AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನೂ ಬಂಧಿಸಿ..’ ಟ್ವಿಟರ್​ನಲ್ಲಿ ಪೋಸ್ಟ್ ಹಾಕಿ ಅರೆಸ್ಟ್ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹೇಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

17 ಜನರ ಬಂಧನವಾಗುತ್ತಿದ್ದಂತೆ ಕೇವಲ ರಾಹುಲ್ ಗಾಂಧಿಯಲ್ಲದೆ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್​, ವಕ್ತಾರರಾದ ಡಾ. ಶಮಾ ಮೊಹಮ್ಮದ್​, ಹೋರಾಟಗಾರ ಸಾಕೇತ್ ಗೋಖಲೆ ಮತ್ತಿತರರೂ ಕೂಡ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.

‘ನನ್ನನ್ನೂ ಬಂಧಿಸಿ..’ ಟ್ವಿಟರ್​ನಲ್ಲಿ ಪೋಸ್ಟ್ ಹಾಕಿ ಅರೆಸ್ಟ್ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಹೇಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Lakshmi Hegde
|

Updated on: May 16, 2021 | 5:30 PM

Share

ದೆಹಲಿ: ಕೊವಿಡ್​ 19 ಬಿಕ್ಕಟ್ಟಿನ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಿಲ್ಲ ಎಂದು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿ, ಪೋಸ್ಟರ್​ ಅಂಟಿಸಿದ್ದ ಸುಮಾರು 17 ಮಂದಿಯನ್ನು ದೆಹಲಿ ಪೊಲೀಸರು ನಿನ್ನೆ ಬಂಧಿಸಿದ್ದರು. ಆದರೆ ಇದೇ ವಿಚಾರಕ್ಕೆ ಈಗ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸೇರಿ ಎಲ್ಲರೂ ಕೇಂದ್ರ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿ.. ನಮ್ಮನ್ನೂ ಬಂಧಿಸಿ (Arrest Me Too..)ಎಂದು ಹಿಂದಿ ಮತ್ತು ಇಂಗ್ಲಿಷ್​ ಎರಡೂ ಭಾಷೆಯಲ್ಲಿ ಬರೆದಿದ್ದಾರೆ. ಅಷ್ಟೇ ಅಲ್ಲ, ಮೋದಿ ಜೀ, ನಮ್ಮ ದೇಶದ ಮಕ್ಕಳ ಪಾಲಿನ ಲಸಿಕೆಯನ್ನು ನೀವೇಕೆ ವಿದೇಶಗಳಿಗೆ ಕೊಟ್ಟಿರಿ? ಎಂದು ಪ್ರಶ್ನೆ ಮಾಡಿದ್ದಾರೆ. ಈ ಪ್ರಶ್ನೆಯಿರುವ ಫೋಟೋವನ್ನೇ ತಮ್ಮ ಟ್ವಿಟರ್​ನ ಪ್ರೊಫೈಲ್​ ಫೋಟೊವನ್ನಾಗಿ ಕೂಡ ಮಾಡಿಕೊಂಡಿದ್ದಾರೆ.

ಕೊರೊನಾ ನಿರ್ವಹಣೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವನ್ನು ಟೀಕಿಸುವ ವಾಕ್ಯಗಳಿರುವ ಪೋಸ್ಟರ್​​ಗಳು ಕಳೆದ ಕೆಲವು ದಿನಗಳಿಂದಲೂ ದೆಹಲಿಯಲ್ಲಿ ಅಲ್ಲಲ್ಲಿ ಕಾಣಿಸುತ್ತಿದ್ದವು. ಇದಕ್ಕೆ ಸಂಬಂಧಪಟ್ಟಂತೆ ಸುಮಾರು 17 ಜನರನ್ನು ದೆಹಲಿ ಪೊಲೀಸರು ನಿನ್ನೆ ಬಂಧಿಸಿದ್ದರು.

ದೆಹಲಿ ಪೊಲೀಸರು ನೇರವಾಗಿ ಕೇಂದ್ರ ಗೃಹ ಇಲಾಖೆಯಡಿ ಬರುತ್ತಾರೆ. ಏನೇ ಇದ್ದರೂ ಅವರು ಗೃಹ ಇಲಾಖೆಗೆ ರಿಪೋರ್ಟ್ ಮಾಡಿಕೊಳ್ಳಬೇಕಾಗುತ್ತದೆ. ನಿನ್ನೆ 17 ಮಂದಿಯನ್ನು ಬಂಧಿಸಿದ್ದ ಪೊಲೀಸರು, ಪೋಸ್ಟರ್​ಗೆ ಸಂಬಂಧಪಟ್ಟಂತೆ, ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ ಕಾಯ್ದೆ ಮತ್ತು ಸೆಕ್ಷನ್​ 188ರಡಿ ಒಟ್ಟು 21 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾಗಿ ವರದಿ ನೀಡಿದ್ದಾರೆ.

17 ಜನರ ಬಂಧನವಾಗುತ್ತಿದ್ದಂತೆ ಕೇವಲ ರಾಹುಲ್ ಗಾಂಧಿಯಲ್ಲದೆ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್​, ವಕ್ತಾರರಾದ ಡಾ. ಶಮಾ ಮೊಹಮ್ಮದ್​, ಹೋರಾಟಗಾರ ಸಾಕೇತ್ ಗೋಖಲೆ ಮತ್ತಿತರರೂ ಕೂಡ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ. ಅದರಲ್ಲಿ ಜೈರಾಮ್ ರಮೇಶ್​ ಅವರು ಟ್ವೀಟ್​ ಮಾಡಿ, ನಾನು ನನ್ನ ಮನೆಯ ಕಾಂಪೌಂಡ್ ಮೇಲೆಲ್ಲ ಪೋಸ್ಟರ್​ ಅಂಟಿಸುತ್ತೇನೆ. ನನ್ನನ್ನೂ ಬಂಧಿಸಿ ಎಂದು ದೆಹಲಿ ಪೊಲೀಸರು, ಗೃಹ ಸಚಿವ ಅಮಿತ್​ ಶಾ ಅವರಿಗೆ ಸವಾಲು ಹಾಕಿದ್ದಾರೆ.

ಇದನ್ನೂ ಓದಿ:ಐತಿಹಾಸಿಕ ಕೇದಾರನಾಥ ದೇವಸ್ಥಾನ ನಾಳೆ ತೆರೆಯಲಿದೆ; ಕೊವಿಡ್ ಸಂಕಷ್ಟ ಹಿನ್ನೆಲೆ ಭಕ್ತರಿಗೆ ಪ್ರವೇಶ ನಿಷೇಧ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ