AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುಜಕ್ಕೆ ಭುಜಕೊಟ್ಟು ನಿಂತು ಫೋಟೋಕ್ಕೆ ಪೋಸ್ ​ಕೊಟ್ಟ ರಾಹುಲ್​ ಗಾಂಧಿ, ನವಜೋತ್​ ಸಿಂಗ್​ ಸಿಧು; ಸಹೋದರನೊಂದಿಗೆ ಎಂದು ಕ್ಯಾಪ್ಷನ್​ ಕೊಟ್ಟ ಸಿಧು

ಹಿಂದಿನ ವಾರ ಕೂಡ ನವಜೋತ್​ ಸಿಂಗ್​ ಸಿಧು, ಪಂಜಾಬ್​ ಸಿಎಂ ಚರಣಜಿತ್​ ಸಿಂಘ್​ ಛನ್ನಿ ಮತ್ತು ಹಿರಿಯ ಕಾಂಗ್ರೆಸ್​ ನಾಯಕ ಸುನಿ ಜಾಖರ್​, ರಾಹುಲ್​ ಗಾಂಧಿಯವರನ್ನು ಭೇಟಿ ಮಾಡಿದ್ದರು.

ಭುಜಕ್ಕೆ ಭುಜಕೊಟ್ಟು ನಿಂತು ಫೋಟೋಕ್ಕೆ ಪೋಸ್ ​ಕೊಟ್ಟ ರಾಹುಲ್​ ಗಾಂಧಿ, ನವಜೋತ್​ ಸಿಂಗ್​ ಸಿಧು; ಸಹೋದರನೊಂದಿಗೆ ಎಂದು ಕ್ಯಾಪ್ಷನ್​ ಕೊಟ್ಟ ಸಿಧು
ರಾಹುಲ್​ ಗಾಂಧಿ ಮತ್ತು ನವಜೋತ್​ ಸಿಂಗ್​ ಸಿಧು
TV9 Web
| Edited By: |

Updated on:Dec 04, 2021 | 7:49 AM

Share

ಪಂಜಾಬ್​ ಕಾಂಗ್ರೆಸ್​ ಮುಖ್ಯಸ್ಥ ನವಜೋತ್​ ಸಿಂಗ್​ ಸಿಧು ನಿನ್ನೆ ದೆಹಲಿಯಲ್ಲಿ ರಾಹುಲ್​ ಗಾಂಧಿಯನ್ನು ಭೇಟಿಯಾಗಿದ್ದಾರೆ.  ಎಐಸಿಸಿ ಉಸ್ತುವಾರಿ ಹರೀಶ್​ ಚೌಧರಿ, ಅಲ್ಲಿನ ಸಾರಿಗೆ ಸಚಿವ ಅಮರಿಂದರ್​ ಸಿಂಗ್​ ಅಮರಿಂದರ್ ಸಿಂಗ್​ ರಾಜಾ ವಾರಿಂಗ್ ಮತ್ತು ನಿನ್ನೆ ಕಾಂಗ್ರೆಸ್​ಗೆ ಹೊಸದಾಗಿ ಸೇರ್ಪಡೆಯಾದ ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಕೂಡ ಇದ್ದರು.

ಸಿಧು ಮೂಸೆವಾಲಾ ನಿನ್ನೆ ಚಂಡಿಗಢ್​​ನಲ್ಲಿ, ಪಂಜಾಬ್​ ಸಿಎಂ ಚರಣಜಿತ್​ ಸಿಂಗ್​ ಛನ್ನಿ ಮತ್ತು ಪಂಜಾಬ್​ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅದಾದ ಬಳಿಕ ದೆಹಲಿಗೆ ತೆರಳಿ ರಾಹುಲ  ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಹಾಜರಿದ್ದ ನವಜೋತ್​ ಸಿಂಗ್​ ಸಿಧು, ರಾಹುಲ್ ಗಾಂಧಿಯವರೊಂದಿಗೆ ಇರುವ ಫೋಟೋ ಶೇರ್ ಮಾಡಿಕೊಂಡು ವಿತ್​ ಭಾಯ್​ (ಸಹೋದರನೊಂದಿಗೆ) ಎಂದು ಕ್ಯಾಪ್ಷನ್​ ಕೊಟ್ಟಿದ್ದಾರೆ.

ಹಿಂದಿನ ವಾರ ಕೂಡ ನವಜೋತ್​ ಸಿಂಗ್​ ಸಿಧು, ಪಂಜಾಬ್​ ಸಿಎಂ ಚರಣಜಿತ್​ ಸಿಂಘ್​ ಛನ್ನಿ ಮತ್ತು ಹಿರಿಯ ಕಾಂಗ್ರೆಸ್​ ನಾಯಕ ಸುನಿ ಜಾಖರ್​, ರಾಹುಲ್​ ಗಾಂಧಿಯವರನ್ನು ಭೇಟಿ ಮಾಡಿದ್ದರು. ಪಂಜಾಬ್​​ನಲ್ಲಿ ಕಾಂಗ್ರೆಸ್​ ಸರ್ಕಾರವೇ ಇದೆ. ಆದರೆ ಅಲ್ಲಿ ಆಂತರಿಕ ಸಮಸ್ಯೆಗಳು ನೂರೆಂಟಿವೆ. ಇತ್ತೀಚೆಗಷ್ಟೇ ಕ್ಯಾಪ್ಟನ್​ ಅಮರಿಂದರ್ ಸಿಂಗ್​​ರನ್ನು ಬದಲಿಸಿ ಚರಣಜಿತ್​ ಸಿಂಗ್​ ಛನ್ನಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ.

ನವಜೋತ್​ ಸಿಂಗ್​ ಸಿಧು ಕಾಂಗ್ರೆಸ್​ನವರೇ ಆದರೂ, 2015ರಲ್ಲಿ ಫರೀದ್​ಕೋಟ್​​ನಲ್ಲಿ ಸಿಖ್ಖರ ಗುರುನಾನಕ ಗ್ರಂಥವನ್ನು ಅಪವಿತ್ರಗೊಳಿಸಿದ ಮತ್ತು ಅದನ್ನು ಪ್ರತಿಭಟಿಸಿದವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಸಂತ್ರಸ್ತರಾದವರಿಗೆ ನ್ಯಾಯ ಬೇಕೆಂದು ಪಂಜಾಭ್​ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಹಾಗೇ, ಮಾದಕ ದ್ರವ್ಯ ಸಾಗಣೆ ಕುರಿತಾದ ವರದಿಯನ್ನು ಸ್ಪೆಶಲ್​ ಟಾಸ್ಕ್​ ಫೋರ್ಸ್​ ಬಹಿರಂಗ ಗೊಳಿಸದೆ ಇದ್ದರೆ ಆಮರಣಾಂತ ಉಪವಾಸ ಮಾಡುವುದಾಗಿಯೂ ಕಾಂಗ್ರೆಸ್​ಗೆ ಬೆದರಿಸಿದ್ದಾರೆ.

ಇದನ್ನೂ ಓದಿ: Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Published On - 7:44 am, Sat, 4 December 21

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ