AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajasthan Accident: ಭೀಕರ ರಸ್ತೆ ಅಪಘಾತ: ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಜಸೋಲ್ ಪತ್ನಿ ಚಿತ್ರಾ ಸಿಂಗ್ ಸಾವು

Manvendra Singh Jasol: ಖುಷ್ಪುರಿ ಗ್ರಾಮದ ಬಳಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದೆ. ಕಾಂಗ್ರೆಸ್ ನಾಯಕ ತನ್ನ ಕುಟುಂಬದೊಂದಿಗೆ ದೆಹಲಿಯಿಂದ ಜೈಪುರಕ್ಕೆ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದ್ದು, ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Rajasthan Accident: ಭೀಕರ ರಸ್ತೆ ಅಪಘಾತ: ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಜಸೋಲ್ ಪತ್ನಿ ಚಿತ್ರಾ ಸಿಂಗ್ ಸಾವು
ರಸ್ತೆ ಅಪಘಾತ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jan 30, 2024 | 8:19 PM

Share

ಅಲ್ವಾರ್ ಜನವರಿ 30: ರಾಜಸ್ಥಾನದ (Rajasthan) ಅಲ್ವಾರ್ ಬಳಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಜಸೋಲ್ (Manvendra Singh Jasol) ಅವರ ಪತ್ನಿ ಚಿತ್ರಾ ಸಿಂಗ್ ಸಾವಿಗೀಡಾಗಿದ್ದಾರೆ. ಅಪಘಾತದ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಅವರ ಪುತ್ರ ಸೋಲಂಕಿ ಸಿಂಗ್ ಕೂಡ ಕಾರಿನಲ್ಲಿದ್ದರು. ಇವರಿಬ್ಬರಿಗೆ ತೀವ್ರವಾಗಿ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಖುಷ್ಪುರಿ ಗ್ರಾಮದ ಬಳಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದೆ. ಕಾಂಗ್ರೆಸ್ ನಾಯಕ ತನ್ನ ಕುಟುಂಬದೊಂದಿಗೆ ದೆಹಲಿಯಿಂದ ಜೈಪುರಕ್ಕೆ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದ್ದು, ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನ್ವೇಂದ್ರ ಸಿಂಗ್ ಜಸೋಲ್ ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಕಳೆದ ಎರಡು ವರ್ಷಗಳಿಂದ ಕೇಂದ್ರ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಜಸೋಲ್ ಅವರ ಪುತ್ರರಾಗಿದ್ದಾರೆ. ಮನ್ವೇಂದ್ರ ಅವರು ಬಿಜೆಪಿ ಟಿಕೆಟ್‌ನಿಂದ 2004 ಮತ್ತು 2009 ರ ನಡುವೆ ಬಾರ್ಮರ್‌ನಿಂದ ಸಂಸದರಾಗಿ ಸೇವೆ ಸಲ್ಲಿಸಿದರು. 2018 ರಲ್ಲಿ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಮುನ್ನ ಅವರು ಬಿಜೆಪಿ ತೊರೆದಿದ್ದರು.

ರಾಜಕೀಯ ಮುಖಂಡರಿಂದ ಸಂತಾಪ

ಮನ್ವೇಂದ್ರ ಸಿಂಗ್ ಜಸೋಲ್ ಅವರ ಪತ್ನಿ ನಿಧನಕ್ಕೆ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದು, ಕಾಂಗ್ರೆಸ್ ನಾಯಕರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

“ರಸ್ತೆ ಅಪಘಾತದಲ್ಲಿ ಮನ್ವೇಂದ್ರ ಸಿಂಗ್ ಜಸೋಲ್ ಅವರ ಪತ್ನಿ ಶ್ರೀಮತಿ ಚಿತ್ರಾ ಸಿಂಗ್ ಅವರ ನಿಧನದ ಸುದ್ದಿ ದುಃಖಕರವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಮತ್ತು ಕುಟುಂಬಕ್ಕೆ ಧೈರ್ಯ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ  ಮನ್ವೇಂದ್ರ ಸಿಂಗ್ ಜಸೋಲ್ ಮತ್ತು ಇತರ ಕುಟುಂಬ ಸದಸ್ಯರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಇದನ್ನೂ ಓದಿರಾಜಸ್ಥಾನ: 52 ಮಕ್ಕಳಿದ್ದ ಶಾಲಾ ಬಸ್​ ಟ್ರಕ್​ಗೆ ಡಿಕ್ಕಿ, ಇಬ್ಬರು ವಿದ್ಯಾರ್ಥಿನಿಯರು ಸಾವು

ರಸ್ತೆ ಅಪಘಾತದಲ್ಲಿ ಮಾಜಿ ಸಂಸದ ಮನ್ವೇಂದ್ರ ಜಿ ಮತ್ತು ಅವರ ಕುಟುಂಬ ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭಿಸಿದೆ. ಮನ್ವೇಂದ್ರ ಸಿಂಗ್  ಜಿ ಮತ್ತು ಅವರ ಪುತ್ರ ಸೇರಿದಂತೆ ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಮನ್ವೇಂದ್ರ ಸಿಂಗ್ ಜಸೋಲ್ ಜಿ ಅವರ ಪತ್ನಿಯರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಚಿತ್ರಾ ಸಿಂಗ್ ಜೀ ಅವರಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ದೇವರು ಅಗಲಿದ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಅವರ ಕುಟುಂಬಕ್ಕೆ ಈ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಹಿರಿಯ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ.

“ದಿಲ್ಲಿ-ಮುಂಬೈ ಹೆದ್ದಾರಿಯಲ್ಲಿ ನೌಗಾಂವ್ (ಹರಿಯಾಣ)ದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾರ್ಮರ್-ಜೈಸಲ್ಮೇರ್ ಮಾಜಿ ಸಂಸದ ಮನ್ವೇಂದ್ರ ಸಿಂಗ್ ಜಿ ಅವರ ಪತ್ನಿಯ ನಿಧನದ ಸುದ್ದಿಯನ್ನು ಕೇಳಲು ನನಗೆ ತುಂಬಾ ದುಃಖವಾಗಿದೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ. ಮನ್ವೇಂದ್ರ ಸಿಂಗ್ ಜಿ ಮತ್ತು ಅವರ ಪುತ್ರನಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಗವಾನ್ ಶ್ರೀರಾಮನಲ್ಲಿ ಪ್ರಾರ್ಥನೆ,” ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:17 pm, Tue, 30 January 24

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ