AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುಜಕ್ಕೆ ಭುಜಕೊಟ್ಟು ನಿಂತು ಫೋಟೋಕ್ಕೆ ಪೋಸ್ ​ಕೊಟ್ಟ ರಾಹುಲ್​ ಗಾಂಧಿ, ನವಜೋತ್​ ಸಿಂಗ್​ ಸಿಧು; ಸಹೋದರನೊಂದಿಗೆ ಎಂದು ಕ್ಯಾಪ್ಷನ್​ ಕೊಟ್ಟ ಸಿಧು

ಹಿಂದಿನ ವಾರ ಕೂಡ ನವಜೋತ್​ ಸಿಂಗ್​ ಸಿಧು, ಪಂಜಾಬ್​ ಸಿಎಂ ಚರಣಜಿತ್​ ಸಿಂಘ್​ ಛನ್ನಿ ಮತ್ತು ಹಿರಿಯ ಕಾಂಗ್ರೆಸ್​ ನಾಯಕ ಸುನಿ ಜಾಖರ್​, ರಾಹುಲ್​ ಗಾಂಧಿಯವರನ್ನು ಭೇಟಿ ಮಾಡಿದ್ದರು.

ಭುಜಕ್ಕೆ ಭುಜಕೊಟ್ಟು ನಿಂತು ಫೋಟೋಕ್ಕೆ ಪೋಸ್ ​ಕೊಟ್ಟ ರಾಹುಲ್​ ಗಾಂಧಿ, ನವಜೋತ್​ ಸಿಂಗ್​ ಸಿಧು; ಸಹೋದರನೊಂದಿಗೆ ಎಂದು ಕ್ಯಾಪ್ಷನ್​ ಕೊಟ್ಟ ಸಿಧು
ರಾಹುಲ್​ ಗಾಂಧಿ ಮತ್ತು ನವಜೋತ್​ ಸಿಂಗ್​ ಸಿಧು
TV9 Web
| Edited By: |

Updated on:Dec 04, 2021 | 7:49 AM

Share

ಪಂಜಾಬ್​ ಕಾಂಗ್ರೆಸ್​ ಮುಖ್ಯಸ್ಥ ನವಜೋತ್​ ಸಿಂಗ್​ ಸಿಧು ನಿನ್ನೆ ದೆಹಲಿಯಲ್ಲಿ ರಾಹುಲ್​ ಗಾಂಧಿಯನ್ನು ಭೇಟಿಯಾಗಿದ್ದಾರೆ.  ಎಐಸಿಸಿ ಉಸ್ತುವಾರಿ ಹರೀಶ್​ ಚೌಧರಿ, ಅಲ್ಲಿನ ಸಾರಿಗೆ ಸಚಿವ ಅಮರಿಂದರ್​ ಸಿಂಗ್​ ಅಮರಿಂದರ್ ಸಿಂಗ್​ ರಾಜಾ ವಾರಿಂಗ್ ಮತ್ತು ನಿನ್ನೆ ಕಾಂಗ್ರೆಸ್​ಗೆ ಹೊಸದಾಗಿ ಸೇರ್ಪಡೆಯಾದ ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಕೂಡ ಇದ್ದರು.

ಸಿಧು ಮೂಸೆವಾಲಾ ನಿನ್ನೆ ಚಂಡಿಗಢ್​​ನಲ್ಲಿ, ಪಂಜಾಬ್​ ಸಿಎಂ ಚರಣಜಿತ್​ ಸಿಂಗ್​ ಛನ್ನಿ ಮತ್ತು ಪಂಜಾಬ್​ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅದಾದ ಬಳಿಕ ದೆಹಲಿಗೆ ತೆರಳಿ ರಾಹುಲ  ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಹಾಜರಿದ್ದ ನವಜೋತ್​ ಸಿಂಗ್​ ಸಿಧು, ರಾಹುಲ್ ಗಾಂಧಿಯವರೊಂದಿಗೆ ಇರುವ ಫೋಟೋ ಶೇರ್ ಮಾಡಿಕೊಂಡು ವಿತ್​ ಭಾಯ್​ (ಸಹೋದರನೊಂದಿಗೆ) ಎಂದು ಕ್ಯಾಪ್ಷನ್​ ಕೊಟ್ಟಿದ್ದಾರೆ.

ಹಿಂದಿನ ವಾರ ಕೂಡ ನವಜೋತ್​ ಸಿಂಗ್​ ಸಿಧು, ಪಂಜಾಬ್​ ಸಿಎಂ ಚರಣಜಿತ್​ ಸಿಂಘ್​ ಛನ್ನಿ ಮತ್ತು ಹಿರಿಯ ಕಾಂಗ್ರೆಸ್​ ನಾಯಕ ಸುನಿ ಜಾಖರ್​, ರಾಹುಲ್​ ಗಾಂಧಿಯವರನ್ನು ಭೇಟಿ ಮಾಡಿದ್ದರು. ಪಂಜಾಬ್​​ನಲ್ಲಿ ಕಾಂಗ್ರೆಸ್​ ಸರ್ಕಾರವೇ ಇದೆ. ಆದರೆ ಅಲ್ಲಿ ಆಂತರಿಕ ಸಮಸ್ಯೆಗಳು ನೂರೆಂಟಿವೆ. ಇತ್ತೀಚೆಗಷ್ಟೇ ಕ್ಯಾಪ್ಟನ್​ ಅಮರಿಂದರ್ ಸಿಂಗ್​​ರನ್ನು ಬದಲಿಸಿ ಚರಣಜಿತ್​ ಸಿಂಗ್​ ಛನ್ನಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ.

ನವಜೋತ್​ ಸಿಂಗ್​ ಸಿಧು ಕಾಂಗ್ರೆಸ್​ನವರೇ ಆದರೂ, 2015ರಲ್ಲಿ ಫರೀದ್​ಕೋಟ್​​ನಲ್ಲಿ ಸಿಖ್ಖರ ಗುರುನಾನಕ ಗ್ರಂಥವನ್ನು ಅಪವಿತ್ರಗೊಳಿಸಿದ ಮತ್ತು ಅದನ್ನು ಪ್ರತಿಭಟಿಸಿದವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಸಂತ್ರಸ್ತರಾದವರಿಗೆ ನ್ಯಾಯ ಬೇಕೆಂದು ಪಂಜಾಭ್​ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಹಾಗೇ, ಮಾದಕ ದ್ರವ್ಯ ಸಾಗಣೆ ಕುರಿತಾದ ವರದಿಯನ್ನು ಸ್ಪೆಶಲ್​ ಟಾಸ್ಕ್​ ಫೋರ್ಸ್​ ಬಹಿರಂಗ ಗೊಳಿಸದೆ ಇದ್ದರೆ ಆಮರಣಾಂತ ಉಪವಾಸ ಮಾಡುವುದಾಗಿಯೂ ಕಾಂಗ್ರೆಸ್​ಗೆ ಬೆದರಿಸಿದ್ದಾರೆ.

ಇದನ್ನೂ ಓದಿ: Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Published On - 7:44 am, Sat, 4 December 21

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?