AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಲು ಯಾರು ಕಾರಣ ಎಂಬುದು ಜನರಿಗೆ ಗೊತ್ತು; ರಾಹುಲ್ ಗಾಂಧಿ ಟ್ವೀಟ್​

ಗಾಲ್ವಾನ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮತ್ತೆ ವಾಗ್ವಾದ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಯ  ಬೆನ್ನಲ್ಲೇ ಕಾಂಗ್ರೆಸ್ ನಾಯಕ​ ಗಾಂಧಿ ಈ ಟ್ವೀಟ್​ ಮಾಡಿದ್ದಾರೆ.

Rahul Gandhi: ದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಲು ಯಾರು ಕಾರಣ ಎಂಬುದು ಜನರಿಗೆ ಗೊತ್ತು; ರಾಹುಲ್ ಗಾಂಧಿ ಟ್ವೀಟ್​
ರಾಹುಲ್​ ಗಾಂಧಿ
TV9 Web
| Edited By: |

Updated on: Jul 15, 2021 | 2:33 PM

Share

ದೆಹಲಿ: ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಇಂದು ಟ್ವೀಟ್ ಮೂಲಕ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ, ಹಲವು ವಿಚಾರಗಳನ್ನಿಟ್ಟುಕೊಂಡು ಕಿಡಿಕಾರಿದ್ದಾರೆ. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್​ ದರ, ಕೊರೊನಾ ಲಸಿಕೆ ಕೊರತೆ, ಚೀನಾ-ಭಾರತ ಗಡಿಯ ವಾಸ್ತವ ನಿಯಂತ್ರಣ ರೇಖೆಯಲ್ಲಿನ ಬಿಕ್ಕಟ್ಟು, ರೈತರ ಹೋರಾಟಗಳಿಗೆಲ್ಲ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪ ಮಾಡಿದ್ದಾರೆ. ಶತಮಾನಗಳಷ್ಟು ಸಮಯ ತೆಗೆದುಕೊಂಡು ಕಟ್ಟಲ್ಪಟ್ಟಿದ್ದೆಲ್ಲ ಸೆಕೆಂಡ್​ಗಳಲ್ಲಿ ನಾಶವಾಗಿದೆ. ದೇಶಕ್ಕೆ ಇಂಥ ಕಷ್ಟದ ಸಮಯ ತಂದವರು ಯಾರು ಎಂಬುದು ಎಲ್ಲರಿಗೂ ಗೊತ್ತು ಎಂದು ಟ್ವೀಟ್​ ಮಾಡಿದ್ದಾರೆ.

ಗಾಲ್ವಾನ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮತ್ತೆ ವಾಗ್ವಾದ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಯ  ಬೆನ್ನಲ್ಲೇ ಕಾಂಗ್ರೆಸ್ ನಾಯಕ​ ಗಾಂಧಿ ಈ ಟ್ವೀಟ್​ ಮಾಡಿದ್ದಾರೆ. ಕಳೆದ ವರ್ಷ ಜು.20ರಂದು ಗಾಲ್ವಾನ್​ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಉಂಟಾಗಿ, 20 ಮಂದಿ ಭಾರತೀಯ ಯೋಧರು ಮೃತಪಟ್ಟಿದ್ದರು. ಆಗಿನಿಂದಲೂ ರಾಹುಲ್ ಗಾಂಧಿಯಾದಿಯಾಗಿ ಕಾಂಗ್ರೆಸ್​ನ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇನ್ನು ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದಾಗಿಯೂ ರಾಹುಲ್ ಗಾಂಧಿ ಅದಾಗಲೇ ತುಂಬ ಸಲ ಹೇಳಿದ್ದಾರೆ.

ಇದನ್ನೂ ಓದಿ: ಲಿಯಾಂಡರ್​ ಪೇಸ್​ ಜೊತೆ ‘ಮಗಧೀರ’ ಚೆಲುವೆ ಡೇಟಿಂಗ್​; ಮಾಜಿ ಬಾಯ್​ಫ್ರೆಂಡ್​ ಹೇಳಿದ್ದೇನು?

Congress leader Rahul Gandhi took a dig at the Central government Through Tweet

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ