AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಲು ಯಾರು ಕಾರಣ ಎಂಬುದು ಜನರಿಗೆ ಗೊತ್ತು; ರಾಹುಲ್ ಗಾಂಧಿ ಟ್ವೀಟ್​

ಗಾಲ್ವಾನ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮತ್ತೆ ವಾಗ್ವಾದ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಯ  ಬೆನ್ನಲ್ಲೇ ಕಾಂಗ್ರೆಸ್ ನಾಯಕ​ ಗಾಂಧಿ ಈ ಟ್ವೀಟ್​ ಮಾಡಿದ್ದಾರೆ.

Rahul Gandhi: ದೇಶದಲ್ಲಿ ಕಷ್ಟದ ಪರಿಸ್ಥಿತಿ ಉಂಟಾಗಲು ಯಾರು ಕಾರಣ ಎಂಬುದು ಜನರಿಗೆ ಗೊತ್ತು; ರಾಹುಲ್ ಗಾಂಧಿ ಟ್ವೀಟ್​
ರಾಹುಲ್​ ಗಾಂಧಿ
TV9 Web
| Edited By: |

Updated on: Jul 15, 2021 | 2:33 PM

Share

ದೆಹಲಿ: ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ ಇಂದು ಟ್ವೀಟ್ ಮೂಲಕ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ, ಹಲವು ವಿಚಾರಗಳನ್ನಿಟ್ಟುಕೊಂಡು ಕಿಡಿಕಾರಿದ್ದಾರೆ. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್​ ದರ, ಕೊರೊನಾ ಲಸಿಕೆ ಕೊರತೆ, ಚೀನಾ-ಭಾರತ ಗಡಿಯ ವಾಸ್ತವ ನಿಯಂತ್ರಣ ರೇಖೆಯಲ್ಲಿನ ಬಿಕ್ಕಟ್ಟು, ರೈತರ ಹೋರಾಟಗಳಿಗೆಲ್ಲ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪ ಮಾಡಿದ್ದಾರೆ. ಶತಮಾನಗಳಷ್ಟು ಸಮಯ ತೆಗೆದುಕೊಂಡು ಕಟ್ಟಲ್ಪಟ್ಟಿದ್ದೆಲ್ಲ ಸೆಕೆಂಡ್​ಗಳಲ್ಲಿ ನಾಶವಾಗಿದೆ. ದೇಶಕ್ಕೆ ಇಂಥ ಕಷ್ಟದ ಸಮಯ ತಂದವರು ಯಾರು ಎಂಬುದು ಎಲ್ಲರಿಗೂ ಗೊತ್ತು ಎಂದು ಟ್ವೀಟ್​ ಮಾಡಿದ್ದಾರೆ.

ಗಾಲ್ವಾನ್​ನಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮತ್ತೆ ವಾಗ್ವಾದ ನಡೆಯುತ್ತಿದೆ ಎಂಬ ಮಾಧ್ಯಮಗಳ ವರದಿಯ  ಬೆನ್ನಲ್ಲೇ ಕಾಂಗ್ರೆಸ್ ನಾಯಕ​ ಗಾಂಧಿ ಈ ಟ್ವೀಟ್​ ಮಾಡಿದ್ದಾರೆ. ಕಳೆದ ವರ್ಷ ಜು.20ರಂದು ಗಾಲ್ವಾನ್​ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಉಂಟಾಗಿ, 20 ಮಂದಿ ಭಾರತೀಯ ಯೋಧರು ಮೃತಪಟ್ಟಿದ್ದರು. ಆಗಿನಿಂದಲೂ ರಾಹುಲ್ ಗಾಂಧಿಯಾದಿಯಾಗಿ ಕಾಂಗ್ರೆಸ್​ನ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇನ್ನು ಕೊರೊನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದಾಗಿಯೂ ರಾಹುಲ್ ಗಾಂಧಿ ಅದಾಗಲೇ ತುಂಬ ಸಲ ಹೇಳಿದ್ದಾರೆ.

ಇದನ್ನೂ ಓದಿ: ಲಿಯಾಂಡರ್​ ಪೇಸ್​ ಜೊತೆ ‘ಮಗಧೀರ’ ಚೆಲುವೆ ಡೇಟಿಂಗ್​; ಮಾಜಿ ಬಾಯ್​ಫ್ರೆಂಡ್​ ಹೇಳಿದ್ದೇನು?

Congress leader Rahul Gandhi took a dig at the Central government Through Tweet

ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್