AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಂಸತ್ತನ್ನು ‘ಮೋದಿ ಮಲ್ಪಿಪ್ಲೆಕ್ಸ್’​ ಎಂದು ಕರೆದ ಕಾಂಗ್ರೆಸ್​ನ ಹಿರಿಯ ನಾಯಕ ಜೈರಾಮ್ ರಮೇಶ್​

ನೂತನ ಸಂಸತ್ ಭವನವನ್ನು ಕಾಂಗ್ರೆಸ್​ನ ಹಿರಿಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಯಕ ಜೈರಾಮ್ ರಮೇಶ್(Jairam Ramesh) ‘ಮೋದಿ ಮಲ್ಪಿಪ್ಲೆಕ್ಸ್’ ಎಂದು ಕರೆದಿದ್ದಾರೆ. ಹೊಸ ಸಂಸತ್ತಿನಲ್ಲಿ ವಿಶೇಷ ಕಲಾಪಗಳು ಪೂರ್ಣಗೊಂಡಿವೆ, ಹಳೆಯ ಸಂಸತ್ತಿಗೆ ಹೋಲಿಸಿದರೆ ಹೊಸ ಸಂಸತ್ತಿನ ವಿನ್ಯಾಸದಲ್ಲಿರುವ ಹಲವು ನ್ಯೂನತೆಗಳನ್ನು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ. ಹಳೆಯ ಸಂಸತ್ತಿನಂತೆ ಹೊಸ ಸಂಸತ್ತಿನಲ್ಲಿ ಸದಸ್ಯರ ನಡುವೆ ಸಂವಾದಕ್ಕೆ ಸ್ಥಳವಿಲ್ಲ, ನೌಕರರಿಗೆ ಕೆಲಸ ಮಾಡಲು ಸೌಲಭ್ಯಗಳು ಸಿಗುತ್ತಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಹೊಸ ಸಂಸತ್ತನ್ನು ‘ಮೋದಿ ಮಲ್ಪಿಪ್ಲೆಕ್ಸ್’​ ಎಂದು ಕರೆದ ಕಾಂಗ್ರೆಸ್​ನ ಹಿರಿಯ ನಾಯಕ ಜೈರಾಮ್ ರಮೇಶ್​
ಜೈರಾಮ್ ರಮೇಶ್Image Credit source: Outlook
ನಯನಾ ರಾಜೀವ್
|

Updated on: Sep 23, 2023 | 12:27 PM

Share

ನೂತನ ಸಂಸತ್ ಭವನವನ್ನು ಕಾಂಗ್ರೆಸ್​ನ ಹಿರಿಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಯಕ ಜೈರಾಮ್ ರಮೇಶ್(Jairam Ramesh) ‘ಮೋದಿ ಮಲ್ಪಿಪ್ಲೆಕ್ಸ್’ ಎಂದು ಕರೆದಿದ್ದಾರೆ. ಹೊಸ ಸಂಸತ್ತಿನಲ್ಲಿ ವಿಶೇಷ ಕಲಾಪಗಳು ಪೂರ್ಣಗೊಂಡಿವೆ, ಹಳೆಯ ಸಂಸತ್ತಿಗೆ ಹೋಲಿಸಿದರೆ ಹೊಸ ಸಂಸತ್ತಿನ ವಿನ್ಯಾಸದಲ್ಲಿರುವ ಹಲವು ನ್ಯೂನತೆಗಳನ್ನು ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ. ಹಳೆಯ ಸಂಸತ್ತಿನಂತೆ ಹೊಸ ಸಂಸತ್ತಿನಲ್ಲಿ ಸದಸ್ಯರ ನಡುವೆ ಸಂವಾದಕ್ಕೆ ಸ್ಥಳವಿಲ್ಲ, ನೌಕರರಿಗೆ ಕೆಲಸ ಮಾಡಲು ಸೌಲಭ್ಯಗಳು ಸಿಗುತ್ತಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

2024ರಲ್ಲಿ ಅಧಿಕಾರ ಬದಲಾವಣೆಯ ನಂತರ ಹೊಸ ಸಂಸತ್ತಿನ ಕಟ್ಟಡದ ಉತ್ತಮ ಬಳಕೆಗೆ ಮಾರ್ಗವನ್ನು ಕಂಡುಕೊಳ್ಳಲಾಗುವುದು ಎಂದರು. ಹೊಸ ಸಂಸತ್ ಕಟ್ಟಡವನ್ನು ಹೆಚ್ಚಿನ ಪ್ರಚಾರದೊಂದಿಗೆ ಉದ್ಘಾಟಿಸಿದ ರೀತಿ, ಇದು ಪ್ರಧಾನಿ ಮೋದಿಯವರ ಉದ್ದೇಶ ಸಾಕಾರಗೊಂಡಿದೆ. ಹೊಸ ಸಂಸತ್ತನ್ನು ವಾಸ್ತವವಾಗಿ ಮೋದಿ ಮಲ್ಟಿ ಕಾಂಪ್ಲೆಕ್ಸ್ ಎಂದು ಕರೆಯಬೇಕು, 4 ದಿನಗಳ ಕಲಾಪಗಳ ನಂತರ, ಸಂಸತ್ತಿನಲ್ಲಿ ಪರಸ್ಪರ ಸಂವಹನಕ್ಕೆ ಸ್ಥಳಾವಕಾಶವಿಲ್ಲ ಎಂಬುದನ್ನು ನಾನು ನೋಡಿದೆ ಎಂದು ಹೇಳಿದರು.

ಒಬ್ಬರನ್ನೊಬ್ಬರು ನೋಡಲು ದುರ್ಬೀನು ಬೇಕು ವಾಸ್ತುಶೈಲಿಯು ಪ್ರಜಾಪ್ರಭುತ್ವವನ್ನು ಕೊಲ್ಲುತ್ತದೆ ಎಂದಾದರೆ ಪ್ರಧಾನಿ ಮೋದಿ ಅಲಿಖಿತ ಸಂವಿಧಾನವನ್ನು ನಾಶಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ. ಹೊಸ ಸಂಸತ್ತಿನಲ್ಲಿ ಸದಸ್ಯರ ನಡುವಿನ ಅಂತರವನ್ನು ಪ್ರತಿಪಾದಿಸಿದ ರಮೇಶ್ ಸಭಾಂಗಣವು ಆರಾಮದಾಯಕವಾಗಿದೆ ಆದರೆ ಇಲ್ಲಿ ಕುಳಿತಿರುವ ಸದಸ್ಯರು ಪರಸ್ಪರ ನೋಡಲು ಬೈನಾಕ್ಯುಲರ್ ಅಗತ್ಯವಿದೆ ಎಂದು ಹೇಳಿದರು.

ಹಳೆಯ ಸಂಸತ್ ಭವನದ ವಿಶೇಷತೆಗಳನ್ನು ಉಲ್ಲೇಖಿಸಿದ ಜೈರಾಮ್ ರಮೇಶ್, ಹಳೆಯ ಸಂಸತ್ತು ತನ್ನದೇ ಆದ ವಿಶಿಷ್ಟ ಸೌಂದರ್ಯವನ್ನು ಹೊಂದಿದೆ ಎಂದು ಹೇಳಿದರು. ಸದಸ್ಯರ ನಡುವೆ ಸಂವಹನದ ಸೌಲಭ್ಯವೂ ಇತ್ತು. ಉಭಯ ಸದನಗಳು, ಸೆಂಟ್ರಲ್ ಹಾಲ್ ಅಥವಾ ಸಂಸತ್ತಿನ ಕಾರಿಡಾರ್‌ಗಳಲ್ಲಿ ತಿರುಗಾಡುವುದು ಸಹ ಸುಲಭವಾಗಿತ್ತು. ಹೊಸ ಸಂಸತ್ತು ಈ ಸಂಬಂಧವನ್ನು ಕೊನೆಗೊಳಿಸುತ್ತದೆ.

ಮತ್ತಷ್ಟು ಓದಿ: ನೂತನ ಸಂಸತ್ ಭವನದ ಮೊದಲ ಫೋಟೊದಲ್ಲಿದ್ದು ಚುನಾಯಿತ ಸದಸ್ಯರಲ್ಲ, ಕೇಸರಿ ಬಟ್ಟೆ ತೊಟ್ಟವರು: ಶರದ್ ಪವಾರ್

ಹಳೆಯ ಸಂಸತ್ತಿನಲ್ಲಿ ಯಾರಾದರೂ ಕಳೆದುಹೋದರೆ, ಅದರ ಆಕಾರವು ವೃತ್ತಾಕಾರವಾಗಿರುವುದರಿಂದ ಅವರು ಸುಲಭವಾಗಿ ದಾರಿ ಕಂಡುಕೊಳ್ಳಬಹುದು, ಆದರೆ ಹೊಸ ಸಂಸತ್ತು ಚಕ್ರವ್ಯೂಹವಾಗಿದೆ. ನೀವು ಇದರಲ್ಲಿ ಕಳೆದುಹೋದರೆ ನಿಮ್ಮ ದಾರಿ ನಿಮಗೆ ಸಿಗುವುದಿಲ್ಲ. ಹಳೆಯ ಸಂಸತ್ತು ಹೆಚ್ಚುವರಿ ಸ್ಥಳ ಮತ್ತು ಮುಕ್ತತೆಯನ್ನು ಹೊಂದಿದೆ, ಆದರೆ ಹೊಸ ಸಂಸತ್ತು ಸಾಂದ್ರವಾಗಿರುತ್ತದೆ ಎಂದು ಹೇಳಿದರು.

ಜೆಪಿ ನಡ್ಡಾ ತಿರುಗೇಟು ಕಾಂಗ್ರೆಸ್ ಇಷ್ಟು ಕೆಳಮಟ್ಟದಲ್ಲಿ ಯೋಚಿಸುತ್ತದೆ ಎಂದು ನಾನಂದುಕೊಂಡಿರಲಿಲ್ಲ, ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳಿಗೆ ಮಾಡಿದ ಅವಮಾನವಲ್ಲದೆ ಬೇರೇನೂ ಇಲ್ಲ. ಕಾಂಗ್ರೆಸ್ ಸಂಸತ್ತಿಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಇದೇ ಮೊದಲಲ್ಲ. ಅವರು 1975 ರಲ್ಲಿ ಪ್ರಯತ್ನಿಸಿದರು ಮತ್ತು ಅದು ಶೋಚನೀಯವಾಗಿ ವಿಫಲವಾಯಿತು ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ