AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲ್ಮೆಟ್​ ಇಲ್ಲ, ಹ್ಯಾಂಡಲ್​ ಮೇಲೂ ಕೈ ಇಲ್ಲ ಬುಲೆಟ್​ ಬೈಕ್​ನಲ್ಲಿ ಕಾಂಗ್ರೆಸ್​ ನಾಯಕ ಅಧೀರ್ ರಂಜನ್ ಚೌಧರಿ ಸ್ಟಂಟ್

ಹೆಲ್ಮೆಟ್ ಇಲ್ಲ, ಹ್ಯಾಂಡಲ್ ಮೇಲೆ ಕೈ ಕೂಡ ಇರಲಿಲ್ಲ, ಬುಲೆಟ್ ಬೈಕ್​ನಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ(Adhir Ranjan Chowdhuri) ಸ್ಟಂಟ್​ ಮಾಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಚೌಧರಿ ಅವರು ಪಶ್ಚಿಮ ಬಂಗಾಳದ ತಮ್ಮ ವಿಧಾನಸಭಾ ಕ್ಷೇತ್ರವಾದ ಬಹರಂಪುರದಲ್ಲಿ ಬೈಕ್ ಜಾಥಾ ನಡೆಸಿದರು. ಆ ಸಮಯದಲ್ಲಿ ಹೆಲ್ಮೆಟ್​ ಧರಿಸಿರಲಿಲ್ಲ, ಹಲವು ಬಾರಿ ಬೈಕ್​ನ ಹ್ಯಾಂಡಲ್​ ಬಿಟ್ಟು ಗಾಡಿ ಓಡಿಸಿ ಸ್ಟಂಟ್ ಮಾಡಿದ್ದರು.

ಹೆಲ್ಮೆಟ್​ ಇಲ್ಲ, ಹ್ಯಾಂಡಲ್​ ಮೇಲೂ ಕೈ ಇಲ್ಲ ಬುಲೆಟ್​ ಬೈಕ್​ನಲ್ಲಿ ಕಾಂಗ್ರೆಸ್​ ನಾಯಕ ಅಧೀರ್ ರಂಜನ್ ಚೌಧರಿ ಸ್ಟಂಟ್
ಅಧೀರ್ ರಂಜನ್ ಚೌಧರಿImage Credit source: Manorama
Follow us
ನಯನಾ ರಾಜೀವ್
|

Updated on: Oct 17, 2023 | 9:55 AM

ಹೆಲ್ಮೆಟ್ ಇಲ್ಲ, ಹ್ಯಾಂಡಲ್ ಮೇಲೆ ಕೈ ಕೂಡ ಇರಲಿಲ್ಲ, ಬುಲೆಟ್​ ಬೈಕ್​ನಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ(Adhir Ranjan Chowdhuri) ಸ್ಟಂಟ್​ ಮಾಡಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಚೌಧರಿ ಅವರು ಪಶ್ಚಿಮ ಬಂಗಾಳದ ತಮ್ಮ ವಿಧಾನಸಭಾ ಕ್ಷೇತ್ರವಾದ ಬಹರಂಪುರದಲ್ಲಿ ಬೈಕ್ ಜಾಥಾ ನಡೆಸಿದರು. ಆ ಸಮಯದಲ್ಲಿ ಹೆಲ್ಮೆಟ್​ ಧರಿಸಿರಲಿಲ್ಲ, ಹಲವು ಬಾರಿ ಬೈಕ್​ನ ಹ್ಯಾಂಡಲ್​ ಬಿಟ್ಟು ಗಾಡಿ ಓಡಿಸಿ ಸ್ಟಂಟ್ ಮಾಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ, ರಂಜನ್ ಚೌಧರಿ ಸಂಚಾರಿ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಲಾಗಿದೆ. ಪೊಲೀಸರು ದಂಡ ವಿಧಿಸಿದರೆ ಯಾವುದೇ ತೊಂದರೆ ಇಲ್ಲ. ಆದರೆ ನಾನು ಬೈಕ್ ಚಲಾಯಿಸುತ್ತಿದ್ದ ಸ್ಥಳದಲ್ಲಿ ಯಾರೂ ಇರಲಿಲ್ಲ. ನಾನು ಬೈಕ್ ಓಡಿಸುತ್ತಿದ್ದ ಜಾಗಕ್ಕೂ, ಬಹಳ ದಿನಗಳ ನಂತರ ಬೈಕ್ ಓಡಿಸುತ್ತಿದ್ದ ಜಾಗಕ್ಕೂ ನನ್ನ ನೆನಪುಗಳು ತಳಕು ಹಾಕಿಕೊಂಡಿವೆ ಎಂದು ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಮತ್ತಷ್ಟು ಓದಿ: ವಿಧಾನಸಭಾ ಚುನಾವಣೆ: ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಅಧೀರ್ ಜೊತೆಗಿದ್ದ ಬೆರಳೆಣಿಕೆಯಷ್ಟು ಸವಾರರು ಮಾತ್ರ ಹೆಲ್ಮೆಟ್ ಧರಿಸಿದ್ದರೆ, ಅಧೀರ್ ಟೋಪಿ ಧರಿಸಿದ್ದರು. ಅಧೀರ್ ತನ್ನ ರಾಯಲ್ ಎನ್‌ಫೀಲ್ಡ್‌ನಲ್ಲಿ ಸುಮಾರು 11 ಕಿ.ಮೀ ಸವಾರಿ ಮಾಡಿದ್ದಾರೆ, ರಸ್ತೆ ಬದಿಯಲ್ಲಿ ಹೋಗುತ್ತಿದ್ದವರಿಗೆ ಕೈ ಬೀಸುತ್ತಿದ್ದರು.

ಲೋಕಸಭೆ ಚುನಾವಣೆ ಹತ್ತಿರದಲ್ಲಿದೆ, ಮುರ್ಷಿದಾಬಾದ್​ನಲ್ಲಿ ಅಧೀರ್​ ಸಾಕಷ್ಟು ಜನಪ್ರಿಯರಾಗಿದ್ದಾರೆ. ಹೀಗಿರುವಾಗ ಈ ತರಹ ಬೈಕ್​ ರೈಡಿಂಗ್ ಮಾಡಬಾರದಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ