Rahul Gandhi: ಸಂಸದ ಸ್ಥಾನದಿಂದ ಅನರ್ಹರಾದ ರಾಹುಲ್ ಗಾಂಧಿ, ಮುಂದೇನು?

ರಾಹುಲ್ ಗಾಂಧಿ ಅವರನ್ನು ಮಾರ್ಚ್ 23, 2023 ರಿಂದ ಆರ್ಟಿಕಲ್ 102(1)(ಇ) ನ ನಿಬಂಧನೆಗಳ ಪ್ರಕಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಭಾರತದ ಸಂವಿಧಾನವು 1951 ರ ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 8 ರೊಂದಿಗೆ ಹೇಳಿರುವಂತೆ ಈ ಕ್ರಮವನ್ನು ಜಾರಿಗೊಳಿಸಲಾಗಿದೆ ಎಂದು ಲೋಕಸಭೆಯ ಕಾರ್ಯದರ್ಶಿ ಇಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

Rahul Gandhi: ಸಂಸದ ಸ್ಥಾನದಿಂದ ಅನರ್ಹರಾದ ರಾಹುಲ್ ಗಾಂಧಿ, ಮುಂದೇನು?
ರಾಹುಲ್ ಗಾಂಧಿ
Follow us
|

Updated on:Mar 24, 2023 | 3:21 PM

ದೆಹಲಿ: ಗುಜರಾತ್‌ನ ನ್ಯಾಯಾಲಯವು 2019ರ ಮಾನನಷ್ಟ ಮೊಕದ್ದಮೆಯಲ್ಲಿ (2019 defamation case) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ (Rahul Gandhi) ಶಿಕ್ಷೆ ವಿಧಿಸಿರುವುದರಿಂದ ಅವರು ಇಂದು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹರಾಗಿದ್ದಾರೆ. ಶಿಕ್ಷೆ ವಿಧಿಸಿದ ನಂತರ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಲಾಗಿದ್ದು ಮೇಲ್ಮನವಿ ಸಲ್ಲಿಸಲು ಅವರ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಲಾಗಿತ್ತು. 1951ರ ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 8(3) ಹೇಳುವಂತೆ ಸಂಸತ್ತಿನ ಸದಸ್ಯರು ಯಾವುದೇ ಅಪರಾಧಕ್ಕೆ ತಪ್ಪಿತಸ್ಥರೆಂದು ಮತ್ತು ಕನಿಷ್ಠ ಎರಡು ವರ್ಷಗಳವರೆಗೆ ಶಿಕ್ಷೆಗೆ ಗುರಿಯಾದ ಕ್ಷಣ, ಅವರು ಅನರ್ಹರಾಗುತ್ತಾರೆ. ತಜ್ಞರ ಪ್ರಕಾರ, ಸೂರತ್ ನ್ಯಾಯಾಲಯದ ಆದೇಶದ ಆಧಾರದ ಮೇಲೆ, ಲೋಕಸಭಾ ಸಚಿವಾಲಯವು ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದರೆ ಅವರ ಕ್ಷೇತ್ರವನ್ನು ಖಾಲಿ ಎಂದು ಘೋಷಿಸಬಹುದು. ನಂತರ ಚುನಾವಣಾ ಆಯೋಗವು ಆ ಸ್ಥಾನಕ್ಕೆ ವಿಶೇಷ ಚುನಾವಣೆಯನ್ನು ಘೋಷಿಸುತ್ತದೆ.

ರಾಹುಲ್ ಗಾಂಧಿ ಅವರನ್ನು ಮಾರ್ಚ್ 23, 2023 ರಿಂದ ಆರ್ಟಿಕಲ್ 102(1)(ಇ) ನ ನಿಬಂಧನೆಗಳ ಪ್ರಕಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಭಾರತದ ಸಂವಿಧಾನವು 1951 ರ ಜನಪ್ರತಿನಿಧಿ ಕಾಯಿದೆಯ ಸೆಕ್ಷನ್ 8 ರೊಂದಿಗೆ ಹೇಳಿರುವಂತೆ ಈ ಕ್ರಮವನ್ನು ಜಾರಿಗೊಳಿಸಲಾಗಿದೆ ಎಂದು ಲೋಕಸಭೆಯ ಕಾರ್ಯದರ್ಶಿ ಇಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.

ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ಗುರುವಾರ ದೋಷಿ ಎಂದು ಸಾಬೀತಾಗಿದೆ. ಹೀಗಿರುವಾಗ ಅನರ್ಹತೆಯು ಶಿಕ್ಷೆಯ ದಿನಾಂಕದಿಂದ ಜಾರಿಗೆ ಬರುತ್ತದೆ. ಆದಾಗ್ಯೂ, ರಾಹುಲ್ ಗಾಂಧಿಯವರು ಸದಸ್ಯರಾಗಿರುವ ಸಂಸತ್ತಿನ ಕೆಳಮನೆಯ ಸಚಿವಾಲಯವು ಅಂಗೀಕರಿಸಿದರೆ ಮಾತ್ರ ಔಪಚಾರಿಕ ಅನರ್ಹತೆ ಆಗುತ್ತದೆ.

ನ್ಯಾಯಾಲಯ ಶಿಕ್ಷೆಯನ್ನು ಮಾತ್ರ ಅಮಾನತುಗೊಳಿಸಿದರೆ, ಅದು ಸಾಕಾಗುವುದಿಲ್ಲ. ಅಮಾನತು ತಡೆ ನೀಡಬೇಕು. ಶಿಕ್ಷೆಗೆ ತಡೆ ನೀಡಿದರೆ ಮಾತ್ರ ಅವರು (ಗಾಂಧಿ) ಸಂಸತ್ ಸದಸ್ಯರಾಗಿ ಉಳಿಯಬಹುದು ಎಂದು ಕಾಂಗ್ರೆಸ್ ಪಕ್ಷದ ಮಾಜಿ ಸದಸ್ಯರೂ, ಖ್ಯಾತ ವಕೀಲರೂ ಆಗಿರುವ ಕಪಿಲ್ ಸಿಬಲ್ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹ

 ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸಬಹುದೇ?

ಚುನಾವಣೆಗೆ ಮುನ್ನ ಉನ್ನತ ನ್ಯಾಯಾಲಯವು ತನ್ನ ಅಪರಾಧವನ್ನು ಅಮಾನತುಗೊಳಿಸದಿದ್ದರೆ ಅಥವಾ ರದ್ದುಗೊಳಿಸದಿದ್ದರೆ 2024 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಹುಲ್ ಗಾಂಧಿಗೆ ಸಾಧ್ಯವಿಲ್ಲ. ಶಿಕ್ಷೆಗೊಳಗಾದ ಶಾಸಕರು ತಮ್ಮ ಜೈಲು ಶಿಕ್ಷೆ ಮುಗಿದ ನಂತರ ಆರು ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಕಾನೂನು  ಹೇಳುತ್ತದೆ.

2013ರಿಂದ ಅನರ್ಹಗೊಂಡ ಶಾಸಕ, ಸಂಸದರು

2013 ರಿಂದ, ಅನೇಕ ಸಂಸದರು/ಶಾಸಕರು ತಮ್ಮ ಅಪರಾಧ ಸಾಬೀತಾದ ತಕ್ಷಣ ಅನರ್ಹರಾಗಿದ್ದಾರೆ. ಇವರು ಎರಡು ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಲಾಲು ಪ್ರಸಾದ್ ಯಾದವ್, ಆಗಿನ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ, ರಾಜ್ಯಸಭಾ ಸಂಸದ ರಶೀದ್ ಮಸೂದ್, ಶಾಸಕರಾದ ಅಜಂ ಖಾನ್ ಮತ್ತು ಅಬ್ದುಲ್ಲಾ ಅಜಂ ಖಾನ್, ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಈ ಪಟ್ಟಿಯಲ್ಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Fri, 24 March 23

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ