AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ ಸಿಎಂ ಚರಣ್​ಜಿತ್​ ಸಿಂಗ್​ ಛನ್ನಿ ಪ್ರಮಾಣ ವಚನ ಸ್ವೀಕಾರ ಇಂದು; ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಉಪಸ್ಥಿತಿ ಇಲ್ಲ

Charanjit Singh Channi: ಪಂಜಾಬ್​ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ರಾಜೀನಾಮೆ ನೀಡಿದ ಬಳಿಕ, ಕಾಂಗ್ರೆಸ್​ ಚರಣ್​ಜಿತ್​ ಸಿಂಗ್​ ಛನ್ನಿ ಅವರನ್ನು ಸರ್ವಾನುಮತದಿಂದ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಿದೆ.

ಪಂಜಾಬ್​ ಸಿಎಂ ಚರಣ್​ಜಿತ್​ ಸಿಂಗ್​ ಛನ್ನಿ ಪ್ರಮಾಣ ವಚನ ಸ್ವೀಕಾರ ಇಂದು; ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಉಪಸ್ಥಿತಿ ಇಲ್ಲ
ರಾಹುಲ್​ ಗಾಂಧಿ
TV9 Web
| Edited By: |

Updated on:Sep 20, 2021 | 9:31 AM

Share

ದೆಹಲಿ: ಇಂದು ಪಂಜಾಬ್​ ನೂತನ ಮುಖ್ಯಮಂತ್ರಿ ಚರಣ್​ಜಿತ್​ ಸಿಂಗ್​ ಛನ್ನಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ರಾಜ್ಯದ 16ನೇ ಮುಖ್ಯಮಂತ್ರಿಯಾಗಿರುವ ಚರಣ್​ಜಿತ್​ ಸಿಂಗ್​​  ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಆಗಮಿಸುತ್ತಿಲ್ಲ ಎಂದು ಹೇಳಲಾಗಿದೆ. ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸಣ್ಣ ಪ್ರಮಾಣದಲ್ಲಿ ನಡೆಯಲಿದ್ದು, ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸೇರಿ ಬಹುತೇಕ ಪ್ರಮುಖ ನಾಯಕರು ಆಗಮಿಸುವುದಿಲ್ಲ ಎಂದು ಮೂಲಗಳಿಂದ ಗೊತ್ತಾಗಿದೆ. ಪಂಜಾಬ್​ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ರಾಜೀನಾಮೆ ನೀಡಿದ ಬಳಿಕ, ಕಾಂಗ್ರೆಸ್​ ಚರಣ್​ಜಿತ್​ ಸಿಂಗ್​ ಛನ್ನಿ ಅವರನ್ನು ಸರ್ವಾನುಮತದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಿದೆ. 

ಪಂಜಾಬ್​​ನಲ್ಲಿ ಹಿಂದಿನ ಮುಖ್ಯಮಂತ್ರಿ ಅಮರಿಂದರ್​ ಸಿಂಗ್ ಮತ್ತು ಪಂಜಾಬ್​ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ನವಜೋತ್​ ಸಿಂಗ್​ ಸಿಧು ನಡುವಿನ ಬಹುಕಾಲದ ಜಗಳವೀಗ ಅಮರಿಂದರ್​ ಸಿಂಗ್​ ರಾಜೀನಾಮೆಯಲ್ಲಿ ಮುಕ್ತಾಯವಾಗಿದ್ದು ಗೊತ್ತೇ ಇದೆ. ಪಂಜಾಬ್​​ನಲ್ಲಿ ವಿಧಾನಸಭೆ ಚುನಾವಣೆ 2022ರಲ್ಲಿ ನಡೆಯಲಿರುವ ಬೆನ್ನಲ್ಲೇ ಇಂಥದ್ದೊಂದು ಬೆಳವಣಿಗೆಯಾಗಿದೆ. ಅಮರಿಂದರ್​ ಸಿಂಗ್​ ರಾಜೀನಾಮೆ ನೀಡಿದ ಮರುದಿನ ಛನ್ನಿ ಅವರನ್ನು ಆಯ್ಕೆ ಮಾಡಲಾಗಿದ್ದು, ಇವರು ಸಿಖ್​ ದಲಿತ ನಾಯಕರಾಗಿದ್ದಾರೆ.  ಚರಣ್​ಜಿತ್​ ಸಿಂಗ್​ ಛನ್ನಿ ಅವರು ಅಮರಿಂದರ್​ ಸಿಂಗ್​ ಕ್ಯಾಬಿನೆಟ್​​ನಲ್ಲಿ ತಾಂತ್ರಿಕ ಶಿಕ್ಷಣ ಸಚಿವರಾಗಿದ್ದರು. ಮುಖ್ಯಮಂತ್ರಿ ಹುದ್ದೆಗೆ ಏರಿದ ಮೊದಲ ದಲಿತ ಸಿಖ್​ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಚರಣ್​ಜಿತ್ ಸಿಂಗ್ ಛನ್ನಿ ಗಾಂಧಿ ಕುಟುಂಬಕ್ಕೆ ಆಪ್ತರು ಎಂದು ಹೇಳಲಾಗಿದೆ. ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ನವಜೋತ್ ಸಿಂಗ್ ಸಿಧು ಮತ್ತು ಸುಖ್​ಜಿಂದರ್ ಸಿಂಗ್ ರಂಧಾವಾ ಹೆಸರು ಕೇಳಿಬಂದಿತ್ತು. ಸುನಿಲ್ ಜಾಖರ್ ಮತ್ತು ಪ್ರತಾಪ್ ಸಿಂಗ್ ಬಜ್ವಾ ಹೆಸರು ಕೂಡ ಸುಳಿದಾಡಿತ್ತು. ಬಳಿಕ, ಭಾನುವಾರ ಬೆಳಗ್ಗೆ ಅಂಬಿಕಾ ಸೋನಿ ಹೆಸರು ಕೂಡ ಪ್ರಸ್ತಾಪ ಆಗಿತ್ತು. ಅಂತಿಮವಾಗಿ ಚರಣ್​ಜಿತ್ ಸಿಂಗ್ ಛನ್ನಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಈ ವರ್ಷ 18.90 ಲಕ್ಷಕ್ಕೆ ಹರಾಜಾಯ್ತು ಹೈದರಾಬಾದ್​ನ ಚಿನ್ನದ ಲೇಪಿತ ಬಾಲಾಪುರ ಗಣೇಶನ ಲಡ್ಡು

ಬೆಂಗಳೂರಿನಲ್ಲಿಂದು ಸಾಲು ಸಾಲು ಪ್ರತಿಭಟನೆ; ಟ್ರಾಫಿಕ್ ಸಮಸ್ಯೆ ಸಾಧ್ಯತೆ ಹೆಚ್ಚು

(Congress leader Rahul Gandhi unlikely to attend oath taking ceremony of Charanjit Singh Channi in Punjab)

Published On - 9:23 am, Mon, 20 September 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್