AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಬೆನ್ನಲ್ಲೇ ಗೋವಾಕ್ಕೆ ತೆರಳಿದ ರಾಹುಲ್ ಗಾಂಧಿ; ಇಂದು ಮೀನುಗಾರರೊಂದಿಗೆ ಮಾತುಕತೆ

ಗೋವಾದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. 2022ಕ್ಕೆ ಅದರ ಅವಧಿ ಮುಗಿಯಲಿದ್ದು ಫೆಬ್ರವರಿ-ಮಾರ್ಚ್​​ನಲ್ಲಿ ಚುನಾವಣೆ ನಡೆಯಲಿದೆ. ಗೋವಾದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಡಬಾರದು ಎಂದು ಕಾಂಗ್ರೆಸ್​, ತೃಣಮೂಲ ಕಾಂಗ್ರೆಸ್​ ಸೇರಿ ವಿವಿಧ ಪಕ್ಷಗಳು ಪಣತೊಟ್ಟಿವೆ.

ಮಮತಾ ಬ್ಯಾನರ್ಜಿ ಬೆನ್ನಲ್ಲೇ ಗೋವಾಕ್ಕೆ ತೆರಳಿದ ರಾಹುಲ್ ಗಾಂಧಿ; ಇಂದು ಮೀನುಗಾರರೊಂದಿಗೆ ಮಾತುಕತೆ
ರಾಹುಲ್ ಗಾಂಧಿ
TV9 Web
| Edited By: |

Updated on: Oct 30, 2021 | 10:41 AM

Share

2022ರಲ್ಲಿ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆ(Goa Assembly Election)ಗೆ ರಾಜಕೀಯ ಪಕ್ಷಗಳ ಸಿದ್ಧತೆ ಶುರುವಾಗಿದೆ. ತೃಣಮೂಲ ಕಾಂಗ್ರೆಸ್​ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಗೋವಾ ಪ್ರವಾಸ ಮಾಡಿ, ಅಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಇಲ್ಲಿಯೂ ದಾದಾಗಿರಿ ನಡೆಸಲು ಬಿಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಅದರ ಬೆನ್ನಲ್ಲೇ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ(Congress MP Rahul Gandhi) ಇಂದು ಗೋವಾಕ್ಕೆ ತೆರಳಲಿದ್ದು,  ಅಲ್ಲಿ ಮೀನುಗಾರರ  ಸಮುದಾಯದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅದರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರೊಟ್ಟಿಗೆ ಕೂಡ ಅವರು ಸಂವಾದ ನಡೆಸಲಿದ್ದಾರೆ.  

ಶುಕ್ರವಾರ ಕಾಂಗ್ರೆಸ್​ ಪಕ್ಷ ಈ ಬಗ್ಗೆ ಸರಣಿ ಟ್ವೀಟ್ ಮಾಡಿದೆ.  ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಶನಿವಾರ ಗೋವಾಕ್ಕೆ ಆಗಮಿಸಲಿದ್ದಾರೆ. ಇಲ್ಲಿನ ಮೀನುಗಾರರನ್ನು ಭೇಟಿಯಾಗಲಿದ್ದಾರೆ. ಇಲ್ಲಿನ ಮೀನುಗಾರರು ರಾಹುಲ್​ ಜೀ ಅವರಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿತ್ತು.  ಒಂದೆರಡು ಮೀನುಗಾರರನ್ನು ಮಾತನಾಡಿಸಿ, ವಿಡಿಯೋವನ್ನು ಕಾಂಗ್ರೆಸ್​ ಶೇರ್ ಮಾಡಿದೆ.

ಗೋವಾದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. 2022ಕ್ಕೆ ಅದರ ಅವಧಿ ಮುಗಿಯಲಿದ್ದು ಫೆಬ್ರವರಿ-ಮಾರ್ಚ್​​ನಲ್ಲಿ ಚುನಾವಣೆ ನಡೆಯಲಿದೆ. ಗೋವಾದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಡಬಾರದು ಎಂದು ಕಾಂಗ್ರೆಸ್​, ತೃಣಮೂಲ ಕಾಂಗ್ರೆಸ್​ ಸೇರಿ ವಿವಿಧ ಪಕ್ಷಗಳು ಪಣತೊಟ್ಟಿವೆ. ಗೋವಾ ವಿಧಾನಸಭೆಯಲ್ಲಿ 40 ಸದಸ್ಯರ ಬಲವಿದೆ. ಸದ್ಯ ಬಿಜೆಪಿಯ 17 ಶಾಸಕರಿದ್ದಾರೆ. ಅದರ ಹೊರತಾಗಿ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ (MGP) , ವಿಜಯ್​ ಸರ್​ದೇಸಾಯಿ ಅವರ ಗೋವಾ ಫಾರ್ವರ್ಡ್​ ಪಾರ್ಟಿ (GFP)ಯ ಮತ್ತು ಮೂವರು ಸ್ವತಂತ್ರ ಅಭ್ಯರ್ಥಿಗಳ ಬೆಂಬಲವನ್ನು ಪಡೆದು ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್​​ನ 15 ಶಾಸಕರು ಸದನದಲ್ಲಿ ಇದ್ದಾರೆ.  ನಿನ್ನೆ ಮಮತಾ ಬ್ಯಾನರ್ಜಿ ಕೂಡ ಮೀನುಗಾರ ಸಮುದಾಯದ ಜತೆ ಸಂವಾದ ನಡೆಸಿದ್ದರು. ಇವರ ಸಮ್ಮುಖದಲ್ಲಿ ಖ್ಯಾತ ಟೆನ್ನಿಸ್​ ಐಕಾನ್​  ಲಿಯಾಂಡರ್ ಪೇಸ್​ ಕೂಡ ಟಿಎಂಸಿ ಸೇರಿದ್ದಾರೆ.

ಇದನ್ನೂ ಓದಿ: Orange Signal : ‘ಗುಡ್ ನ್ಯೂಸ್ ಯಾವಾಗ?’ ಹೀಗೆ ಕೇಳುವುದನ್ನು ನಿಲ್ಲಿಸುವುದು ಸೂಕ್ತ

ಅಪ್ಪುವನ್ನು ಸಹೋದರ ಎಂದೇ ಸಂಬೋಧಿಸಿ ಶಿವರಾಜ್ ಕುಮಾರ್​ಗೆ ಸಂತಾಪ ಪತ್ರ ಬರೆದ ತಮಿಳುನಾಡು ಸಿಎಂ ಸ್ಟ್ಯಾಲಿನ್

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ