AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 14ರಂದು ಆರಂಭ

ಕಳೆದ ವರ್ಷದ ಭಾರತ್ ಜೋಡೋ ಯಾತ್ರೆಯಿಂದ ಉಂಟಾದ ಪರಿಣಾಮವನ್ನು ಮರುಸೃಷ್ಟಿಸಲು "ಜೋಡೋ" ಪದವನ್ನು ಸೇರಿಸಲು ನಿರ್ಧರಿಸಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ರಾಹುಲ್ ಗಾಂಧಿಯವರ ಯಾತ್ರೆಯ ಕಲ್ಪನೆಯು ನ್ಯಾಯವಾಗಿದೆ. ಭಾರತದ ಜನರಿಗೆ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸುವುದು ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಜನವರಿ 14ರಂದು ಆರಂಭ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Jan 04, 2024 | 5:59 PM

Share

ದೆಹಲಿ ಜನವರಿ 04: ತಿಂಗಳುಗಟ್ಟಲೆ ಜನಾಂಗೀಯ ಹಿಂಸಾಚಾರದ ನಂತರವೂ ಸಹಜ ಸ್ಥಿತಿಗೆ ಬರಲು ಹೆಣಗಾಡುತ್ತಿರುವ ಈಶಾನ್ಯ ರಾಜ್ಯಕ್ಕೆ ಮಣಿಪುರದಿಂದ (Manipur) ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ ಯಾತ್ರೆ 2.0 ಜನವರಿ 14 ರಂದು ಆರಂಭವಾಗಲಿದೆ. 66 ದಿನಗಳ 6,700-ಕಿಮೀ ಕ್ರಮಿಸಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆ(Bharat Jodo Nyaya Yatra) ಎಂಬ ಹೆಸರಿನ  ಈ ಯಾತ್ರೆ ಮಹಾತ್ಮ ಗಾಂಧಿಯವರ ಜನ್ಮಸ್ಥಳವಾದ ಗುಜರಾತ್‌ನ ಪೋರಬಂದರ್‌ನಲ್ಲಿ ಮುಕ್ತಾಯಗೊಳ್ಳಲಿದೆ.ಇದು 15 ರಾಜ್ಯಗಳು ಮತ್ತು 100 ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಪಕ್ಷವು ಆರಂಭದಲ್ಲಿ ಅರುಣಾಚಲ ಪ್ರದೇಶದಿಂದ ಯಾತ್ರೆಯನ್ನು ಪ್ರಾರಂಭಿಸಲು ಯೋಜಿಸಿತ್ತು.

ಆರಂಭದಂತೆಯೇ, ಎರಡನೇ ಹಂತದ ಮೆರವಣಿಗೆಯ ಹೆಸರನ್ನು ಬದಲಾಯಿಸಲಾಯಿತು. ಕಳೆದ ವರ್ಷದ ಭಾರತ್ ಜೋಡೋ ಯಾತ್ರೆಯಿಂದ ಉಂಟಾದ ಪರಿಣಾಮವನ್ನು ಮರುಸೃಷ್ಟಿಸಲು “ಜೋಡೋ” ಪದವನ್ನು ಸೇರಿಸಲು ನಿರ್ಧರಿಸಿದ್ದೇವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

“ರಾಹುಲ್ ಗಾಂಧಿಯವರ ಯಾತ್ರೆಯ ಕಲ್ಪನೆಯು ನ್ಯಾಯವಾಗಿದೆ. ಭಾರತದ ಜನರಿಗೆ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ನ್ಯಾಯವನ್ನು ಖಚಿತಪಡಿಸುವುದು ಉದ್ದೇಶವಾಗಿದೆ” ಎಂದು ಜೈರಾಮ್ ರಮೇಶ್ ಹೇಳಿದರು. ಭಾರತ್ ಜೋಡೋ ಕನ್ಯಾಕುಮಾರಿ-ಶ್ರೀನಗರ ಯಾತ್ರೆಯು ಭಾರತವನ್ನು ದಕ್ಷಿಣದಿಂದ ಉತ್ತರಕ್ಕೆ ಸಂಚರಿಸಿದ್ದು, ಹೆಚ್ಚಿನ ಅಭಿಮಾನವನ್ನು ಹುಟ್ಟುಹಾಕಿದೆ ಎಂದು ಕಾಂಗ್ರೆಸ್ ಹೇಳಿದೆ. ಇದು ಗಂಭೀರ ರಾಜಕೀಯ ನಾಯಕನಾಗಿ ಗಾಂಧಿಯೆಡೆಗಿನ ಅನೇಕರ ದೃಷ್ಟಿಕೋನವನ್ನು ಬದಲಿಸಿದೆ.

ಭಾರತ್ ಜೋಡೋ ನ್ಯಾಯ್ ಯಾತ್ರೆಯು ಇಂಫಾಲ್‌ನಿಂದ ಮಧ್ಯಾಹ್ನ 12.30 ಕ್ಕೆ ಪ್ರಾರಂಭವಾಗಲಿದೆ. ಇದು ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಅರುಣಾಂಚಲ್ ಪ್ರದೇಶ, ಮೇಘಾಲಯ ಮೂಲಕ ಹಾದುಹೋಗುತ್ತದೆ. ಇದು ಮಧ್ಯ ಭಾರತವನ್ನು ತಲುಪುವ ಮೊದಲು ಬಂಗಾಳವನ್ನು ತಲುಪುತ್ತದೆ.

ಕಳೆದ ಬಾರಿಯಂತೆ ಯಾತ್ರೆಯು ಸಂಪೂರ್ಣವಾಗಿ ಕಾಲ್ನಡಿಗೆಯಲ್ಲಿ ಇರುವುದಿಲ್ಲ. ಪ್ರಯಾಣದ ಭಾಗಗಳಿಗೆ, ಪಕ್ಷವು ಬಸ್‌ಗಳನ್ನು ಬಳಸುತ್ತದೆ ಎಂದು ಜೈರಾಮ್ ರಮೇಶ್ ಸುದ್ದಿಗಾರರಿಗೆ ತಿಳಿಸಿದರು. ಪಕ್ಷದ ಹಿರಿಯ ನಾಯಕರ ಆರೋಗ್ಯದ ಕಾಳಜಿಯಂತೆ ಸಾರ್ವತ್ರಿಕ ಚುನಾವಣೆಯ ಸಮಯದ ನಿರ್ಬಂಧದಿಂದಾಗಿ ಬದಲಾವಣೆಯಾಗಿದೆ. ನಾವು ಇಂಡಿಯಾ ಮೈತ್ರಿಕೂಟದ ಎಲ್ಲಾ ಪಕ್ಷಗಳ ನಾಯಕರು, ಅವರ ಬೆಂಬಲಿಗರು, ಸಾರ್ವಜನಿಕರು ಮತ್ತು ಎನ್‌ಜಿಒಗಳನ್ನು ಯಾತ್ರೆಯಲ್ಲಿ ಭಾಗವಹಿಸಲು ಆಹ್ವಾನಿಸುತ್ತಿದ್ದೇವೆ” ಎಂದು ರಮೇಶ್ ಹೇಳಿದ್ದಾರೆ.

ಇದನ್ನೂ ಓದಿ: ನೀನಾ, ನಾನಾ ನೋಡೇ ಬಿಡೋಣ, ಕುಸ್ತಿಪಟುಗಳ ಜತೆ ಅಖಾಡಕ್ಕಿಳಿದ ರಾಹುಲ್ ಗಾಂಧಿ

ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವನ್ನು ಆಹ್ವಾನಿಸಲಾಗುತ್ತದೆಯೇ ಎಂದು ಕೇಳಿದಾಗ, ರಮೇಶ್ ಅವರು ಇಂಡಿಯಾ ಬಣದ ಭಾಗವಾಗಿರುವ ಎಲ್ಲಾ ಪಕ್ಷಗಳನ್ನು ಆಹ್ವಾನಿಸಲಾಗಿದೆ. ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್ ಇಂಡಿಯಾ ಒಕ್ಕೂಟದ ಭಾಗವೇ ಆಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರತಿಪಕ್ಷದ ಎಲ್ಲಾ ಮುಖ್ಯಮಂತ್ರಿಗಳು ಇಂಫಾಲ್‌ನಲ್ಲಿ ಯಾತ್ರೆಯ ಆರಂಭ ವೇಳೆ ಉಪಸ್ಥಿತರಿರುತ್ತಾರೆ ಎಂದು ಕಾಂಗ್ರೆಸ್ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ