಿಸಿದರು.

ಮೋದಿ ಸರ್ಕಾರ ಕಾರ್ಪೊರೇಟ್‌ಗಳಿಗೆ ಉದಾರವಾಗಿದೆ
ಕಾರ್ಪೊರೇಟ್ ವಲಯಕ್ಕೆ ಮೋದಿ ಸರ್ಕಾರ ಅತ್ಯಂತ ಉದಾರವಾಗಿದೆ ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ. 1.5 ಲಕ್ಷ ಕೋಟಿ ಕಾರ್ಪೊರೇಟ್ ತೆರಿಗೆ ಕಡಿತಗೊಳಿಸಲಾಗಿದೆ ಮತ್ತು 2 ಲಕ್ಷ ಕೋಟಿ ಮೌಲ್ಯದ ಪಿಎಲ್‌ಐ ಮಾಡಲಾಗಿದೆ. ಆದರೆ ಪ್ರತಿಯಾಗಿ ಹೂಡಿಕೆ ಅಥವಾ ಉದ್ಯೋಗವನ್ನು ಪ್ರೋತ್ಸಾಹಿಸದೆ ಸರ್ಕಾರ ಈ ಔದಾರ್ಯವನ್ನು ತೋರಿದೆ.

ಮತ್ತಷ್ಟು ಓದಿ:ಸಂಸತ್​ನಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ದೇಶವು ಕೆಟ್ಟ ಆರ್ಥಿಕ ಕಾಲವನ್ನು ಎದುರಿಸುತ್ತಿದೆ
ಮುಂದಿನ 20 ವರ್ಷಗಳವರೆಗೆ ನಾವು ಪ್ರತಿ ವರ್ಷ ಸುಮಾರು 80 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಬೇಕಾಗುತ್ತದೆ ಎಂದು ಆರ್ಥಿಕ ಸಮೀಕ್ಷೆ ಹೇಳುತ್ತದೆ ಎಂದು ಅವರು ಪ್ರತಿಪಾದಿಸಿದರು. 80 ಲಕ್ಷ ಉದ್ಯೋಗಗಳ ಗುರಿಯನ್ನು ಸಾಧಿಸಲು, ಸರ್ಕಾರದ ಪ್ರಮುಖ ಆರ್ಥಿಕ ಕಾರ್ಯತಂತ್ರದಲ್ಲಿ ಒಂದು ನಿರ್ದಿಷ್ಟ ಬದಲಾವಣೆಯ ಅಗತ್ಯವಿದೆ. ಭಾರತವು ಹಲವು ವರ್ಷಗಳಲ್ಲಿ ಅತ್ಯಂತ ಅನಿಶ್ಚಿತ ಮತ್ತು ಕಷ್ಟಕರವಾದ ಆರ್ಥಿಕ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಅವರು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:03 am, Tue, 23 July 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us