AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಪ್ರತಿಪಕ್ಷ ನಾಯಕಿ, ಕಾಂಗ್ರೆಸ್​ನ ಹಿರಿಯ ರಾಜಕಾರಣಿ ಡಾ. ಇಂದಿರಾ ಹೃದಯೇಶ್​ ನಿಧನ; ಸಭೆಗೆ ತೆರಳಿದ್ದವರು ಕೊನೆಯುಸಿರೆಳೆದರು

Indira Hridayesh Death: ಉತ್ತರಾಖಂಡ ರಾಜಕಾರಣದಲ್ಲಿ ಕಳೆದ ಎರಡು ದಶಕಗಳಿಂದಲೂ ತೊಡಗಿಸಿಕೊಂಡಿದ್ದ ಕಾಂಗ್ರೆಸ್​ನ ಪ್ರಮುಖ ನಾಯಕಿಯಾಗಿದ್ದ ಡಾ. ಇಂದಿರಾ ಹೃದಯೇಶ್​ರಿಗೆ 80 ವರ್ಷ ವಯಸ್ಸಾಗಿತ್ತು. ರಾಜಕೀಯದಲ್ಲಿ ಸಾಕಷ್ಟು ಪಕ್ವವಾಗಿದ್ದ ಅವರು ಸದಾ ಗಾಂಭೀರ್ಯದಿಂದ, ತಾಳ್ಮೆಯಿಂದ ಇರುತ್ತಿದ್ದರು.

ಉತ್ತರಾಖಂಡ ಪ್ರತಿಪಕ್ಷ ನಾಯಕಿ, ಕಾಂಗ್ರೆಸ್​ನ ಹಿರಿಯ ರಾಜಕಾರಣಿ ಡಾ. ಇಂದಿರಾ ಹೃದಯೇಶ್​ ನಿಧನ; ಸಭೆಗೆ ತೆರಳಿದ್ದವರು ಕೊನೆಯುಸಿರೆಳೆದರು
ಇಂದಿರಾ ಹೃದಯೇಶ್
TV9 Web
| Edited By: |

Updated on: Jun 13, 2021 | 1:46 PM

Share

ದೆಹಲಿ: ಕಾಂಗ್ರೆಸ್​ನ ಹಿರಿಯ ನಾಯಕಿ, ಉತ್ತರಾಖಂಡ್​ ಪ್ರತಿಪಕ್ಷ ನಾಯಕಿ ಡಾ. ಇಂದಿರಾ ಹೃದಯೇಶ್​ ಇಂದು ನಿಧನರಾದರು. ದೆಹಲಿಯಲ್ಲಿರುವ ಉತ್ತರಾಖಂಡ ಭವನದಲ್ಲಿದ್ದ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ನಡೆಯಲಿದ್ದ ಕಾಂಗ್ರೆಸ್​ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಡಾ. ಇಂದಿರಾ, ಉತ್ತರಾಖಂಡ ಭವನದ ರೂಂ ನಂಬರ್​ 303ರಲ್ಲಿ ತಂಗಿದ್ದರು. ಅವರ ಮೃತದೇಹವನ್ನು ಉತ್ತರಾಖಂಡಕ್ಕೆ ತರಲು ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಲಾಗುತ್ತಿದೆ.

ಉತ್ತರಾಖಂಡ ರಾಜಕಾರಣದಲ್ಲಿ ಕಳೆದ ಎರಡು ದಶಕಗಳಿಂದಲೂ ತೊಡಗಿಸಿಕೊಂಡಿದ್ದ ಕಾಂಗ್ರೆಸ್​ನ ಪ್ರಮುಖ ನಾಯಕಿಯಾಗಿದ್ದ ಡಾ. ಇಂದಿರಾ ಹೃದಯೇಶ್​ರಿಗೆ 80 ವರ್ಷ ವಯಸ್ಸಾಗಿತ್ತು. ರಾಜಕೀಯದಲ್ಲಿ ಸಾಕಷ್ಟು ಪಕ್ವವಾಗಿದ್ದ ಅವರು ಸದಾ ಗಾಂಭೀರ್ಯದಿಂದ, ತಾಳ್ಮೆಯಿಂದ ಇರುತ್ತಿದ್ದರು. ಅವರ ಈ ಸ್ವಭಾವದಿಂದಾಗಿ ಬೇರೆ ಪಕ್ಷದ ನಾಯಕರಿಂದಲೂ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಅವರ ಮರಣದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಉತ್ತರಾಖಂಡ ಕಾಂಗ್ರೆಸ್​ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶನಿವಾರ ದೆಹಲಿಗೆ ತೆರಳುವುದಕ್ಕೂ ಮೊದಲು ಡಾ. ಇಂದಿರಾ ಹೃದಯೇಶ್​ ಹಣದುಬ್ಬರ ವಿರೋಧಿಸಿ ಹಲ್ದ್ವಾನಿಯಲ್ಲಿ ಕಾಂಗ್ರೆಸ್​ ನಡೆಸಿದ ಪ್ರತಿಭಟನೆಯಲ್ಲೂ ಪಾಲ್ಗೊಂಡಿದ್ದರು. ಮುಂದಿನ ವರ್ಷ ನಡೆಯಲಿರುವ ಉತ್ತರಾಖಂಡ ವಿಧಾನಸಭೆ ಚುನಾವಣೆಯ ನಿಮಿತ್ತ ಕಾಂಗ್ರೆಸ್​ನ ಕಾರ್ಯತಂತ್ರ ಅಭಿಯಾನದ ಪ್ರಮುಖ ವ್ಯಕ್ತಿಯಾಗಿದ್ದ ಇಂದಿರಾ ಅವರು, ಇದಕ್ಕೆ ಸಂಬಂಧಪಟ್ಟ ಸಭೆಯಲ್ಲಿ ಪಾಲ್ಗೊಳ್ಳಲೆಂದೇ ದೆಹಲಿಗೆ ತೆರಳಿದ್ದರು.

ಇದನ್ನೂ ಓದಿ: ಯುವ ಜನರಿಗೆ ಪಕೋಡ ಮಾರಿ ಅಂತಾ ಹೇಳಿದ್ರು, ಈಗ ಎಣ್ಣೆ ಬೆಲೆನೂ ಜಾಸ್ತಿಯಾಗಿದೆ.. ಕೇಂದ್ರದ ವಿರುದ್ಧ ಡಿಕೆಶಿ ಆಕ್ರೋಶ

Congress Leader Indira Hridayesh dies of cardiacarrest In Delhi

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?