AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾಥಾಶ್ರಮ ಮಕ್ಕಳ ಜೊತೆ ಈಸ್ಟರ್ ಹಬ್ಬದ ಭೋಜನ ಸವಿದು ಪ್ರಿಯಾಂಕಾ ಗಾಂಧಿಗೆ ವಿಡಿಯೋ ಕಾಲ್ ಮಾಡಿದ ರಾಹುಲ್ ಗಾಂಧಿ

ರಾಹುಲ್ ಗಾಂಧಿ ಮಕ್ಕಳ ಪಕ್ಕವೇ ಕುಳಿತು ರುಚಿ ರುಚಿ ಭೋಜನ ಸವಿದರು. ಈ ವೇಳೆ ತಮ್ಮ ಮೊಬೈಲ್​ನಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿಗೆ ವಿಡಿಯೋ ಕಾಲ್ ಮಾಡಿ ತಮ್ಮ ಪಕ್ಕದಲ್ಲೇ ಊಟ ಮಾಡುತ್ತಿದ್ದ ಮಕ್ಕಳಿಗೆ ಪ್ರಿಯಾಂಕಾ ಗಾಂಧಿಯವರ ಬಳಿ ಮಾತನಾಡಿಸಿದರು.

ಅನಾಥಾಶ್ರಮ ಮಕ್ಕಳ ಜೊತೆ ಈಸ್ಟರ್ ಹಬ್ಬದ ಭೋಜನ ಸವಿದು ಪ್ರಿಯಾಂಕಾ ಗಾಂಧಿಗೆ ವಿಡಿಯೋ ಕಾಲ್ ಮಾಡಿದ ರಾಹುಲ್ ಗಾಂಧಿ
ಕೇರಳದಲ್ಲಿ ಮಕ್ಕಳ ಜತೆ ಭೋಜನ ಸವಿಯುತ್ತಾ ಸಹೋದರಿ ಪ್ರಿಯಾಂಕಾ ಗಾಂಧಿಗೆ ವಿಡಿಯೊ ಕಾಲ್ ಮಾಡಿದ ರಾಹುಲ್ ಗಾಂಧಿ
guruganesh bhat
|

Updated on:Apr 04, 2021 | 3:52 PM

Share

ವಯನಾಡ್: ಕಾಂಗ್ರೆಸ್ ನಾಯಕ, ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ವಿಧಾನಸಭಾ ಚುನಾವಣೆಯ ನಿಮಿತ್ತ ಇಂದು ಕೇರಳದಲ್ಲಿದ್ದಾರೆ. ಅವರು ಇಂದು ಈಸ್ಟರ್ ಹಬ್ಬದ ಸಂಭ್ರಮವನ್ನು ವಯನಾಡ್​ನ ಜೀವನ ಜ್ಯೋತಿ ಅನಾಥಾಶ್ರಮದಲ್ಲಿ ಮಕ್ಕಳ ಜತೆ ಔತಣಕೂಟ ನಡೆಸಿ ಆಚರಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಮಕ್ಕಳ ಪಕ್ಕವೇ ಕುಳಿತು ರುಚಿ ರುಚಿ ಭೋಜನ ಸವಿದಿದ್ದಾರೆ. ಈ ವೇಳೆ ತಮ್ಮ ಮೊಬೈಲ್​ನಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿಗೆ ವಿಡಿಯೋ ಕಾಲ್ ಮಾಡಿ ತಮ್ಮ ಪಕ್ಕದಲ್ಲೇ ಊಟ ಮಾಡುತ್ತಿದ್ದ ಮಕ್ಕಳಿಗೆ ಪ್ರಿಯಾಂಕಾ ಗಾಂಧಿಯವರ ಬಳಿ ಮಾತನಾಡಿಸಿದ್ದಾರೆ.

ಈ ಮುನ್ನ ದೇಶದ ಜನತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈಸ್ಟರ್ ಹಬ್ಬದ ಶುಭಕೋರಿದ್ದರು.  ತಮ್ಮ ಶುಭಕಾಮನೆಗಳನ್ನು ಟ್ವೀಟ್ ಮಾಡಿದ್ದ ಅವರು, ಭರವಸೆ ಮತ್ತು ಹೊಸ ಆರಂಭದ ಪ್ರತೀಕವಾದ ಈಸ್ಟರ್ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದರು.

ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಈಸ್ಟರ್ ಹಬ್ಬದ ಶುಭಾಶಯ ಕೋರಲು ಹೋಗಿ ಟ್ವಿಟರ್​ನಲ್ಲಿ ಟೀಕೆಗಳನ್ನು ಎದುರಿಸಿದ್ದರು. ತಮ್ಮ ಸಹೋದರ ರಾಹುಲ್ ಗಾಂಧಿ ಪ್ರತಿನಿಧಿಸುವ ವಯನಾಡ್ ಲೋಕಸಭಾ ಕ್ಷೇತ್ರ ಮತ್ತು ಕೇರಳದ ಜನತೆಗೆ ಈಸ್ಟರ್ ಶುಭಾಶಯಗಳು ಎಂಬ ವಿಡಿಯೋವೊಂದನ್ನು ಅವರು ಹಂಚಿಕೊಂಡಿದ್ದರು.ಆದರೆ, ಕೇವಲ ವಯನಾಡ್ ಮತ್ತು ಕೇರಳದ ಜನರಿಗೆ ಮಾತ್ರ ಶುಭಾಶಯ ಕೋರಿದ್ದೇಕೆ ಎಂದು ಹಲವರು ಅವರನ್ನು ಟೀಕಿಸಿದ್ದರು.

ಇದನ್ನೂ ಓದಿ: ನಾನು ಭಾರತದ ಪ್ರಧಾನಿಯಾದರೆ..? ಪ್ರಶ್ನೆಗೆ ರಾಹುಲ್ ಗಾಂಧಿ ಏನು ಉತ್ತರಿಸಿದರು..

Tamil Nadu Elections 2021: ತಮಿಳುನಾಡು ಸಿಎಂ ಪಳನಿಸ್ವಾಮಿ ಅವರು ನರೇಂದ್ರ ಮೋದಿ ಪಾದಕ್ಕೆ ನಮಸ್ಕರಿಸುವುದನ್ನು ನೋಡಲಾಗುತ್ತಿಲ್ಲ: ರಾಹುಲ್ ಗಾಂಧಿ

Published On - 3:50 pm, Sun, 4 April 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ