AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಕೇರಳದಲ್ಲಿ ಆಟೋದಲ್ಲೇ ಪ್ರಯಾಣ ಮಾಡಿದ ರಾಹುಲ್ ಗಾಂಧಿ; ಚಾಲಕ ನನ್ನ ಬಳಿ ನೋವು ಹೇಳಿಕೊಂಡರು ಎಂದ ಕಾಂಗ್ರೆಸ್ ನಾಯಕ

Rahul Gandhi Viral Video: ಬಿಜೆಪಿ ಸತತವಾಗಿ ಪೆಟ್ರೋಲ್​, ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಿದೆ. ಹಣವನ್ನೆಲ್ಲ ಅವರ ಸ್ನೇಹವಲಯಕ್ಕೆ ಮೀಸಲಾಗಿಡುತ್ತಿದೆ. ಇಷ್ಟಾದ ಮೇಲೆ ಕೂಡ ಇಲ್ಲಿಗೆ ಬಂದು ನಿಮ್ಮ ಬಳಿ ಮತ ಕೇಳುತ್ತಾರಲ್ಲ? ಅವರಿಗೆ ಎಷ್ಟು ಧೈರ್ಯ ಇರಬೇಡ ! ಎಂದು ಪ್ರಶ್ನಿಸಿದರು.

Rahul Gandhi: ಕೇರಳದಲ್ಲಿ ಆಟೋದಲ್ಲೇ ಪ್ರಯಾಣ ಮಾಡಿದ ರಾಹುಲ್ ಗಾಂಧಿ; ಚಾಲಕ ನನ್ನ ಬಳಿ ನೋವು ಹೇಳಿಕೊಂಡರು ಎಂದ ಕಾಂಗ್ರೆಸ್ ನಾಯಕ
ಆಟೋದಲ್ಲಿ ಪ್ರಯಾಣ ಮಾಡಿದ ರಾಹುಲ್ ಗಾಂಧಿ
Lakshmi Hegde
| Edited By: |

Updated on:Apr 05, 2021 | 12:27 PM

Share

ತಿರುವನಂತಪುರಂ: ವಿಧಾನಸಭೆ ಚುನಾವಣೆ ಪ್ರಚಾರದ ನಿಮಿತ್ತ ಕೇರಳದಲ್ಲಿ ಇರುವ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಭಾನುವಾರ ಈಸ್ಟರ್​ ನಿಮಿತ್ತ ವಯಾನಾಡಿನಲ್ಲಿ ಅನಾಥಮಕ್ಕಳ ಜತೆ ಔತಣಕೂಟ ನಡೆಸಿದ್ದಾರೆ. ಮಕ್ಕಳ ಜತೆ ಊಟ ಮಾಡಿದ ಅವರು, ಈ ವೇಳೆ ಪ್ರಿಯಾಂಕಾ ಗಾಂಧಿಯವರಿಗೆ ವಿಡಿಯೋ ಕಾಲ್​ ಕೂಡ ಮಾಡಿದ್ದರು. ಈ ವಿಡಿಯೋ ಕೂಡ ವೈರಲ್ ಆಗಿತ್ತು. ಹಾಗೇ ಇನ್ನೊಂದು ವಿಡಿಯೋ ಕೂಡ ವೈರಲ್​ ಆಗಿದ್ದು, ಅದರಲ್ಲಿ ರಾಹುಲ್ ಗಾಂಧಿ ಆಟೋದಲ್ಲಿ ಪ್ರಯಾಣ ಮಾಡಿದ್ದನ್ನು ನೋಡಹುದು.

ಏಪ್ರಿಲ್ 6 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೇರಳದಲ್ಲಿ ಸಕ್ರಿಯ ಪ್ರಚಾರದಲ್ಲಿ ತೊಡಗಿದ್ದಾರೆ. ಹಾಗೇ ನಿನ್ನೆ ಪ್ರಚಾರದ ಕೊನೇ ದಿನವಾಗಿತ್ತು. ಈ ವೇಳೆ ರಾಹುಲ್ ಗಾಂಧಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು, ಹೆಲಿಪ್ಯಾಡ್​ಗೆ ತೆರಳಲು ಆಟೋರಿಕ್ಷಾ ಬಳಸಿದ್ದಾರೆ. ಸತತವಾಗಿ ಏರುತ್ತಿರುವ ಇಂಧನ ಬೆಲೆಯನ್ನು ವಿರೋಧಿಸಲು ಅವರು ಈ ರೀತಿ ಮಾಡಿದ್ದಾರೆ.

ಕೇರಳದ ನೆಮಾಮ್​ ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ಅವರು ಸಂಜೆ ಸ್ಥಳಕ್ಕೆ ಆಟೋ ಕರೆಸಿ ಅಚ್ಚರಿ ಮೂಡಿಸಿದರು. ನೆಮಾಮ್​ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಕೆ.ಮುರಳೀಧರನ್​ ಸ್ಪರ್ಧಿಸಿದ್ದಾರೆ. 2016ರ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿತ್ತು. ನೆಮಾಮ್​ಗೆ ಬರುವಾಗಲೂ ಆಟೋದಲ್ಲೇ ಬಂದಿರುವ ರಾಹುಲ್ ಗಾಂಧಿ, ರೋಡ್ ಶೋ ನಡೆಸಿದ ಬಳಿಕ ಮಾತನಾಡಿ, ನಾನು ಬಂದ ಆಟೋ ಚಾಲಕನನ್ನು ಮಾತನಾಡಿಸಿದೆ. ಅವರಿಗೆ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಇಂಧನ ಬೆಲೆ ಏರಿಕೆಯಿಂದ ಸಂಕಷ್ಟಪಡುತ್ತಿರುವುದಾಗಿ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಬಿಜೆಪಿ ಸತತವಾಗಿ ಪೆಟ್ರೋಲ್​, ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಿದೆ. ಹಣವನ್ನೆಲ್ಲ ಅವರ ಸ್ನೇಹವಲಯಕ್ಕೆ ಮೀಸಲಾಗಿಡುತ್ತಿದೆ. ಇಷ್ಟಾದ ಮೇಲೆ ಕೂಡ ಇಲ್ಲಿಗೆ ಬಂದು ನಿಮ್ಮ ಬಳಿ ಮತ ಕೇಳುತ್ತಾರಲ್ಲ? ಅವರಿಗೆ ಎಷ್ಟು ಧೈರ್ಯ ಇರಬೇಡ ! ಎಂದು ಪ್ರಶ್ನಿಸಿದರು. ಅಲ್ಲಿಂದ ಕಲಪೆಟ್ಟಾದ ಹೆಲಿಪ್ಯಾಡ್​​ಗೆ ತೆರಳುವಾಗಲೂ ಆಟೋವನ್ನು ಬಳಸಿದ್ದಾರೆ.

ಇದನ್ನೂ ಓದಿ: ಅನಾಥಾಶ್ರಮ ಮಕ್ಕಳ ಜೊತೆ ಈಸ್ಟರ್ ಹಬ್ಬದ ಭೋಜನ ಸವಿದು ಪ್ರಿಯಾಂಕಾ ಗಾಂಧಿಗೆ ವಿಡಿಯೋ ಕಾಲ್ ಮಾಡಿದ ರಾಹುಲ್ ಗಾಂಧಿ

ಭಾರತದ ಬಗ್ಗೆ ಅಮೆರಿಕ ಮೌನತಾಳಿದೆ: ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಬಿಜೆಪಿ ಗರಂ

Published On - 11:52 am, Mon, 5 April 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ