AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​​ಜೆಡಿ ನಾಯಕರನ್ನು ಭೇಟಿ ಮಾಡಿ ಲಾಲು ಪ್ರಸಾದ್ ಯಾದವ್​​ ತಯಾರಿಸಿದ ಮಟನ್ ಊಟ ಸವಿದ ರಾಹುಲ್ ಗಾಂಧಿ

ಲಾಲು ಯಾದವ್ ಅವರು ಬಿಹಾರದಿಂದ ದೇಸಿ ಮಟನ್ ಮತ್ತು ಮಸಾಲೆಗಳನ್ನು ತರಲು ವ್ಯವಸ್ಥೆ ಮಾಡಿದ್ದರು. ಬಿಹಾರದ ವಿಶೇಷ ಶೈಲಿಯಲ್ಲಿ ಮಟನ್ ಅನ್ನು ಹೇಗೆ ಬೇಯಿಸುತ್ತಾರೆ ಎಂಬುದನ್ನು ಅವರು ಕಾಂಗ್ರೆಸ್ ನಾಯಕರಿಗೆ ತೋರಿಸಿದರು ಎಂದು ಮೂಲಗಳು ತಿಳಿಸಿವೆ.

ಆರ್​​ಜೆಡಿ ನಾಯಕರನ್ನು ಭೇಟಿ ಮಾಡಿ ಲಾಲು ಪ್ರಸಾದ್ ಯಾದವ್​​ ತಯಾರಿಸಿದ ಮಟನ್ ಊಟ ಸವಿದ ರಾಹುಲ್ ಗಾಂಧಿ
ಲಾಲು ಪ್ರಸಾದ್ ಯಾದವ್- ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Aug 05, 2023 | 3:19 PM

Share

ದೆಹಲಿ ಆಗಸ್ಟ್ 05: “ಮೋದಿ ಉಪನಾಮ” ಮಾನನಷ್ಟ (Modi Surname Case) ಪ್ರಕರಣದಲ್ಲಿ ಶಿಕ್ಷೆಗೆ ಸುಪ್ರೀಂಕೋರ್ಟ್ (Supreme Court) ತಡೆಯಾಜ್ಞೆ ನೀಡಿದ ಕೆಲವೇ ಗಂಟೆಗಳ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಭೋಜನಕೂಟದಲ್ಲಿ ಭೇಟಿಯಾಗಿದ್ದಾರೆ. ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥರು ರಾಹುಲ್ ಗಾಂಧಿಗೆ ಪುಷ್ಪಗುಚ್ಛವನ್ನು ನೀಡಿ ಸ್ವಾಗತಿಸಿದ್ದು, ನಂತರ ಮಟನ್ ಊಟ ಸವಿದಿದ್ದಾರೆ. ಲಾಲು ಯಾದವ್ ಅವರೇ ಮಟನ್ ಊಟ ಸಿದ್ಧಪಡಿಸಿದ್ದರು ಎಂಬುದು ವಿಶೇಷ. ಈ ಹಿಂದೆ ಚಾಟ್ ಶೋವೊಂದರಲ್ಲಿ ಲಾಲು ಅವರ ಅಡುಗೆ ಬಗ್ಗೆ ರಾಹುಲ್ ಹೊಗಳಿದ್ದರು.

ವಿಪಕ್ಷಗಳ ಒಕ್ಕೂಟ I.N.D.I.A ರೂಪುಗೊಂಡ ನಂತರ ಆರ್‌ಜೆಡಿ ಸಂಸದೆ ಮಿಸಾ ಭಾರ್ತಿ ಅವರ ದೆಹಲಿ ನಿವಾಸದಲ್ಲಿ ನಡೆದ ಈ ಸಭೆಯು ಮಹತ್ವದ್ದಾಗಿದೆ. ಈ ಸಭೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡಾ ಪಾಲ್ಗೊಂಡಿದ್ದಾರೆ.

ರಾಹುಲ್ ಗಾಂಧಿ ಮತ್ತು ಲಾಲು ಯಾದವ್ ರಾಜಕೀಯದ ಬಗ್ಗೆ ಹೆಚ್ಚು ಚರ್ಚೆ ನಡೆಸಿದ್ದರೂ, ಇಬ್ಬರೂ ಸಣ್ಣ-ಪುಟ್ಟ ಮಾತುಕತೆಯಲ್ಲಿ ಸ್ವಲ್ಪ ಸಮಯ ಕಳೆದಿದ್ದು ತಮ್ಮ ಊಟವನ್ನು ಆನಂದಿಸಿದರು ಎಂದು ಈ ಬಗ್ಗೆ ತಿಳಿದಿರುವ ಜನರು ಹೇಳಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಲಾಲು ಯಾದವ್ ಅವರು ಬಿಹಾರದಿಂದ ದೇಸಿ ಮಟನ್ ಮತ್ತು ಮಸಾಲೆಗಳನ್ನು ತರಲು ವ್ಯವಸ್ಥೆ ಮಾಡಿದ್ದರು. ಬಿಹಾರದ ವಿಶೇಷ ಶೈಲಿಯಲ್ಲಿ ಮಟನ್ ಅನ್ನು ಹೇಗೆ ಬೇಯಿಸುತ್ತಾರೆ ಎಂಬುದನ್ನು ಅವರು ಕಾಂಗ್ರೆಸ್ ನಾಯಕರಿಗೆ ತೋರಿಸಿದರು ಎಂದು ಮೂಲಗಳು ತಿಳಿಸಿವೆ.

ಬಿಹಾರದ ಚಂಪಾರಣ್ ಮಟನ್ ತನ್ನ ವಿಶಿಷ್ಟವಾದ ಅಡುಗೆ ಶೈಲಿ ಮತ್ತು ರುಚಿಗೆ ಹೆಸರುವಾಸಿಯಾಗಿದೆ. ರಾಹುಲ್ ಗಾಂಧಿ ಅವರು ಆರ್‌ಜೆಡಿ ಮುಖ್ಯಸ್ಥರ ಆರೋಗ್ಯದ ಬಗ್ಗೆಯೂ ವಿಚಾರಿಸಿದ್ದಾರೆ.

ಇದನ್ನೂ ಓದಿ: ಶಿಕ್ಷೆಗೆ ಸುಪ್ರೀಂ ತಡೆಯಾಜ್ಞೆ: ಸಂಸತ್​​ನ ಮುಂಗಾರು ಅಧಿವೇಶನದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲು ಸಾಧ್ಯವಾಗಬಹುದೇ?

ರಾಹುಲ್ ಗಾಂಧಿಯವರ ಶಿಕ್ಷೆಗೆ ಸುಪ್ರೀಂ ತಡೆಯಾಜ್ಞೆ ನೀಡಿರುವುದರಿಂದ ಅವರಿಗೆ ಸಂಸತ್ತಿಗೆ ಮರಳಬಹುದು. ಲೋಕಸಭೆಯ ಸೆಕ್ರೆಟರಿಯೇಟ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ? ಮಂಗಳವಾರದಿಂದ ಪ್ರಾರಂಭವಾಗಲಿರುವ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಅವರು ಭಾಗವಹಿಸಲು ಸಾಧ್ಯವಾಗುತ್ತದೆಯೇ ಎಂಬುದು ಈಗ ದೊಡ್ಡ ಪ್ರಶ್ನೆಗಳಾಗಿವೆ.

ಕಾನೂನಾತ್ಮಕವಾಗಿ, ಕಾಂಗ್ರೆಸ್ ನಾಯಕ 2019 ರ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ವಿಚಾರಣಾ ನ್ಯಾಯಾಲಯದ ಮಾರ್ಚ್ ಆದೇಶವನ್ನು ಪ್ರಶ್ನಿಸಿದ್ದಾರೆ, ಇದು ಅವರ ಅನರ್ಹತೆಗೆ ಕಾರಣವಾಯಿತು. ಸೂರತ್‌ನ ಸೆಷನ್ಸ್ ನ್ಯಾಯಾಲಯವು ಆಗಸ್ಟ್ 21 ರಂದು ಅವರನ್ನು ಅಪರಾಧಿ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ತೀರ್ಪಿನ ವಿರುದ್ಧದ ಮೇಲ್ಮನವಿಯನ್ನು ವಿಚಾರಣೆ ನಡೆಸಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!