AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆಗೆ ಕೊರತೆ ಇರುವಾಗ ಟ್ವಿಟರ್ ಬ್ಲೂ ಟಿಕ್ ಬಗ್ಗೆ ಚರ್ಚೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ಹಾಗೂ ಇನ್ನಿತರ ಕೆಲ ನಾಯಕರ ಟ್ವಿಟರ್ ಖಾತೆಯ ಬ್ಲೂ ಟಿಕ್​ನ್ನು ಟ್ವಿಟರ್ ಸಂಸ್ಥೆ ತೆಗೆದಿತ್ತು.

ಲಸಿಕೆಗೆ ಕೊರತೆ ಇರುವಾಗ ಟ್ವಿಟರ್ ಬ್ಲೂ ಟಿಕ್ ಬಗ್ಗೆ ಚರ್ಚೆ: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಟೀಕೆ
ರಾಹುಲ್ ಗಾಂಧಿ
TV9 Web
| Edited By: |

Updated on:Jun 06, 2021 | 4:53 PM

Share

ದೆಹಲಿ: ಕೊರೊನಾ ಸೋಂಕು ವಿರುದ್ಧದ ಲಸಿಕೆಗೆ ಕೊರತೆ ಇರುವಾಗ, ಟ್ವಿಟರ್​ನಲ್ಲಿ ಬ್ಲೂ ಟಿಕ್ ವಿಚಾರವಾಗಿ ಚರ್ಚೆಯಲ್ಲಿ ತೊಡಗಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊವಿಡ್-19 ಲಸಿಕೆ ಹಾಗೂ ಟ್ವಿಟರ್ ಬ್ಲೂ ಟಿಕ್ ಬಗ್ಗೆ ವ್ಯಂಗ್ಯವಾಗಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಯಾರಿಗಾದರೂ ಕೊವಿಡ್ ಲಸಿಕೆ ಬೇಕಾದರೆ ಅವರು ಆತ್ಮನಿರ್ಭರರಾಗಿ ಇರಬೇಕಷ್ಟೆ. ಸ್ವಾವಲಂಬಿಯಾಗಿರಬೇಕು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಟ್ವಿಟರ್​ನಲ್ಲಿ ಬ್ಲೂ ಟಿಕ್​ಗಾಗಿ ಜಗಳಾಡುವುದರಲ್ಲಿ ತೊಡಗಿದೆ ಎಂದು ಟೀಕಿಸಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ಹಾಗೂ ಇನ್ನಿತರ ಕೆಲ ನಾಯಕರ ಟ್ವಿಟರ್ ಖಾತೆಯ ಬ್ಲೂ ಟಿಕ್​ನ್ನು ಟ್ವಿಟರ್ ಸಂಸ್ಥೆ ತೆಗೆದಿತ್ತು. ಕೇಂದ್ರ ಸರ್ಕಾರ, ಹೊಸ ನಿಯಮಾವಳಿಗಳನ್ನು ಅನುಮೋದಿಸುವಂತೆ ಟ್ವಿಟರ್​ಗೆ ಅಂತಿಮ ಸೂಚನೆ ಕೊಟ್ಟಿತ್ತು. ಆ ಬಳಿಕ ಈ ಘಟನೆಗಳು ನಡೆದಿದ್ದವು.

ಬ್ಲೂ ಟಿಕ್, ಆಯಾ ಟ್ವಿಟರ್ ಖಾತೆ ಅಧಿಕೃತ ಎಂದು ಸೂಚಿಸಲು ಬಳಸುವ ಮಾನದಂಡವಾಗಿದೆ. ಸದ್ಯ ಭಾರತದಲ್ಲಿ ಒಟ್ಟು 23,13,22,417 ಡೋಸ್ ಲಸಿಕೆ ನೀಡಿಕಡಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಈ ವರ್ಷದ ಡಿಸೆಂಬರ್ ಒಳಗಾಗಿ 108 ಕೋಟಿ ಭಾರತೀಯರಿಗೆ ಲಸಿಕೆ ನೀಡುವ ಬಗ್ಗೆ ಕೇಂದ್ರ ಹೇಳಿಕೆ ನೀಡಿದೆ.

ಆರ್​​ಎಸ್​​ಎಸ್​ನ ನಾಯಕ ಮೋಹನ್​ ಭಾಗವತ್,​​ ಸುರೇಶ್​ ಜೋಶಿ, ಅರುಣ್​ ಕುಮಾರ್​, ಕೃಷ್ಣನ್​ ಗೋಪಾಲ್​ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲೂಟಿಕ್​​​ಗಳು ನಿನ್ನೆ (ಜೂನ್ 5) ಬೆಳಗ್ಗೆ ಮಾಯವಾಗಿತ್ತು. ಈ ಬಗ್ಗೆ ನಾವು ಟ್ವಿಟರ್​ಗೆ ತಿಳಿಸಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ರಾಜೀವ್​ ತುಳಿ ಎಂಬುವರು ಟ್ವೀಟ್ ಮಾಡಿದ್ದರು. ಟ್ವಿಟರ್​​ನಲ್ಲಿ​ ಯಾವುದೇ ಗಣ್ಯರು ಈ ಬ್ಲೂಟಿಕ್​ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು. ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್​ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ತುಂಬದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್​ಗಳನ್ನು ತೆಗೆದುಹಾಕಿದೆ.

ಇನ್ನು ಯಾವುದೇ ಅಕೌಂಟ್​​ಗೆ ಬ್ಲೂಟಿಕ್​ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್​​ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್​ ತನ್ನ ವೆರಿಫಿಕೇಶನ್​ ನಿಯಮದಲ್ಲೇ ಉಲ್ಲೇಖಿಸಿದೆ. ಈಗ ವೆಂಕಯ್ಯ ನಾಯ್ಡು ವೈಯಕ್ತಿಕ ಖಾತೆಯ ಬ್ಲೂಟಿಕ್​ ತೆಗೆದುಹಾಕಿದ್ದ ಟ್ವಿಟರ್​, ಆಕ್ಷೇಪಣೆಗಳು ವ್ಯಕ್ತವಾದ ಬೆನ್ನಲ್ಲೇ ಅದನ್ನು ಮತ್ತೆ ನೀಡಿತ್ತು.

ಇದನ್ನೂ ಓದಿ: ಕೇಂದ್ರ ಸರ್ಕಾರ ಕೊರೊನಾ ಬಗ್ಗೆ ಅರ್ಥಮಾಡಿಕೊಂಡಿಲ್ಲ; ಲಸಿಕಾ ಅಭಿಯಾನ ಸಮರ್ಪಕವಾಗಿಲ್ಲ: ರಾಹುಲ್ ಗಾಂಧಿ ವಾಗ್ದಾಳಿ

ಮೋಹನ್​ ಭಾಗವತ್​ ಸೇರಿ ಆರ್​ಎಸ್​ಎಸ್​ನ ಪ್ರಮುಖ ನಾಯಕರ ಟ್ವಿಟರ್ ಖಾತೆಯ ಬ್ಲ್ಯೂಟಿಕ್ ಕೂಡ ಮಾಯ..!

Published On - 4:43 pm, Sun, 6 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ