AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಹಾಗೂ ಆರ್​ಎಸ್​ಎಸ್​ನವರು ನಕಲಿ ಹಿಂದೂಗಳು; ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಾರೆ: ರಾಹುಲ್ ಗಾಂಧಿ

Rahul Gandhi: ಬಿಜೆಪಿಯವರು ಯಾವ ರೀತಿಯ ಹಿಂದೂಗಳು? ಇವರು ಸುಳ್ಳು ಹಿಂದೂಗಳು. ಇವರು ದರ್ಮದ ದಲ್ಲಾಳಿ ಕೆಲಸ ಮಾಡುತ್ತಾರೆ. ಅವರು ಹಿಂದೂ ಧರ್ಮವನ್ನು ಲಾಭಕ್ಕಾಗಿ ಬಳಸಿಕೊಳ್ಳುತ್ತಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಹಾಗೂ ಆರ್​ಎಸ್​ಎಸ್​ನವರು ನಕಲಿ ಹಿಂದೂಗಳು; ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಾರೆ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: |

Updated on: Sep 15, 2021 | 9:11 PM

Share

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಬಿಜೆಪಿ ಮತ್ತು ಆರ್​ಎಸ್​ಎಸ್​ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್​) ನವರು ನಕಲಿ ಹಿಂದೂಗಳು. ಅವರು ತಮ್ಮ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಾರೆ ಎಂದು ಟೀಕಿಸಿದ್ದಾರೆ. ಆಲ್ ಇಂಡಿಯಾ ಮಹಿಳಾ ಕಾಂಗ್ರೆಸ್​ನ ಸಂಸ್ಥಾಪನಾ ದಿನವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಈ ವೇಳೆ, ಕಾಂಗ್ರೆಸ್​ನ ಸಿದ್ಧಾಂತ ಬಿಜೆಪಿ ಮತ್ತು ಆರ್​ಎಸ್​ಎಸ್​ನ ಸಿದ್ಧಾಂತಕ್ಕೆ ಸಂಪೂರ್ಣ ವಿರುದ್ಧವಾಗಿದೆ. ದೇಶವನ್ನು ಎರಡರಲ್ಲಿ ಒಂದು ಸಿದ್ಧಾಂತ ಮಾತ್ರ ಆಳಲು ಸಾಧ್ಯ ಎಂದು ಅವರು ಹೇಳಿದ್ದಾರೆ.

ಲಕ್ಷ್ಮೀ ದೇವಿಯು ನಮ್ಮ ಉದ್ದೇಶ ಈಡೇರಲು ಬೇಕಾದ ಶಕ್ತಿಯನ್ನು ಕೊಡುತ್ತಾಳೆ, ದುರ್ಗಾ ದೇವಿಯು ನಮ್ಮನ್ನು ರಕ್ಷಿಸಿಕೊಳ್ಳಲು ಶಕ್ತಿಯನ್ನು ನೀಡುತ್ತಾಳೆ. ಕಾಂಗ್ರೆಸ್ ಪಕ್ಷ ಆಡಳಿತದಲ್ಲಿ ಇದ್ದಾಗ ಈ ಸಾಮರ್ಥ್ಯವನ್ನು ಬಲಪಡಿಸಿತ್ತು ಎಂದು ಮಹಿಳೆಯರಿಗೆ ಅನುಗುಣವಾದ ಅವಕಾಶ ಕೊಟ್ಟಿರುವ ಬಗ್ಗೆ ಮಾಜಿ ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಈ ಶಕ್ತಿಗಳನ್ನು ಕಡೆಗಣಿಸಲಾಗುತ್ತಿದೆ ಎಂದೂ ಆರೋಪಿಸಿದ್ದಾರೆ. ಬಿಜೆಪಿಯವರು ಯಾವ ರೀತಿಯ ಹಿಂದೂಗಳು? ಇವರು ಸುಳ್ಳು ಹಿಂದೂಗಳು. ಇವರು ದರ್ಮದ ದಲ್ಲಾಳಿ ಕೆಲಸ ಮಾಡುತ್ತಾರೆ. ಅವರು ಹಿಂದೂ ಧರ್ಮವನ್ನು ಲಾಭಕ್ಕಾಗಿ ಬಳಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ನಾನು ಕಾಶ್ಮೀರಿ ಪಂಡಿತ್, ವೈಷ್ಣೋ ದೇವಿ ಭೇಟಿ ನಂತರ ಮನೆಗೆ ಬಂದಿದ್ದೇನೆ ಎಂದು ಅನಿಸುತ್ತಿದೆ: ರಾಹುಲ್ ಗಾಂಧಿ

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಕ್ಕೆ ಯುವ ಕಾಂಗ್ರೆಸ್​ ಒತ್ತಾಯ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ