AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ

ಆರ್​ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್​ ಯಾದವ್​ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್​ ತೀರ್ಪು ನೀಡಿದೆ.

ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ
ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಲಾಲೂ ಪ್ರಸಾದ್​ ಯಾದವ್​
TV9 Web
| Edited By: |

Updated on: Feb 20, 2022 | 3:55 PM

Share

ಬಹುಕೋಟಿ ಮೇವು ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರ ಪರವಾಗಿ ಕಾಂಗ್ರೆಸ್​ ನಾಯಕಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮಾತನಾಡಿದ್ದಾರೆ. ತನ್ನೆದುರು ತಲೆಬಾಗದವರಿಗೆ ಯಾವುದಾದರೂ ಒಂದು ಮಾರ್ಗದಲ್ಲಿ ಸದಾ ಕಿರುಕುಳ ನೀಡುವುದು ಬಿಜೆಪಿ ರಾಜಕಾರಣದ ಒಂದು ಬಹುಮುಖ್ಯ ಅಂಶ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಆರ್​ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್​ ಯಾದವ್​ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್​ ತೀರ್ಪು ನೀಡಿದೆ. ಡೊರಾಂಡಾ ಖಜಾನೆಯಿಂದ 139.5 ಕೋಟಿ ಹಣವನ್ನು ಅಕ್ರಮವಾಗಿ ತೆಗೆದ ಇದು, ಮೇವು ಹಗರಣದ ಐದು ಮತ್ತು ಕೊನೇ ಕೇಸ್​ ಆಗಿದೆ. ಮೇವು ಹಗರಣಕ್ಕೆ ಸಂಬಂಧಪಟ್ಟ ಉಳಿದ ನಾಲ್ಕು ಪ್ರಕರಣಗಳಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಜೈಲು ಶಿಕ್ಷೆ ಆಗಿದ್ದು, ಸದ್ಯ ಜಾಮೀನು ಮೇಲೆ ಆಚೆ ಬಂದಿದ್ದರು. ಆದರೆ ಇದೀಗ ಐದನೇ ಕೇಸ್​​ನಲ್ಲಿ ದೋಷಿ ಎಂದು ಸಾಬೀತಾಗಿದೆ. ಲಾಲೂ ಪ್ರಸಾದ್ ಯಾದವ್​​ರನ್ನು ಸದ್ಯ ರಿಮ್ಸ್​ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಷ್ಟಾದ ಬಳಿಕ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದು ಬಿಜೆಪಿ ರಾಜಕಾರಣ. ಅವರ ಎದುರು ತಲೆಬಾಗದವರಿಗೆ ಕಿರುಕುಳ ನೀಡಲಾಗುತ್ತದೆ. ಅಂಥ ರಾಜಕೀಯದ ಭಾಗವಾಗಿಯೇ ಲಾಲೂ ಪ್ರಸಾದ್ ಯಾದವ್​ ಜಿ ಮೇಲೆ ದಾಳಿ ನಡೆಯುತ್ತಿದೆ. ಅವರಿಗೆ ನ್ಯಾಯ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಲಾಲೂ ಪ್ರಸಾದ್ ಯಾದವ್​ಗೆ ಹಿಂದಿನ ಪ್ರಕರಣಗಳಲ್ಲಿ ಜಾಮೀನು ನೀಡಿದ್ದು ಹೈಕೋರ್ಟ್ ಹೊರತು ಸಿಬಿಐ ಕೋರ್ಟ್ ಅಲ್ಲ. 73 ವರ್ಷದ ಲಾಲೂ ಆರೋಗ್ಯ ಕೂಡ ಸರಿಯಿಲ್ಲ. ನಾಳೆ ಫೆ.21ರಂದು ಲಾಲೂ ಪ್ರಸಾದ್ ಯಾದವ್​ಗೆ ಶಿಕ್ಷೆಯ ಪ್ರಮಾಣವನ್ನು ಸಿಬಿಐ ಕೋರ್ಟ್​ ವಿಧಿಸಲಿದೆ.

ಇದನ್ನೂ ಓದಿ: ಡ್ರಗ್ಸ್ ಪಿಡುಗಿನಿಂದ ಮಕ್ಕಳನ್ನು ಕಾಪಾಡುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!