AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ

ಆರ್​ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್​ ಯಾದವ್​ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್​ ತೀರ್ಪು ನೀಡಿದೆ.

ಲಾಲೂ ಪ್ರಸಾದ್ ಯಾದವ್​ ಬೆಂಬಲಕ್ಕೆ ನಿಂತ ಪ್ರಿಯಾಂಕಾ ಗಾಂಧಿ ವಾದ್ರಾ; ಬಿಜೆಪಿ ವಿರುದ್ಧ ವಾಗ್ದಾಳಿ
ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಲಾಲೂ ಪ್ರಸಾದ್​ ಯಾದವ್​
TV9 Web
| Edited By: |

Updated on: Feb 20, 2022 | 3:55 PM

Share

ಬಹುಕೋಟಿ ಮೇವು ಹಗರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರ ಪರವಾಗಿ ಕಾಂಗ್ರೆಸ್​ ನಾಯಕಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra) ಮಾತನಾಡಿದ್ದಾರೆ. ತನ್ನೆದುರು ತಲೆಬಾಗದವರಿಗೆ ಯಾವುದಾದರೂ ಒಂದು ಮಾರ್ಗದಲ್ಲಿ ಸದಾ ಕಿರುಕುಳ ನೀಡುವುದು ಬಿಜೆಪಿ ರಾಜಕಾರಣದ ಒಂದು ಬಹುಮುಖ್ಯ ಅಂಶ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಆರ್​ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್​ ಯಾದವ್​ ಅವರು 139.5 ಕೋಟಿ ರೂಪಾಯಿ ಡೊರಾಂಡಾ ಖಜಾನೆ ಪ್ರಕರಣದಲ್ಲೂ ದೋಷಿ ಎಂದು ಇತ್ತೀಚೆಗೆ ಸಿಬಿಐ ವಿಶೇಷ ಕೋರ್ಟ್​ ತೀರ್ಪು ನೀಡಿದೆ. ಡೊರಾಂಡಾ ಖಜಾನೆಯಿಂದ 139.5 ಕೋಟಿ ಹಣವನ್ನು ಅಕ್ರಮವಾಗಿ ತೆಗೆದ ಇದು, ಮೇವು ಹಗರಣದ ಐದು ಮತ್ತು ಕೊನೇ ಕೇಸ್​ ಆಗಿದೆ. ಮೇವು ಹಗರಣಕ್ಕೆ ಸಂಬಂಧಪಟ್ಟ ಉಳಿದ ನಾಲ್ಕು ಪ್ರಕರಣಗಳಲ್ಲಿ ಲಾಲೂ ಪ್ರಸಾದ್ ಯಾದವ್​ಗೆ ಜೈಲು ಶಿಕ್ಷೆ ಆಗಿದ್ದು, ಸದ್ಯ ಜಾಮೀನು ಮೇಲೆ ಆಚೆ ಬಂದಿದ್ದರು. ಆದರೆ ಇದೀಗ ಐದನೇ ಕೇಸ್​​ನಲ್ಲಿ ದೋಷಿ ಎಂದು ಸಾಬೀತಾಗಿದೆ. ಲಾಲೂ ಪ್ರಸಾದ್ ಯಾದವ್​​ರನ್ನು ಸದ್ಯ ರಿಮ್ಸ್​ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಷ್ಟಾದ ಬಳಿಕ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಇದು ಬಿಜೆಪಿ ರಾಜಕಾರಣ. ಅವರ ಎದುರು ತಲೆಬಾಗದವರಿಗೆ ಕಿರುಕುಳ ನೀಡಲಾಗುತ್ತದೆ. ಅಂಥ ರಾಜಕೀಯದ ಭಾಗವಾಗಿಯೇ ಲಾಲೂ ಪ್ರಸಾದ್ ಯಾದವ್​ ಜಿ ಮೇಲೆ ದಾಳಿ ನಡೆಯುತ್ತಿದೆ. ಅವರಿಗೆ ನ್ಯಾಯ ಸಿಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.

ಲಾಲೂ ಪ್ರಸಾದ್ ಯಾದವ್​ಗೆ ಹಿಂದಿನ ಪ್ರಕರಣಗಳಲ್ಲಿ ಜಾಮೀನು ನೀಡಿದ್ದು ಹೈಕೋರ್ಟ್ ಹೊರತು ಸಿಬಿಐ ಕೋರ್ಟ್ ಅಲ್ಲ. 73 ವರ್ಷದ ಲಾಲೂ ಆರೋಗ್ಯ ಕೂಡ ಸರಿಯಿಲ್ಲ. ನಾಳೆ ಫೆ.21ರಂದು ಲಾಲೂ ಪ್ರಸಾದ್ ಯಾದವ್​ಗೆ ಶಿಕ್ಷೆಯ ಪ್ರಮಾಣವನ್ನು ಸಿಬಿಐ ಕೋರ್ಟ್​ ವಿಧಿಸಲಿದೆ.

ಇದನ್ನೂ ಓದಿ: ಡ್ರಗ್ಸ್ ಪಿಡುಗಿನಿಂದ ಮಕ್ಕಳನ್ನು ಕಾಪಾಡುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ