Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಕೇರಳದಲ್ಲಿ ಆಟೋದಲ್ಲೇ ಪ್ರಯಾಣ ಮಾಡಿದ ರಾಹುಲ್ ಗಾಂಧಿ; ಚಾಲಕ ನನ್ನ ಬಳಿ ನೋವು ಹೇಳಿಕೊಂಡರು ಎಂದ ಕಾಂಗ್ರೆಸ್ ನಾಯಕ

Rahul Gandhi Viral Video: ಬಿಜೆಪಿ ಸತತವಾಗಿ ಪೆಟ್ರೋಲ್​, ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಿದೆ. ಹಣವನ್ನೆಲ್ಲ ಅವರ ಸ್ನೇಹವಲಯಕ್ಕೆ ಮೀಸಲಾಗಿಡುತ್ತಿದೆ. ಇಷ್ಟಾದ ಮೇಲೆ ಕೂಡ ಇಲ್ಲಿಗೆ ಬಂದು ನಿಮ್ಮ ಬಳಿ ಮತ ಕೇಳುತ್ತಾರಲ್ಲ? ಅವರಿಗೆ ಎಷ್ಟು ಧೈರ್ಯ ಇರಬೇಡ ! ಎಂದು ಪ್ರಶ್ನಿಸಿದರು.

Rahul Gandhi: ಕೇರಳದಲ್ಲಿ ಆಟೋದಲ್ಲೇ ಪ್ರಯಾಣ ಮಾಡಿದ ರಾಹುಲ್ ಗಾಂಧಿ; ಚಾಲಕ ನನ್ನ ಬಳಿ ನೋವು ಹೇಳಿಕೊಂಡರು ಎಂದ ಕಾಂಗ್ರೆಸ್ ನಾಯಕ
ಆಟೋದಲ್ಲಿ ಪ್ರಯಾಣ ಮಾಡಿದ ರಾಹುಲ್ ಗಾಂಧಿ
Follow us
Lakshmi Hegde
| Updated By: Digi Tech Desk

Updated on:Apr 05, 2021 | 12:27 PM

ತಿರುವನಂತಪುರಂ: ವಿಧಾನಸಭೆ ಚುನಾವಣೆ ಪ್ರಚಾರದ ನಿಮಿತ್ತ ಕೇರಳದಲ್ಲಿ ಇರುವ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಭಾನುವಾರ ಈಸ್ಟರ್​ ನಿಮಿತ್ತ ವಯಾನಾಡಿನಲ್ಲಿ ಅನಾಥಮಕ್ಕಳ ಜತೆ ಔತಣಕೂಟ ನಡೆಸಿದ್ದಾರೆ. ಮಕ್ಕಳ ಜತೆ ಊಟ ಮಾಡಿದ ಅವರು, ಈ ವೇಳೆ ಪ್ರಿಯಾಂಕಾ ಗಾಂಧಿಯವರಿಗೆ ವಿಡಿಯೋ ಕಾಲ್​ ಕೂಡ ಮಾಡಿದ್ದರು. ಈ ವಿಡಿಯೋ ಕೂಡ ವೈರಲ್ ಆಗಿತ್ತು. ಹಾಗೇ ಇನ್ನೊಂದು ವಿಡಿಯೋ ಕೂಡ ವೈರಲ್​ ಆಗಿದ್ದು, ಅದರಲ್ಲಿ ರಾಹುಲ್ ಗಾಂಧಿ ಆಟೋದಲ್ಲಿ ಪ್ರಯಾಣ ಮಾಡಿದ್ದನ್ನು ನೋಡಹುದು.

ಏಪ್ರಿಲ್ 6 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೇರಳದಲ್ಲಿ ಸಕ್ರಿಯ ಪ್ರಚಾರದಲ್ಲಿ ತೊಡಗಿದ್ದಾರೆ. ಹಾಗೇ ನಿನ್ನೆ ಪ್ರಚಾರದ ಕೊನೇ ದಿನವಾಗಿತ್ತು. ಈ ವೇಳೆ ರಾಹುಲ್ ಗಾಂಧಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು, ಹೆಲಿಪ್ಯಾಡ್​ಗೆ ತೆರಳಲು ಆಟೋರಿಕ್ಷಾ ಬಳಸಿದ್ದಾರೆ. ಸತತವಾಗಿ ಏರುತ್ತಿರುವ ಇಂಧನ ಬೆಲೆಯನ್ನು ವಿರೋಧಿಸಲು ಅವರು ಈ ರೀತಿ ಮಾಡಿದ್ದಾರೆ.

ಕೇರಳದ ನೆಮಾಮ್​ ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದ ಅವರು ಸಂಜೆ ಸ್ಥಳಕ್ಕೆ ಆಟೋ ಕರೆಸಿ ಅಚ್ಚರಿ ಮೂಡಿಸಿದರು. ನೆಮಾಮ್​ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಕೆ.ಮುರಳೀಧರನ್​ ಸ್ಪರ್ಧಿಸಿದ್ದಾರೆ. 2016ರ ಚುನಾವಣೆಯಲ್ಲಿ ಈ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿತ್ತು. ನೆಮಾಮ್​ಗೆ ಬರುವಾಗಲೂ ಆಟೋದಲ್ಲೇ ಬಂದಿರುವ ರಾಹುಲ್ ಗಾಂಧಿ, ರೋಡ್ ಶೋ ನಡೆಸಿದ ಬಳಿಕ ಮಾತನಾಡಿ, ನಾನು ಬಂದ ಆಟೋ ಚಾಲಕನನ್ನು ಮಾತನಾಡಿಸಿದೆ. ಅವರಿಗೆ ಜೀವನ ನಡೆಸುವುದು ಕಷ್ಟವಾಗುತ್ತಿದೆ. ಇಂಧನ ಬೆಲೆ ಏರಿಕೆಯಿಂದ ಸಂಕಷ್ಟಪಡುತ್ತಿರುವುದಾಗಿ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.

ಬಿಜೆಪಿ ಸತತವಾಗಿ ಪೆಟ್ರೋಲ್​, ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಿದೆ. ಹಣವನ್ನೆಲ್ಲ ಅವರ ಸ್ನೇಹವಲಯಕ್ಕೆ ಮೀಸಲಾಗಿಡುತ್ತಿದೆ. ಇಷ್ಟಾದ ಮೇಲೆ ಕೂಡ ಇಲ್ಲಿಗೆ ಬಂದು ನಿಮ್ಮ ಬಳಿ ಮತ ಕೇಳುತ್ತಾರಲ್ಲ? ಅವರಿಗೆ ಎಷ್ಟು ಧೈರ್ಯ ಇರಬೇಡ ! ಎಂದು ಪ್ರಶ್ನಿಸಿದರು. ಅಲ್ಲಿಂದ ಕಲಪೆಟ್ಟಾದ ಹೆಲಿಪ್ಯಾಡ್​​ಗೆ ತೆರಳುವಾಗಲೂ ಆಟೋವನ್ನು ಬಳಸಿದ್ದಾರೆ.

ಇದನ್ನೂ ಓದಿ: ಅನಾಥಾಶ್ರಮ ಮಕ್ಕಳ ಜೊತೆ ಈಸ್ಟರ್ ಹಬ್ಬದ ಭೋಜನ ಸವಿದು ಪ್ರಿಯಾಂಕಾ ಗಾಂಧಿಗೆ ವಿಡಿಯೋ ಕಾಲ್ ಮಾಡಿದ ರಾಹುಲ್ ಗಾಂಧಿ

ಭಾರತದ ಬಗ್ಗೆ ಅಮೆರಿಕ ಮೌನತಾಳಿದೆ: ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಬಿಜೆಪಿ ಗರಂ

Published On - 11:52 am, Mon, 5 April 21

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ