AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಇಂದಿನಿಂದ ರಾಹುಲ್ ಗಾಂಧಿ 10 ದಿನಗಳ ಕಾಲ ಇಂಗ್ಲೆಂಡ್‌ ಪ್ರವಾಸ, ಏನು ವಿಶೇಷ? ಇಲ್ಲಿದೆ ಮಾಹಿತಿ

ದೊಡ್ಡ ಮಟ್ಟದ ಭಾರತ್ ಜೋಡೋ ಯಾತ್ರೆ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದಿನಿಂದ ಹತ್ತು ದಿನಗಳ ಕಾಲ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದಾರೆ. ಏನು ವಿಶೇಷ?

Rahul Gandhi: ಇಂದಿನಿಂದ ರಾಹುಲ್ ಗಾಂಧಿ 10 ದಿನಗಳ ಕಾಲ ಇಂಗ್ಲೆಂಡ್‌ ಪ್ರವಾಸ, ಏನು ವಿಶೇಷ? ಇಲ್ಲಿದೆ ಮಾಹಿತಿ
ರಾಹುಲ್ ಗಾಂಧಿ
TV9 Web
| Edited By: |

Updated on: Feb 28, 2023 | 7:15 AM

Share

ನವದೆಹಲಿ: ಭಾರತ್ ಜೋಡೋ ಯಾತ್ರೆ ಯಶಸ್ಸು ಕಂಡಿರುವ ಸಂಭ್ರಮದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಇಂದಿನಿಂದ (ಫೆ.28) 10 ದಿನಗಳ ಕಾಲ ಇಂಗ್ಲೆಂಡ್‌ ಪ್ರವಾಸಕ್ಕೆ(England tour) ತೆರಳಲಿದ್ದಾರೆ. ಫೆಬ್ರವರಿ 28 ರಿಂದ ಮಾರ್ಚ್ 4ರವರೆಗೆ ಇಂಗ್ಲೆಂಡ್​ಗೆ ತೆರಳಲಿದ್ದು, ಕೆಂಬ್ರಿಡ್ಜ್‌ ಬಳಿಕ ಲಂಡನ್‌ನಲ್ಲೂ ಕೆಲ ದಿನ ಇರಲಿದ್ದಾರೆ. ಈ ವೇಳೆ ಕೆಂಬ್ರಿಡ್ಜ್‌ನಲ್ಲಿ ಉಪನ್ಯಾಸ ಕಾರ್ಯಕ್ರಮ ನೀಡಲಿದ್ದಾರೆ. ಅದಾದ ಬಳಿಕ ವಿವಿಯ ಆವರಣದಲ್ಲಿ ಸರಣಿ ಸಂವಾದ ಕಾರ್ಯಕ್ರಗಳಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ವ್ಯಾಸಂಗ ಮಾಡಿರುವ ಕೆಂಬ್ರಿಡ್ಜ್‌ ವಿವಿಗೆ ಭೇಟಿ ನೀಡಲಿದ್ದು, ಜಿಯೋಪಾಲಿಟಿಕ್ಸ್, ಅಂತರಾಷ್ಟ್ರೀಯ ಸಂಬಂಧಗಳು, ದೊಡ್ಡ ಡೇಟಾ ಮತ್ತು ಪ್ರಜಾಪ್ರಭುತ್ವ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲವು ಜ್ಞಾನವಂತ ಮನಸ್ಸುಗಳೊಂದಿಗೆ ಸಂವಾದ, ಉಪನ್ಯಾಸ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನು ಇತ್ತೀಚೆಗೆ ಈ ಬಗ್ಗೆ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ನಾನು ಕಲಿತ ವಿಶ್ವವಿದ್ಯಾಲಯವಾದ ಕೆಂಬ್ರಿಡ್ಜ್‌ ವಿವಿಗೆ ಭೇಟಿ ನೀಡಲು ಉತ್ಸುಕನಾಗಿದ್ದೇನೆ. ಕೆಬ್ರಿಡ್ಜ್‌ ಆವರಣದಲ್ಲಿ ಉಪನ್ಯಾಸ ಕಾರ್ಯಕ್ರಮ ನೀಡಲಿದ್ದೇನೆ. ಜಿಯೋಪಾಲಿಟಿಕ್ಸ್, ಅಂತರಾಷ್ಟ್ರೀಯ ಸಂಬಂಧಗಳು, ದೊಡ್ಡ ಡೇಟಾ ಮತ್ತು ಪ್ರಜಾಪ್ರಭುತ್ವ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲವು ಜ್ಞಾನವಂತ ಮನಸ್ಸುಗಳೊಂದಿಗೆ ತೊಡಗಿಸಿಕೊಳ್ಳಲು ಸಂತೋಷವಾಗುತ್ತಿದೆ ಎಂದಿದ್ದರು.

ಇನ್ನು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯ ಕೂಡ ಈ ಕುರಿತಾಗಿ ಟ್ವೀಟ್ ಮಾಡಿದ್ದು,’ಈ ತಿಂಗಳ ಕೊನೆಯಲ್ಲಿ ನಮ್ಮ ವಿವಿಗೆ ರಾಹುಲ್‌ ಗಾಂಧಿ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ಅವರು ಕೆಂಬ್ರಿಡ್ಜ್‌ ಎಂಬಿಎ ಕುರಿತು ಉಪನ್ಯಾಸ ನೀಡುತ್ತಾರೆ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ಬಿಗ್ ಡೇಟಾ ಮತ್ತು ಡೆಮಾಕ್ರಸಿ ಮತ್ತು ಭಾರತ-ಚೀನಾ ಸಂಬಂಧಗಳ ಕುರಿತು ಕಾರ್ಯಕ್ರಗಳನ್ನು ನಡೆಸಿಕೊಡಲಿದ್ದಾರೆ ಎಂದು ಟ್ವೀಟ್‌ ಮಾಡಿತ್ತು.

Follow Us
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ