AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NSA ಅಜಿತ್ ದೋವಲ್ ಪುತ್ರ ವಿವೇಕ್ ದೋವಲ್​ಗೆ Sorry ಎಂದ ಹಿರಿಯ ಕಾಂಗ್ರೆಸ್ಸಿಗ ಜೈರಾಮ್ ರಮೇಶ್

ಕಳೆದ ವರ್ಷ, ಜೈರಾಮ್ ರಮೇಶ್ ಹಾಗೂ ಕ್ಯಾರವಾನ್ ಮ್ಯಾಗಜಿನ್ ವಿರುದ್ಧ ವಿವೇಕ್ ದೋವಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಬಗ್ಗೆ ಕ್ಷಮೆ ಕೇಳಿರುವ ಜೈರಾಮ್ ರಮೇಶ್, ಅಂದು ಚುನಾವಣಾ ಸನ್ನಿವೇಶದ ಬಿಸಿಯಲ್ಲಿ ಹಾಗೆ ಮಾತಾಡಿದ್ದೆ ಎಂದಿದ್ದಾರೆ.

NSA ಅಜಿತ್ ದೋವಲ್ ಪುತ್ರ ವಿವೇಕ್ ದೋವಲ್​ಗೆ Sorry ಎಂದ ಹಿರಿಯ ಕಾಂಗ್ರೆಸ್ಸಿಗ ಜೈರಾಮ್ ರಮೇಶ್
ಜೈರಾಮ್ ರಮೇಶ್
TV9 Web
| Edited By: |

Updated on:Apr 06, 2022 | 11:33 PM

Share

ದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪುತ್ರ ವಿವೇಕ್ ದೋವಲ್ ಬಳಿ ಮಾನಹಾನಿ ಪ್ರಕರಣದ ಬಗ್ಗೆ ಕ್ಷಮಾಪಣೆ ಕೇಳಿದ್ದಾರೆ. ಈ ಮೂಲಕ ಜೈರಾಮ್ ರಮೇಶ್ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ದೆಹಲಿ ಕೋರ್ಟ್ ಇತ್ಯರ್ಥಗೊಳಿಸಿದೆ.

ಕಳೆದ ವರ್ಷ, ಜೈರಾಮ್ ರಮೇಶ್ ಹಾಗೂ ಕ್ಯಾರವಾನ್ ಮ್ಯಾಗಜಿನ್ ವಿರುದ್ಧ ವಿವೇಕ್ ದೋವಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಬಗ್ಗೆ ಕ್ಷಮೆ ಕೇಳಿರುವ ಜೈರಾಮ್ ರಮೇಶ್, ಅಂದು ಚುನಾವಣಾ ಸನ್ನಿವೇಶದ ಬಿಸಿಯಲ್ಲಿ ಹಾಗೆ ಮಾತಾಡಿದ್ದೆ. ಆ ಕ್ಷಣದಲ್ಲಿ ವಿವೇಕ್ ದೋವಲ್ ವಿರುದ್ಧ ಆರೋಪಗಳನ್ನು ಮಾಡಿದ್ದೆ. ಅವುಗಳನ್ನು ಪರಿಶೀಲಿಸಬೇಕಿತ್ತು. ಅದಕ್ಕಾಗಿ ಈಗ ಕ್ಷಮೆ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ. ಜೈರಾಮ್ ರಮೇಶ್ ಕ್ಷಮಾಪಣೆಯನ್ನು ಸ್ವೀಕರಿಸಿರುವ ವಿವೇಕ್ ದೋವಲ್, ಕ್ಯಾರವಾನ್ ನಿಯತಕಾಲಿಕೆ ವಿರುದ್ಧದ ಪ್ರಕರಣ ಮುಂದುವರೆಸುವುದಾಗಿ ಹೇಳಿದ್ದಾರೆ.

2019ರ ಜನವರಿಯಲ್ಲಿ ಕ್ಯಾರವಾನ್ ನಿಯತಕಾಲಿಕೆ ಪ್ರಕಟಿಸಿದ್ದ ಲೇಖನದಲ್ಲಿ ವಿವೇಕ್ ದೋವಲ್ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿತ್ತು. ಅವುಗಳನ್ನು ಜೈರಾಮ್ ರಮೇಶ್ ತಮ್ಮ ಪತ್ರಿಕಾಗೋಷ್ಠಿ ಸಂದರ್ಭ ಉಲ್ಲೇಖಿಸಿ ಮಾತನಾಡಿದ್ದರು. ಈ ಕಾರಣದಿಂದ ಅಜಿತ್ ದೋವಲ್ ಪುತ್ರ, 2019ರ ಫೆಬ್ರವರಿಯಲ್ಲಿ ಜೈರಾಮ್ ರಮೇಶ್ ಮತ್ತು ಕ್ಯಾರವಾನ್ ನಿಯತಕಾಲಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

Published On - 4:07 pm, Sat, 19 December 20

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ