AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಕೇಳಿದ್ದಾರೆ; ನೋಡಿ ಹೀಗಾಗುತ್ತಿದೆ ಎಂದು ವಿಡಿಯೊ ಟ್ವೀಟ್ ಮಾಡಿದ ಕಾಂಗ್ರೆಸ್

ಭಾರತದಲ್ಲಿ ಏನಾಗುತ್ತಿದೆ ಎಂದು ತಿಳಿಯಬೇಕಾದರೆ ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ ಎಂದು ಪವನ್ ಖೇರಾ ವಿಡಿಯೊದಲ್ಲಿ ಹೇಳಿದ್ದಾರೆ.

ದೇಶದಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಕೇಳಿದ್ದಾರೆ; ನೋಡಿ ಹೀಗಾಗುತ್ತಿದೆ ಎಂದು ವಿಡಿಯೊ ಟ್ವೀಟ್ ಮಾಡಿದ ಕಾಂಗ್ರೆಸ್
ಪವನ್ ಖೇರಾ
ರಶ್ಮಿ ಕಲ್ಲಕಟ್ಟ
|

Updated on:Jun 27, 2023 | 1:50 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ವಿದೇಶ ಪ್ರವಾಸದಿಂದ ವಾಪಸ್ ಆಗುತ್ತಿದ್ದಂತೆ, ಪ್ರಧಾನಿಯವರೇ ಭಾರತದಲ್ಲಿ ಏನಾಗುತ್ತದೆ ಎಂಬುದರ ಬಗ್ಗೆ ನಿಮಗೆ ತಿಳಿಯಬೇಕಿತ್ತು ತಾನೇ? ಹಾಗಾದರೆ ತಿಳಿದುಕೊಳ್ಳಿ ಇಂಡಿಯಾ ಮೇ ಫಾಗ್ ಚಲ್ ರಹಾ ಹೈ ಎಂದು ವಿಡಿಯೊವೊಂದನ್ನು ಟ್ವೀಟ್ ಮಾಡಿದ್ದಾರೆ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera). ಭಾರತದಲ್ಲಿ ಏನಾಗುತ್ತಿದೆ ಎಂದು ತಿಳಿಯಬೇಕಾದರೆ ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ(Manipur) ಹೋಗಿ ಎಂದು ಪವನ್ ಖೇರಾ ವಿಡಿಯೊದಲ್ಲಿ ಹೇಳಿದ್ದಾರೆ.

ಮಣಿಪುರ ಹೊತ್ತಿ ಉರಿಯುತ್ತಿದೆ. ಬಾಲಸೋರ್ ರೈಲು ಅಪಘಾತದ ಹೊಣೆಯನ್ನು ಮುಸ್ಲಿಂ ಸಮುದಾಯದ ಮೇಲೆ ಹೊರಿಸಲು ನಿಮ್ಮ ಐಟಿ ಸೆಲ್ ಪ್ರಯತ್ನಿಸುತ್ತಿದೆ. ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರು ನಿಮ್ಮಲ್ಲಿ ಪ್ರಶ್ನೆ ಕೇಳಿದ ನಂತರ ಅವರನ್ನು ಟ್ರೋಲ್ ಮಾಡಿದವರನ್ನು ಶ್ವೇತಭವನ ಖಂಡಿಸಿದೆ ಎಂದು ಖೇರಾ ಹೇಳಿದ್ದಾರೆ.

ಸೋಮವಾರ, ಪ್ರಧಾನಿ ಮೋದಿ ತಮ್ಮ ಆರು ದಿನಗಳ ಅಮೆರಿಕ ಮತ್ತು ಈಜಿಪ್ಟ್ ಪ್ರವಾಸವನ್ನು ಮುಗಿಸಿ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಮತ್ತು ಇತರ ಬಿಜೆಪಿ ನಾಯಕರು ಬರಮಾಡಿಕೊಂಡರು. ವರದಿಗಳ ಪ್ರಕಾರ, ಭಾರತದಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಮೋದಿ ನಡ್ಡಾ ಅವರನ್ನು ವಿಚಾರಿಸಿದ್ದಾರೆ.

ಇಲ್ಲಿ ಏನು ನಡೆಯುತ್ತಿದೆ ಎಂದು ಅವರು ನಡ್ಡಾ ಜಿ ಅವರನ್ನು ಕೇಳಿದರು. ಅದಕ್ಕೆ ನಡ್ಡಾ ಅವರು, ತಮ್ಮ ಒಂಬತ್ತು ವರ್ಷಗಳ ಸರ್ಕಾರದ ವರದಿ ಕಾರ್ಡ್‌ನೊಂದಿಗೆ ಪಕ್ಷದ ನಾಯಕರು ಜನರನ್ನು ತಲುಪುತ್ತಿದ್ದಾರೆ. ದೇಶವು ಸಂತೋಷವಾಗಿದೆ ಎಂದು ಹೇಳಿದ್ದಾರೆ  ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: Mera Booth Sabse Majboot: ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು: ಪ್ರಧಾನಿ ಮೋದಿ

ಮಂಗಳವಾರ ಬೆಳಗ್ಗೆ, ಪ್ರಧಾನಿ ಮೋದಿ ಅವರು ಭೋಪಾಲ್‌ನ ಕಮಲಾಪತಿ ರೈಲು ನಿಲ್ದಾಣವನ್ನು ತಲುಪಿದ್ದು ಅಲ್ಲಿಂದ ಅವರು ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Tue, 27 June 23

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು