AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಮೋದಿ ಉಪನಾಮ ಹೇಳಿಕೆ; ರಾಹುಲ್​ ಗಾಂಧಿ ಮೇಲ್ಮನವಿ ವಿಚಾರಣೆಗೆ ಸಮ್ಮತಿ, ಜಾಮೀನು ವಿಸ್ತರಣೆ

ಮೋದಿ ಉಪನಾಮ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಅವರ ಮೇಲ್ಮನವಿ ಅರ್ಜಿಯ ವಿಚಾರಣೆಗೆ ಗುಜರಾತ್​​ನ ಸೂರತ್​​ನ ಸೆಷನ್ಸ್ ಕೋರ್ಟ್ ಸಮ್ಮತಿಸಿದೆ. ಜತೆಗೆ ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರು ಮಾಡಿದೆ.

Ganapathi Sharma
| Updated By: ಅಕ್ಷಯ್​ ಪಲ್ಲಮಜಲು​​|

Updated on:Apr 03, 2023 | 5:26 PM

Share

ಸೂರತ್: ಮೋದಿ ಉಪನಾಮ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  (Rahul Gandhi) ಅವರ ಮೇಲ್ಮನವಿ ಅರ್ಜಿಯ ವಿಚಾರಣೆಗೆ ಗುಜರಾತ್​​ನ ಸೂರತ್​​ನ ಸೆಷನ್ಸ್ ಕೋರ್ಟ್ ಸೋಮವಾರ ಸಮ್ಮತಿಸಿದೆ. ಜತೆಗೆ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಜಾಮೀನನ್ನು ಏಪ್ರಿಲ್ 13ರ ವರೆಗೆ ವಿಸ್ತರಣೆ ಮಾಡಿದೆ. ಏಪ್ರಿಲ್ 13ರಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ದೋಷಿ ಎಂದು ಇತ್ತೀಚೆಗೆ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಜತೆಗೆ ಮೇಲ್ಮನವಿ ಸಲ್ಲಿಕೆಗೆ ಕಾಲಾವಕಾಶ ನೀಡಿ, ಅಲ್ಲಿಯವರೆಗೆ ಜಾಮೀನು ಮಂಜೂರು ಮಾಡಲಾಗಿದೆ ಎಂದು ತಿಳಿಸಿತ್ತು. ಇದರ ಬೆನ್ನಲ್ಲೇ ರಾಹುಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಇದೀಗ ರಾಹುಲ್ ಗಾಂಧಿ ಅವರು ಸೂರತ್ ಸೆಷನ್ಸ್ ಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಕೆಲವೇ ದಿನಗಳಲ್ಲಿ, ಸಂಸದರ ಅಧಿಕೃತ ನಿವಾಸವನ್ನು ತೊರೆಯುವಂತೆಯೂ ಅವರಿಗೆ ಸೂಚಿಸಲಾಗಿದೆ. ಇದಕ್ಕೆ, ಏಪ್ರಿಲ್ 22ರ ಗಡುವು ನೀಡಲಾಗಿತ್ತು. ಇದೀಗ ಅದಕ್ಕೂ ಮುನ್ನ ರಾಹುಲ್ ಅವರ ಮೇಲ್ಮನವಿ ಅರ್ಜಿಯ ವಿಚಾರಣೆಗೆ ಸೆಷನ್ಸ್ ಕೋರ್ಟ್ ದಿನಾಂಕ ನಿಗದಿ ಮಾಡಿರುವುದು ಕುತೂಹಲ ಮೂಡಿಸಿದೆ.

ಈ ಮಧ್ಯೆ, ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ವಿಚಾರದಲ್ಲಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿದೆ. ಲೋಕಸಭೆ ಮತ್ತು ರಾಜ್ಯಸಭಾ ಸಂಸದರು ಸೋಮವಾರ ಕೂಡ ಕಪ್ಪು ಬಟ್ಟೆ ಧರಿಸಿ ಸಂಸತ್ತಿಗೆ ಆಗಮಿಸಿದ್ದರು. ಪ್ರತಿಪಕ್ಷಗಳ ಗದ್ದಲದ ಕಾರಣ ಕಲಾಪವನ್ನು ಮುಂದೂಡಲಾಗಿದೆ.

ಇದನ್ನೂ ಓದಿ: ವಯನಾಡಿನಿಂದ ಸ್ಪರ್ಧಿಸಿದ್ದ ಇನ್ನೊಬ್ಬ ರಾಹುಲ್ ಗಾಂಧಿ ಕೂಡ ಅನರ್ಹ; ಯಾರು ಇವರು?

2019 ರ ಚುನಾವಣೆಗೆ ಪೂರ್ವಭಾವಿಯಾಗಿ ಕೋಲಾರದಲ್ಲಿ ನಡೆದ ರ್ಯಾಲಿಯಲ್ಲಿ, ಪರಾರಿಯಾದ ಉದ್ಯಮಿಗಳಾದ ಲಲಿತ್ ಮೋದಿ ಮತ್ತು ನೀರವ್ ಮೋದಿಯನ್ನು ಉಲ್ಲೇಖಿಸಿ ಎಲ್ಲಾ ಕಳ್ಳರಿಗೂ ಮೋದಿ ಎಂಬ ಸರ್ ನೇಮ್ ಯಾಕಿದೆ ಎಂದು ರಾಹುಲ್ ಕೇಳಿದ್ದರು. ಇದನ್ನು ಇತರೆ ಹಿಂದುಳಿದ ವರ್ಗಗಳಿಗೆ ಮಾಡಿದ ಅವಮಾನ ಎಂದು ಬಿಜೆಪಿ ಆರೋಪಿಸಿತ್ತು. ಗುಜರಾತ್‌ನ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ತಮ್ಮ ಹೇಳಿಕೆಗೆ ಕ್ಷಮೆಯಾಚಿಸಲು ರಾಹುಲ್ ನಿರಾಕರಿಸಿದ್ದರು. ಪ್ರಕರಣದ ವಿಚಾರಣೆ ನಡೆದು, ನ್ಯಾಯಾಲಯವು ಅವರನ್ನು ದೋಷಿ ಎಂದು ಪರಿಗಣಿಸಿದ್ದರ ಜತೆಗೆ ಜೈಲು ಶಿಕ್ಷೆಯನ್ನೂ ಪ್ರಕಟಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:25 pm, Mon, 3 April 23

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್