AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಪ್ರತಿಪಕ್ಷ ನಾಯಕಿ, ಕಾಂಗ್ರೆಸ್​ನ ಹಿರಿಯ ರಾಜಕಾರಣಿ ಡಾ. ಇಂದಿರಾ ಹೃದಯೇಶ್​ ನಿಧನ; ಸಭೆಗೆ ತೆರಳಿದ್ದವರು ಕೊನೆಯುಸಿರೆಳೆದರು

Indira Hridayesh Death: ಉತ್ತರಾಖಂಡ ರಾಜಕಾರಣದಲ್ಲಿ ಕಳೆದ ಎರಡು ದಶಕಗಳಿಂದಲೂ ತೊಡಗಿಸಿಕೊಂಡಿದ್ದ ಕಾಂಗ್ರೆಸ್​ನ ಪ್ರಮುಖ ನಾಯಕಿಯಾಗಿದ್ದ ಡಾ. ಇಂದಿರಾ ಹೃದಯೇಶ್​ರಿಗೆ 80 ವರ್ಷ ವಯಸ್ಸಾಗಿತ್ತು. ರಾಜಕೀಯದಲ್ಲಿ ಸಾಕಷ್ಟು ಪಕ್ವವಾಗಿದ್ದ ಅವರು ಸದಾ ಗಾಂಭೀರ್ಯದಿಂದ, ತಾಳ್ಮೆಯಿಂದ ಇರುತ್ತಿದ್ದರು.

ಉತ್ತರಾಖಂಡ ಪ್ರತಿಪಕ್ಷ ನಾಯಕಿ, ಕಾಂಗ್ರೆಸ್​ನ ಹಿರಿಯ ರಾಜಕಾರಣಿ ಡಾ. ಇಂದಿರಾ ಹೃದಯೇಶ್​ ನಿಧನ; ಸಭೆಗೆ ತೆರಳಿದ್ದವರು ಕೊನೆಯುಸಿರೆಳೆದರು
ಇಂದಿರಾ ಹೃದಯೇಶ್
TV9 Web
| Updated By: Lakshmi Hegde|

Updated on: Jun 13, 2021 | 1:46 PM

Share

ದೆಹಲಿ: ಕಾಂಗ್ರೆಸ್​ನ ಹಿರಿಯ ನಾಯಕಿ, ಉತ್ತರಾಖಂಡ್​ ಪ್ರತಿಪಕ್ಷ ನಾಯಕಿ ಡಾ. ಇಂದಿರಾ ಹೃದಯೇಶ್​ ಇಂದು ನಿಧನರಾದರು. ದೆಹಲಿಯಲ್ಲಿರುವ ಉತ್ತರಾಖಂಡ ಭವನದಲ್ಲಿದ್ದ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ನಡೆಯಲಿದ್ದ ಕಾಂಗ್ರೆಸ್​ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದ ಡಾ. ಇಂದಿರಾ, ಉತ್ತರಾಖಂಡ ಭವನದ ರೂಂ ನಂಬರ್​ 303ರಲ್ಲಿ ತಂಗಿದ್ದರು. ಅವರ ಮೃತದೇಹವನ್ನು ಉತ್ತರಾಖಂಡಕ್ಕೆ ತರಲು ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಲಾಗುತ್ತಿದೆ.

ಉತ್ತರಾಖಂಡ ರಾಜಕಾರಣದಲ್ಲಿ ಕಳೆದ ಎರಡು ದಶಕಗಳಿಂದಲೂ ತೊಡಗಿಸಿಕೊಂಡಿದ್ದ ಕಾಂಗ್ರೆಸ್​ನ ಪ್ರಮುಖ ನಾಯಕಿಯಾಗಿದ್ದ ಡಾ. ಇಂದಿರಾ ಹೃದಯೇಶ್​ರಿಗೆ 80 ವರ್ಷ ವಯಸ್ಸಾಗಿತ್ತು. ರಾಜಕೀಯದಲ್ಲಿ ಸಾಕಷ್ಟು ಪಕ್ವವಾಗಿದ್ದ ಅವರು ಸದಾ ಗಾಂಭೀರ್ಯದಿಂದ, ತಾಳ್ಮೆಯಿಂದ ಇರುತ್ತಿದ್ದರು. ಅವರ ಈ ಸ್ವಭಾವದಿಂದಾಗಿ ಬೇರೆ ಪಕ್ಷದ ನಾಯಕರಿಂದಲೂ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಅವರ ಮರಣದಿಂದ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಉತ್ತರಾಖಂಡ ಕಾಂಗ್ರೆಸ್​ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಶನಿವಾರ ದೆಹಲಿಗೆ ತೆರಳುವುದಕ್ಕೂ ಮೊದಲು ಡಾ. ಇಂದಿರಾ ಹೃದಯೇಶ್​ ಹಣದುಬ್ಬರ ವಿರೋಧಿಸಿ ಹಲ್ದ್ವಾನಿಯಲ್ಲಿ ಕಾಂಗ್ರೆಸ್​ ನಡೆಸಿದ ಪ್ರತಿಭಟನೆಯಲ್ಲೂ ಪಾಲ್ಗೊಂಡಿದ್ದರು. ಮುಂದಿನ ವರ್ಷ ನಡೆಯಲಿರುವ ಉತ್ತರಾಖಂಡ ವಿಧಾನಸಭೆ ಚುನಾವಣೆಯ ನಿಮಿತ್ತ ಕಾಂಗ್ರೆಸ್​ನ ಕಾರ್ಯತಂತ್ರ ಅಭಿಯಾನದ ಪ್ರಮುಖ ವ್ಯಕ್ತಿಯಾಗಿದ್ದ ಇಂದಿರಾ ಅವರು, ಇದಕ್ಕೆ ಸಂಬಂಧಪಟ್ಟ ಸಭೆಯಲ್ಲಿ ಪಾಲ್ಗೊಳ್ಳಲೆಂದೇ ದೆಹಲಿಗೆ ತೆರಳಿದ್ದರು.

ಇದನ್ನೂ ಓದಿ: ಯುವ ಜನರಿಗೆ ಪಕೋಡ ಮಾರಿ ಅಂತಾ ಹೇಳಿದ್ರು, ಈಗ ಎಣ್ಣೆ ಬೆಲೆನೂ ಜಾಸ್ತಿಯಾಗಿದೆ.. ಕೇಂದ್ರದ ವಿರುದ್ಧ ಡಿಕೆಶಿ ಆಕ್ರೋಶ

Congress Leader Indira Hridayesh dies of cardiacarrest In Delhi

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ