AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭುಜಕ್ಕೆ ಭುಜಕೊಟ್ಟು ನಿಂತು ಫೋಟೋಕ್ಕೆ ಪೋಸ್ ​ಕೊಟ್ಟ ರಾಹುಲ್​ ಗಾಂಧಿ, ನವಜೋತ್​ ಸಿಂಗ್​ ಸಿಧು; ಸಹೋದರನೊಂದಿಗೆ ಎಂದು ಕ್ಯಾಪ್ಷನ್​ ಕೊಟ್ಟ ಸಿಧು

ಹಿಂದಿನ ವಾರ ಕೂಡ ನವಜೋತ್​ ಸಿಂಗ್​ ಸಿಧು, ಪಂಜಾಬ್​ ಸಿಎಂ ಚರಣಜಿತ್​ ಸಿಂಘ್​ ಛನ್ನಿ ಮತ್ತು ಹಿರಿಯ ಕಾಂಗ್ರೆಸ್​ ನಾಯಕ ಸುನಿ ಜಾಖರ್​, ರಾಹುಲ್​ ಗಾಂಧಿಯವರನ್ನು ಭೇಟಿ ಮಾಡಿದ್ದರು.

ಭುಜಕ್ಕೆ ಭುಜಕೊಟ್ಟು ನಿಂತು ಫೋಟೋಕ್ಕೆ ಪೋಸ್ ​ಕೊಟ್ಟ ರಾಹುಲ್​ ಗಾಂಧಿ, ನವಜೋತ್​ ಸಿಂಗ್​ ಸಿಧು; ಸಹೋದರನೊಂದಿಗೆ ಎಂದು ಕ್ಯಾಪ್ಷನ್​ ಕೊಟ್ಟ ಸಿಧು
ರಾಹುಲ್​ ಗಾಂಧಿ ಮತ್ತು ನವಜೋತ್​ ಸಿಂಗ್​ ಸಿಧು
TV9 Web
| Edited By: |

Updated on:Dec 04, 2021 | 7:49 AM

Share

ಪಂಜಾಬ್​ ಕಾಂಗ್ರೆಸ್​ ಮುಖ್ಯಸ್ಥ ನವಜೋತ್​ ಸಿಂಗ್​ ಸಿಧು ನಿನ್ನೆ ದೆಹಲಿಯಲ್ಲಿ ರಾಹುಲ್​ ಗಾಂಧಿಯನ್ನು ಭೇಟಿಯಾಗಿದ್ದಾರೆ.  ಎಐಸಿಸಿ ಉಸ್ತುವಾರಿ ಹರೀಶ್​ ಚೌಧರಿ, ಅಲ್ಲಿನ ಸಾರಿಗೆ ಸಚಿವ ಅಮರಿಂದರ್​ ಸಿಂಗ್​ ಅಮರಿಂದರ್ ಸಿಂಗ್​ ರಾಜಾ ವಾರಿಂಗ್ ಮತ್ತು ನಿನ್ನೆ ಕಾಂಗ್ರೆಸ್​ಗೆ ಹೊಸದಾಗಿ ಸೇರ್ಪಡೆಯಾದ ಪಂಜಾಬಿ ಖ್ಯಾತ ಗಾಯಕ ಸಿಧು ಮೂಸೆವಾಲಾ ಕೂಡ ಇದ್ದರು.

ಸಿಧು ಮೂಸೆವಾಲಾ ನಿನ್ನೆ ಚಂಡಿಗಢ್​​ನಲ್ಲಿ, ಪಂಜಾಬ್​ ಸಿಎಂ ಚರಣಜಿತ್​ ಸಿಂಗ್​ ಛನ್ನಿ ಮತ್ತು ಪಂಜಾಬ್​ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ನವಜೋತ್​ ಸಿಂಗ್ ಸಿಧು ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅದಾದ ಬಳಿಕ ದೆಹಲಿಗೆ ತೆರಳಿ ರಾಹುಲ  ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಹಾಜರಿದ್ದ ನವಜೋತ್​ ಸಿಂಗ್​ ಸಿಧು, ರಾಹುಲ್ ಗಾಂಧಿಯವರೊಂದಿಗೆ ಇರುವ ಫೋಟೋ ಶೇರ್ ಮಾಡಿಕೊಂಡು ವಿತ್​ ಭಾಯ್​ (ಸಹೋದರನೊಂದಿಗೆ) ಎಂದು ಕ್ಯಾಪ್ಷನ್​ ಕೊಟ್ಟಿದ್ದಾರೆ.

ಹಿಂದಿನ ವಾರ ಕೂಡ ನವಜೋತ್​ ಸಿಂಗ್​ ಸಿಧು, ಪಂಜಾಬ್​ ಸಿಎಂ ಚರಣಜಿತ್​ ಸಿಂಘ್​ ಛನ್ನಿ ಮತ್ತು ಹಿರಿಯ ಕಾಂಗ್ರೆಸ್​ ನಾಯಕ ಸುನಿ ಜಾಖರ್​, ರಾಹುಲ್​ ಗಾಂಧಿಯವರನ್ನು ಭೇಟಿ ಮಾಡಿದ್ದರು. ಪಂಜಾಬ್​​ನಲ್ಲಿ ಕಾಂಗ್ರೆಸ್​ ಸರ್ಕಾರವೇ ಇದೆ. ಆದರೆ ಅಲ್ಲಿ ಆಂತರಿಕ ಸಮಸ್ಯೆಗಳು ನೂರೆಂಟಿವೆ. ಇತ್ತೀಚೆಗಷ್ಟೇ ಕ್ಯಾಪ್ಟನ್​ ಅಮರಿಂದರ್ ಸಿಂಗ್​​ರನ್ನು ಬದಲಿಸಿ ಚರಣಜಿತ್​ ಸಿಂಗ್​ ಛನ್ನಿಯವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದೆ.

ನವಜೋತ್​ ಸಿಂಗ್​ ಸಿಧು ಕಾಂಗ್ರೆಸ್​ನವರೇ ಆದರೂ, 2015ರಲ್ಲಿ ಫರೀದ್​ಕೋಟ್​​ನಲ್ಲಿ ಸಿಖ್ಖರ ಗುರುನಾನಕ ಗ್ರಂಥವನ್ನು ಅಪವಿತ್ರಗೊಳಿಸಿದ ಮತ್ತು ಅದನ್ನು ಪ್ರತಿಭಟಿಸಿದವರ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಸಂತ್ರಸ್ತರಾದವರಿಗೆ ನ್ಯಾಯ ಬೇಕೆಂದು ಪಂಜಾಭ್​ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಹಾಗೇ, ಮಾದಕ ದ್ರವ್ಯ ಸಾಗಣೆ ಕುರಿತಾದ ವರದಿಯನ್ನು ಸ್ಪೆಶಲ್​ ಟಾಸ್ಕ್​ ಫೋರ್ಸ್​ ಬಹಿರಂಗ ಗೊಳಿಸದೆ ಇದ್ದರೆ ಆಮರಣಾಂತ ಉಪವಾಸ ಮಾಡುವುದಾಗಿಯೂ ಕಾಂಗ್ರೆಸ್​ಗೆ ಬೆದರಿಸಿದ್ದಾರೆ.

ಇದನ್ನೂ ಓದಿ: Karnataka Dam Water Level: ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Published On - 7:44 am, Sat, 4 December 21

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ