AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ

ಆರ್​ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್​ ಯಾದವ್​ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್​ ತೀರ್ಪು ನೀಡಿದೆ.

ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ
ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಲಾಲೂ ಪ್ರಸಾದ್​ ಯಾದವ್​
TV9 Web
| Edited By: |

Updated on: Feb 20, 2022 | 3:55 PM

Share

ಬಹುಕೋಟಿ ಮೇವು ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರ ಪರವಾಗಿ ಕಾಂಗ್ರೆಸ್​ ನಾಯಕಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮಾತನಾಡಿದ್ದಾರೆ. ತನ್ನೆದುರು ತಲೆಬಾಗದವರಿಗೆ ಯಾವುದಾದರೂ ಒಂದು ಮಾರ್ಗದಲ್ಲಿ ಸದಾ ಕಿರುಕುಳ ನೀಡುವುದು ಬಿಜೆಪಿ ರಾಜಕಾರಣದ ಒಂದು ಬಹುಮುಖ್ಯ ಅಂಶ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಆರ್​ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್​ ಯಾದವ್​ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್​ ತೀರ್ಪು ನೀಡಿದೆ. ಡೊರಾಂಡಾ ಖಜಾನೆಯಿಂದ 139.5 ಕೋಟಿ ಹಣವನ್ನು ಅಕ್ರಮವಾಗಿ ತೆಗೆದ ಇದು, ಮೇವು ಹಗರಣದ ಐದು ಮತ್ತು ಕೊನೇ ಕೇಸ್​ ಆಗಿದೆ. ಮೇವು ಹಗರಣಕ್ಕೆ ಸಂಬಂಧಪಟ್ಟ ಉಳಿದ ನಾಲ್ಕು ಪ್ರಕರಣಗಳಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಜೈಲು ಶಿಕ್ಷೆ ಆಗಿದ್ದು, ಸದ್ಯ ಜಾಮೀನು ಮೇಲೆ ಆಚೆ ಬಂದಿದ್ದರು. ಆದರೆ ಇದೀಗ ಐದನೇ ಕೇಸ್​​ನಲ್ಲಿ ದೋಷಿ ಎಂದು ಸಾಬೀತಾಗಿದೆ. ಲಾಲೂ ಪ್ರಸಾದ್ ಯಾದವ್​​ರನ್ನು ಸದ್ಯ ರಿಮ್ಸ್​ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಷ್ಟಾದ ಬಳಿಕ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದು ಬಿಜೆಪಿ ರಾಜಕಾರಣ. ಅವರ ಎದುರು ತಲೆಬಾಗದವರಿಗೆ ಕಿರುಕುಳ ನೀಡಲಾಗುತ್ತದೆ. ಅಂಥ ರಾಜಕೀಯದ ಭಾಗವಾಗಿಯೇ ಲಾಲೂ ಪ್ರಸಾದ್ ಯಾದವ್​ ಜಿ ಮೇಲೆ ದಾಳಿ ನಡೆಯುತ್ತಿದೆ. ಅವರಿಗೆ ನ್ಯಾಯ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಲಾಲೂ ಪ್ರಸಾದ್ ಯಾದವ್​ಗೆ ಹಿಂದಿನ ಪ್ರಕರಣಗಳಲ್ಲಿ ಜಾಮೀನು ನೀಡಿದ್ದು ಹೈಕೋರ್ಟ್ ಹೊರತು ಸಿಬಿಐ ಕೋರ್ಟ್ ಅಲ್ಲ. 73 ವರ್ಷದ ಲಾಲೂ ಆರೋಗ್ಯ ಕೂಡ ಸರಿಯಿಲ್ಲ. ನಾಳೆ ಫೆ.21ರಂದು ಲಾಲೂ ಪ್ರಸಾದ್ ಯಾದವ್​ಗೆ ಶಿಕ್ಷೆಯ ಪ್ರಮಾಣವನ್ನು ಸಿಬಿಐ ಕೋರ್ಟ್​ ವಿಧಿಸಲಿದೆ.

ಇದನ್ನೂ ಓದಿ: ಡ್ರಗ್ಸ್ ಪಿಡುಗಿನಿಂದ ಮಕ್ಕಳನ್ನು ಕಾಪಾಡುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ