AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಥಿ ಮಾಜಿ ಸಂಸದನಿಗೆ ದೇಗುಲದಲ್ಲಿ ಕುಳಿತುಕೊಳ್ಳುವುದು ಹೇಗೆಂದೇ ಗೊತ್ತಿಲ್ಲ: ಯೋಗಿ ಆದಿತ್ಯನಾಥ್​ ವಾಗ್ದಾಳಿ

ಇತ್ತೀಚೆಗೆ ರಾಹುಲ್​ ಗಾಂಧಿಯವರು ಪದೇಪದೆ ಹಿಂದುತ್ವ, ಹಿಂದೂವಾದದ ಬಗ್ಗೆ ಮಾತನಾಡುತ್ತಿರುವ ಬೆನ್ನಲ್ಲೇ ಯೋಗಿ ಆದಿತ್ಯನಾಥ್​ ಈ ಮಾತುಗಳನ್ನಾಡಿದ್ದಾರೆ. ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಮೇಥಿ ಮಾಜಿ ಸಂಸದನಿಗೆ ದೇಗುಲದಲ್ಲಿ ಕುಳಿತುಕೊಳ್ಳುವುದು ಹೇಗೆಂದೇ ಗೊತ್ತಿಲ್ಲ: ಯೋಗಿ ಆದಿತ್ಯನಾಥ್​ ವಾಗ್ದಾಳಿ
ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Jan 03, 2022 | 7:43 PM

Share

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಹಿಂದುತ್ವ, ಹಿಂದೂವಾದದ ಬಗ್ಗೆ ಏನೇನೂ ಗೊತ್ತಿಲ್ಲ. ಅದು ಬಿಡಿ, ದೇವಸ್ಥಾನದಲ್ಲಿ ಕುಳಿತುಕೊಳ್ಳುವುದು ಹೇಗೆಂದೂ ಗೊತ್ತಿಲ್ಲ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ (CM Yogi Adityanath) ಹೇಳಿದ್ದಾರೆ.  ಇಂದು ರಾಹುಲ್ ಗಾಂಧಿಯವರ ಮಾಜಿ ಲೋಕಸಭಾ ಕ್ಷೇತ್ರ ಅಮೇಥಿಯಲ್ಲಿ ಸಾರ್ವಜನಿಕ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು,  ಈ ಅಮೇಥಿಯ ಮಾಜಿ ಸಂಸದ (ರಾಹುಲ್ ಗಾಂಧಿ)ನಿಗೆ ದೇವಸ್ಥಾನದಲ್ಲಿ ಹೇಗೆ ಕುಳಿತುಕೊಳ್ಳಬೇಕು ಎಂಬುದೇ ಗೊತ್ತಿಲ್ಲ. ಅವರು ಭೇಟಿ ಕೊಟ್ಟಿದ್ದ ದೇಗುಲದ ಅರ್ಚಕರು ಹೇಳಿಕೊಡಬೇಕಾಯಿತು. ಆದರೆ ತಮ್ಮನ್ನು ತಾವು ಹೆಮ್ಮೆಯ ಹಿಂದು ಎಂದು ಹೇಳಿಕೊಳ್ಳುತ್ತಾರೆ. ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

ಇತ್ತೀಚೆಗೆ ರಾಹುಲ್​ ಗಾಂಧಿಯವರು ಪದೇಪದೆ ಹಿಂದುತ್ವ, ಹಿಂದೂವಾದದ ಬಗ್ಗೆ ಮಾತನಾಡುತ್ತಿರುವ ಬೆನ್ನಲ್ಲೇ ಯೋಗಿ ಆದಿತ್ಯನಾಥ್​ ಈ ಮಾತುಗಳನ್ನಾಡಿದ್ದಾರೆ. ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೊರೊನಾ ವೈರಸ್ ಸಾಂಕ್ರಾಮಿಕದ ಕಾಲದಲ್ಲಿ ಜನರಿಗೆ ಸಹಾಯ ಮಾಡಲು ಯಾವುದೇ ವಿರೋಧ ಪಕ್ಷದ ಒಬ್ಬೇ ಒಬ್ಬ ನಾಯಕ ಬರಲಿಲ್ಲ. ಕಾರ್ಯಕರ್ತರು ಮುಂದಾಗಲಿಲ್ಲ. ಇಲ್ಲಿನ ಕಾಂಗ್ರೆಸ್​, ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರು ಬರಲಿಲ್ಲ. ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲರೂ ಒಟ್ಟೊಟ್ಟಿಗೇ ಬರುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದೀಗ ರಾಜಕಾರಣದಲ್ಲಿ ವಿಭಜನೆ, ವಿಘಟನೆ ನೀತಿಯನ್ನು ಅಳವಡಿಸಿಕೊಂಡವರು ತಮ್ಮ ವಂಶೀಯರ ನೀತಿಯನ್ನೇ ಅನುಸರಿಸುತ್ತಿದ್ದಾರೆ. ಇಂಥವರ ಪೂರ್ವಜರು, ತಾವೆಲ್ಲ ಆಕಸ್ಮಿಕವಾಗಿ ಹಿಂದುಗಳಾಗಿ ಹುಟ್ಟಿದ್ದು ಎಂದು ಹೇಳಿಕೊಳ್ಳುತ್ತಿದ್ದರು. ಅವರನ್ನು ಅವರೆಂದು ಪರಿಪೂರ್ಣ ಹಿಂದುಗಳಂತೆ ಬಿಂಬಿಸಿಕೊಳ್ಳಲಿಲ್ಲ.  ಆದರೆ ನಾವು ಯಾವತ್ತೂ ಮುಚ್ಚುಮರೆ ಮಾಡುವುದಿಲ್ಲ. ನಮಗೆ ಹಿಂದುಗಳು ಎಂದು ಕರೆದುಕೊಳ್ಳಲು ಹಿಂಜರಿಕೆ ಇಲ್ಲ. ನಾನು ಹಿಂದೆ ಮುಖ್ಯಮಂತ್ರಿಯಾಗಿಲ್ಲದೆ ಇದ್ದಾಗಲೂ ಹಿಂದೂ ಎಂದೇ ಹೇಳಿಕೊಳ್ಳುತ್ತಿದ್ದೆ. ಈಗಲೂ ಅದನ್ನು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದೇನೆ ಎಂದು ಯೋಗಿ ಹೇಳಿದರು.

ಇದನ್ನೂ ಓದಿ: ಇಸ್ಲಮಾಬಾದ್​ಗೆ ಬರಲು ಇಷ್ಟವಿಲ್ಲದೆ ಇದ್ದರೆ, ವರ್ಚ್ಯುವಲ್ ಆಗಿ ಪಾಲ್ಗೊಳ್ಳಿ; ಸಾರ್ಕ್​ ಶೃಂಗಸಭೆಗೆ ಪಾಕಿಸ್ತಾನದಿಂದ ಭಾರತಕ್ಕೆ ಆಹ್ವಾನ !

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ