AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಬೆನ್ನಲ್ಲೇ ಗೋವಾಕ್ಕೆ ತೆರಳಿದ ರಾಹುಲ್ ಗಾಂಧಿ; ಇಂದು ಮೀನುಗಾರರೊಂದಿಗೆ ಮಾತುಕತೆ

ಗೋವಾದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. 2022ಕ್ಕೆ ಅದರ ಅವಧಿ ಮುಗಿಯಲಿದ್ದು ಫೆಬ್ರವರಿ-ಮಾರ್ಚ್​​ನಲ್ಲಿ ಚುನಾವಣೆ ನಡೆಯಲಿದೆ. ಗೋವಾದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಡಬಾರದು ಎಂದು ಕಾಂಗ್ರೆಸ್​, ತೃಣಮೂಲ ಕಾಂಗ್ರೆಸ್​ ಸೇರಿ ವಿವಿಧ ಪಕ್ಷಗಳು ಪಣತೊಟ್ಟಿವೆ.

ಮಮತಾ ಬ್ಯಾನರ್ಜಿ ಬೆನ್ನಲ್ಲೇ ಗೋವಾಕ್ಕೆ ತೆರಳಿದ ರಾಹುಲ್ ಗಾಂಧಿ; ಇಂದು ಮೀನುಗಾರರೊಂದಿಗೆ ಮಾತುಕತೆ
ರಾಹುಲ್ ಗಾಂಧಿ
TV9 Web
| Edited By: |

Updated on: Oct 30, 2021 | 10:41 AM

Share

2022ರಲ್ಲಿ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆ(Goa Assembly Election)ಗೆ ರಾಜಕೀಯ ಪಕ್ಷಗಳ ಸಿದ್ಧತೆ ಶುರುವಾಗಿದೆ. ತೃಣಮೂಲ ಕಾಂಗ್ರೆಸ್​ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಗೋವಾ ಪ್ರವಾಸ ಮಾಡಿ, ಅಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಸರ್ಕಾರ ಇಲ್ಲಿಯೂ ದಾದಾಗಿರಿ ನಡೆಸಲು ಬಿಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಅದರ ಬೆನ್ನಲ್ಲೇ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ(Congress MP Rahul Gandhi) ಇಂದು ಗೋವಾಕ್ಕೆ ತೆರಳಲಿದ್ದು,  ಅಲ್ಲಿ ಮೀನುಗಾರರ  ಸಮುದಾಯದೊಂದಿಗೆ ಮಾತುಕತೆ ನಡೆಸಲಿದ್ದಾರೆ. ಅದರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರೊಟ್ಟಿಗೆ ಕೂಡ ಅವರು ಸಂವಾದ ನಡೆಸಲಿದ್ದಾರೆ.  

ಶುಕ್ರವಾರ ಕಾಂಗ್ರೆಸ್​ ಪಕ್ಷ ಈ ಬಗ್ಗೆ ಸರಣಿ ಟ್ವೀಟ್ ಮಾಡಿದೆ.  ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಯವರು ಶನಿವಾರ ಗೋವಾಕ್ಕೆ ಆಗಮಿಸಲಿದ್ದಾರೆ. ಇಲ್ಲಿನ ಮೀನುಗಾರರನ್ನು ಭೇಟಿಯಾಗಲಿದ್ದಾರೆ. ಇಲ್ಲಿನ ಮೀನುಗಾರರು ರಾಹುಲ್​ ಜೀ ಅವರಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಿತ್ತು.  ಒಂದೆರಡು ಮೀನುಗಾರರನ್ನು ಮಾತನಾಡಿಸಿ, ವಿಡಿಯೋವನ್ನು ಕಾಂಗ್ರೆಸ್​ ಶೇರ್ ಮಾಡಿದೆ.

ಗೋವಾದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. 2022ಕ್ಕೆ ಅದರ ಅವಧಿ ಮುಗಿಯಲಿದ್ದು ಫೆಬ್ರವರಿ-ಮಾರ್ಚ್​​ನಲ್ಲಿ ಚುನಾವಣೆ ನಡೆಯಲಿದೆ. ಗೋವಾದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲು ಬಿಡಬಾರದು ಎಂದು ಕಾಂಗ್ರೆಸ್​, ತೃಣಮೂಲ ಕಾಂಗ್ರೆಸ್​ ಸೇರಿ ವಿವಿಧ ಪಕ್ಷಗಳು ಪಣತೊಟ್ಟಿವೆ. ಗೋವಾ ವಿಧಾನಸಭೆಯಲ್ಲಿ 40 ಸದಸ್ಯರ ಬಲವಿದೆ. ಸದ್ಯ ಬಿಜೆಪಿಯ 17 ಶಾಸಕರಿದ್ದಾರೆ. ಅದರ ಹೊರತಾಗಿ ಮಹಾರಾಷ್ಟ್ರವಾದಿ ಗೋಮಾಂತಕ ಪಕ್ಷ (MGP) , ವಿಜಯ್​ ಸರ್​ದೇಸಾಯಿ ಅವರ ಗೋವಾ ಫಾರ್ವರ್ಡ್​ ಪಾರ್ಟಿ (GFP)ಯ ಮತ್ತು ಮೂವರು ಸ್ವತಂತ್ರ ಅಭ್ಯರ್ಥಿಗಳ ಬೆಂಬಲವನ್ನು ಪಡೆದು ಅಧಿಕಾರ ನಡೆಸುತ್ತಿದೆ. ಕಾಂಗ್ರೆಸ್​​ನ 15 ಶಾಸಕರು ಸದನದಲ್ಲಿ ಇದ್ದಾರೆ.  ನಿನ್ನೆ ಮಮತಾ ಬ್ಯಾನರ್ಜಿ ಕೂಡ ಮೀನುಗಾರ ಸಮುದಾಯದ ಜತೆ ಸಂವಾದ ನಡೆಸಿದ್ದರು. ಇವರ ಸಮ್ಮುಖದಲ್ಲಿ ಖ್ಯಾತ ಟೆನ್ನಿಸ್​ ಐಕಾನ್​  ಲಿಯಾಂಡರ್ ಪೇಸ್​ ಕೂಡ ಟಿಎಂಸಿ ಸೇರಿದ್ದಾರೆ.

ಇದನ್ನೂ ಓದಿ: Orange Signal : ‘ಗುಡ್ ನ್ಯೂಸ್ ಯಾವಾಗ?’ ಹೀಗೆ ಕೇಳುವುದನ್ನು ನಿಲ್ಲಿಸುವುದು ಸೂಕ್ತ

ಅಪ್ಪುವನ್ನು ಸಹೋದರ ಎಂದೇ ಸಂಬೋಧಿಸಿ ಶಿವರಾಜ್ ಕುಮಾರ್​ಗೆ ಸಂತಾಪ ಪತ್ರ ಬರೆದ ತಮಿಳುನಾಡು ಸಿಎಂ ಸ್ಟ್ಯಾಲಿನ್

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?