AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ

ಆರ್​ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್​ ಯಾದವ್​ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್​ ತೀರ್ಪು ನೀಡಿದೆ.

ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ
ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಲಾಲೂ ಪ್ರಸಾದ್​ ಯಾದವ್​
TV9 Web
| Updated By: Lakshmi Hegde|

Updated on: Feb 20, 2022 | 3:55 PM

Share

ಬಹುಕೋಟಿ ಮೇವು ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರ ಪರವಾಗಿ ಕಾಂಗ್ರೆಸ್​ ನಾಯಕಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮಾತನಾಡಿದ್ದಾರೆ. ತನ್ನೆದುರು ತಲೆಬಾಗದವರಿಗೆ ಯಾವುದಾದರೂ ಒಂದು ಮಾರ್ಗದಲ್ಲಿ ಸದಾ ಕಿರುಕುಳ ನೀಡುವುದು ಬಿಜೆಪಿ ರಾಜಕಾರಣದ ಒಂದು ಬಹುಮುಖ್ಯ ಅಂಶ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಆರ್​ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್​ ಯಾದವ್​ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್​ ತೀರ್ಪು ನೀಡಿದೆ. ಡೊರಾಂಡಾ ಖಜಾನೆಯಿಂದ 139.5 ಕೋಟಿ ಹಣವನ್ನು ಅಕ್ರಮವಾಗಿ ತೆಗೆದ ಇದು, ಮೇವು ಹಗರಣದ ಐದು ಮತ್ತು ಕೊನೇ ಕೇಸ್​ ಆಗಿದೆ. ಮೇವು ಹಗರಣಕ್ಕೆ ಸಂಬಂಧಪಟ್ಟ ಉಳಿದ ನಾಲ್ಕು ಪ್ರಕರಣಗಳಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಜೈಲು ಶಿಕ್ಷೆ ಆಗಿದ್ದು, ಸದ್ಯ ಜಾಮೀನು ಮೇಲೆ ಆಚೆ ಬಂದಿದ್ದರು. ಆದರೆ ಇದೀಗ ಐದನೇ ಕೇಸ್​​ನಲ್ಲಿ ದೋಷಿ ಎಂದು ಸಾಬೀತಾಗಿದೆ. ಲಾಲೂ ಪ್ರಸಾದ್ ಯಾದವ್​​ರನ್ನು ಸದ್ಯ ರಿಮ್ಸ್​ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಷ್ಟಾದ ಬಳಿಕ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದು ಬಿಜೆಪಿ ರಾಜಕಾರಣ. ಅವರ ಎದುರು ತಲೆಬಾಗದವರಿಗೆ ಕಿರುಕುಳ ನೀಡಲಾಗುತ್ತದೆ. ಅಂಥ ರಾಜಕೀಯದ ಭಾಗವಾಗಿಯೇ ಲಾಲೂ ಪ್ರಸಾದ್ ಯಾದವ್​ ಜಿ ಮೇಲೆ ದಾಳಿ ನಡೆಯುತ್ತಿದೆ. ಅವರಿಗೆ ನ್ಯಾಯ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಲಾಲೂ ಪ್ರಸಾದ್ ಯಾದವ್​ಗೆ ಹಿಂದಿನ ಪ್ರಕರಣಗಳಲ್ಲಿ ಜಾಮೀನು ನೀಡಿದ್ದು ಹೈಕೋರ್ಟ್ ಹೊರತು ಸಿಬಿಐ ಕೋರ್ಟ್ ಅಲ್ಲ. 73 ವರ್ಷದ ಲಾಲೂ ಆರೋಗ್ಯ ಕೂಡ ಸರಿಯಿಲ್ಲ. ನಾಳೆ ಫೆ.21ರಂದು ಲಾಲೂ ಪ್ರಸಾದ್ ಯಾದವ್​ಗೆ ಶಿಕ್ಷೆಯ ಪ್ರಮಾಣವನ್ನು ಸಿಬಿಐ ಕೋರ್ಟ್​ ವಿಧಿಸಲಿದೆ.

ಇದನ್ನೂ ಓದಿ: ಡ್ರಗ್ಸ್ ಪಿಡುಗಿನಿಂದ ಮಕ್ಕಳನ್ನು ಕಾಪಾಡುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ