AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಕೇಳಿದ್ದಾರೆ; ನೋಡಿ ಹೀಗಾಗುತ್ತಿದೆ ಎಂದು ವಿಡಿಯೊ ಟ್ವೀಟ್ ಮಾಡಿದ ಕಾಂಗ್ರೆಸ್

ಭಾರತದಲ್ಲಿ ಏನಾಗುತ್ತಿದೆ ಎಂದು ತಿಳಿಯಬೇಕಾದರೆ ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ ಹೋಗಿ ಎಂದು ಪವನ್ ಖೇರಾ ವಿಡಿಯೊದಲ್ಲಿ ಹೇಳಿದ್ದಾರೆ.

ದೇಶದಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಕೇಳಿದ್ದಾರೆ; ನೋಡಿ ಹೀಗಾಗುತ್ತಿದೆ ಎಂದು ವಿಡಿಯೊ ಟ್ವೀಟ್ ಮಾಡಿದ ಕಾಂಗ್ರೆಸ್
ಪವನ್ ಖೇರಾ
ರಶ್ಮಿ ಕಲ್ಲಕಟ್ಟ
|

Updated on:Jun 27, 2023 | 1:50 PM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ವಿದೇಶ ಪ್ರವಾಸದಿಂದ ವಾಪಸ್ ಆಗುತ್ತಿದ್ದಂತೆ, ಪ್ರಧಾನಿಯವರೇ ಭಾರತದಲ್ಲಿ ಏನಾಗುತ್ತದೆ ಎಂಬುದರ ಬಗ್ಗೆ ನಿಮಗೆ ತಿಳಿಯಬೇಕಿತ್ತು ತಾನೇ? ಹಾಗಾದರೆ ತಿಳಿದುಕೊಳ್ಳಿ ಇಂಡಿಯಾ ಮೇ ಫಾಗ್ ಚಲ್ ರಹಾ ಹೈ ಎಂದು ವಿಡಿಯೊವೊಂದನ್ನು ಟ್ವೀಟ್ ಮಾಡಿದ್ದಾರೆ ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera). ಭಾರತದಲ್ಲಿ ಏನಾಗುತ್ತಿದೆ ಎಂದು ತಿಳಿಯಬೇಕಾದರೆ ಮಧ್ಯಪ್ರದೇಶದ ಚುನಾವಣಾ ಪ್ರವಾಸದ ಬದಲು ಮಣಿಪುರಕ್ಕೆ(Manipur) ಹೋಗಿ ಎಂದು ಪವನ್ ಖೇರಾ ವಿಡಿಯೊದಲ್ಲಿ ಹೇಳಿದ್ದಾರೆ.

ಮಣಿಪುರ ಹೊತ್ತಿ ಉರಿಯುತ್ತಿದೆ. ಬಾಲಸೋರ್ ರೈಲು ಅಪಘಾತದ ಹೊಣೆಯನ್ನು ಮುಸ್ಲಿಂ ಸಮುದಾಯದ ಮೇಲೆ ಹೊರಿಸಲು ನಿಮ್ಮ ಐಟಿ ಸೆಲ್ ಪ್ರಯತ್ನಿಸುತ್ತಿದೆ. ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರು ನಿಮ್ಮಲ್ಲಿ ಪ್ರಶ್ನೆ ಕೇಳಿದ ನಂತರ ಅವರನ್ನು ಟ್ರೋಲ್ ಮಾಡಿದವರನ್ನು ಶ್ವೇತಭವನ ಖಂಡಿಸಿದೆ ಎಂದು ಖೇರಾ ಹೇಳಿದ್ದಾರೆ.

ಸೋಮವಾರ, ಪ್ರಧಾನಿ ಮೋದಿ ತಮ್ಮ ಆರು ದಿನಗಳ ಅಮೆರಿಕ ಮತ್ತು ಈಜಿಪ್ಟ್ ಪ್ರವಾಸವನ್ನು ಮುಗಿಸಿ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಅವರನ್ನು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ವಿದೇಶಾಂಗ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಮತ್ತು ಇತರ ಬಿಜೆಪಿ ನಾಯಕರು ಬರಮಾಡಿಕೊಂಡರು. ವರದಿಗಳ ಪ್ರಕಾರ, ಭಾರತದಲ್ಲಿ ಏನಾಗುತ್ತಿದೆ ಎಂದು ಪ್ರಧಾನಿ ಮೋದಿ ನಡ್ಡಾ ಅವರನ್ನು ವಿಚಾರಿಸಿದ್ದಾರೆ.

ಇಲ್ಲಿ ಏನು ನಡೆಯುತ್ತಿದೆ ಎಂದು ಅವರು ನಡ್ಡಾ ಜಿ ಅವರನ್ನು ಕೇಳಿದರು. ಅದಕ್ಕೆ ನಡ್ಡಾ ಅವರು, ತಮ್ಮ ಒಂಬತ್ತು ವರ್ಷಗಳ ಸರ್ಕಾರದ ವರದಿ ಕಾರ್ಡ್‌ನೊಂದಿಗೆ ಪಕ್ಷದ ನಾಯಕರು ಜನರನ್ನು ತಲುಪುತ್ತಿದ್ದಾರೆ. ದೇಶವು ಸಂತೋಷವಾಗಿದೆ ಎಂದು ಹೇಳಿದ್ದಾರೆ  ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಸುದ್ದಿಗಾರರಿಗೆ ತಿಳಿಸಿದರು.

ಇದನ್ನೂ ಓದಿ: Mera Booth Sabse Majboot: ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು: ಪ್ರಧಾನಿ ಮೋದಿ

ಮಂಗಳವಾರ ಬೆಳಗ್ಗೆ, ಪ್ರಧಾನಿ ಮೋದಿ ಅವರು ಭೋಪಾಲ್‌ನ ಕಮಲಾಪತಿ ರೈಲು ನಿಲ್ದಾಣವನ್ನು ತಲುಪಿದ್ದು ಅಲ್ಲಿಂದ ಅವರು ಐದು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Tue, 27 June 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು