AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯದ್ದು ಭಾರತ್ ಜೋಡೋ ಅಲ್ಲ, ಭಾರತ್ ತೋಡೋ ಯಾತ್ರೆ: ಮಣಿಪುರ ಸಿಎಂ ಬಿರೇನ್ ಸಿಂಗ್

ಪರಿಸ್ಥಿತಿ ಸುಧಾರಿಸುತ್ತಿದೆ. ಆದರೆ ರಾಹುಲ್ ಗಾಂಧಿ ಇದನ್ನೆಲ್ಲ ಕೆಡಿಸಲು ಬಂದಿದ್ದಾರೆಯೇ ಎಂಬ ಅನುಮಾನ ನಮಗಿದೆ. ಈ ಬಾರಿ ಮಣಿಪುರ ಅಲರ್ಟ್ ಆಗಿದೆ. ಅವರು ಬಂದರೆ, ಅಂತದ್ದೇನೂ ಅನಾಹುತ ಆಗದಂತೆ ಎಚ್ಚರವಹಿಸಬೇಕು ಎಂದು ಸಿಎಂ ಹೇಳಿದರು .ಕಾಂಗ್ರೆಸ್ ನಾಯಕ 'ಭಾರತ್ ತೋಡೋ' (ಬ್ರೇಕ್ ಇಂಡಿಯಾ) ಯಾತ್ರೆ ಕೈಗೊಂಡಿದ್ದಾರೆ ಎಂದ ಬಿರೇನ್ ಸಿಂಗ್.

ರಾಹುಲ್ ಗಾಂಧಿಯದ್ದು ಭಾರತ್ ಜೋಡೋ ಅಲ್ಲ, ಭಾರತ್ ತೋಡೋ ಯಾತ್ರೆ: ಮಣಿಪುರ ಸಿಎಂ ಬಿರೇನ್ ಸಿಂಗ್
ಬಿರೇನ್ ಸಿಂಗ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 14, 2024 | 9:41 PM

Share

ಇಂಫಾಲ್ ಜನವರಿ 14: ಭಾನುವಾರ ಮಣಿಪುರದಿಂದ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು (Bharat Jodo Nyay Yatra) ಮಣಿಪುರ (Manipur)  ಮುಖ್ಯಮಂತ್ರಿ ಬಿರೇನ್ ಸಿಂಗ್ (Biren Singh) ಟೀಕಿಸಿದ್ದಾರೆ. ಈಶಾನ್ಯ ರಾಜ್ಯದ ಬಿಜೆಪಿ ಸರ್ಕಾರದ ನೇತೃತ್ವ ವಹಿಸಿರುವ ಬಿರೇನ್ ಸಿಂಗ್, ರಾಹುಲ್ ಗಾಂಧಿ ಮಣಿಪುರಕ್ಕೆ ಬಂದಿದ್ದು ಪ್ರಸ್ತುತ ಪರಿಸ್ಥಿತಿ ಸುಧಾರಿಸುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಇಂಫಾಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಂಗ್, “ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ, ಇದು ರ್ಯಾಲಿ ನಡೆಸುವ ಮೂಲಕ ರಾಜಕೀಯ ಮಾಡುವ ಸಮಯವೇ? ಜೀವಗಳು ಮತ್ತು ಆಸ್ತಿಗಳನ್ನು ರಕ್ಷಿಸುವ ಮತ್ತು ಸಾಂತ್ವನ ನೀಡುವ ಸಮಯ ಇದು.

ಪರಿಸ್ಥಿತಿ ಸುಧಾರಿಸುತ್ತಿದೆ. ಆದರೆ ರಾಹುಲ್ ಗಾಂಧಿ ಇದನ್ನೆಲ್ಲ ಕೆಡಿಸಲು ಬಂದಿದ್ದಾರೆಯೇ ಎಂಬ ಅನುಮಾನ ನಮಗಿದೆ. ಈ ಬಾರಿ ಮಣಿಪುರ ಅಲರ್ಟ್ ಆಗಿದೆ. ಅವರು ಬಂದರೆ, ಅಂತದ್ದೇನೂ ಅನಾಹುತ ಆಗದಂತೆ ಎಚ್ಚರವಹಿಸಬೇಕು ಎಂದು ಸಿಎಂ ಹೇಳಿದರು.ಕಾಂಗ್ರೆಸ್ ನಾಯಕ ‘ಭಾರತ್ ತೋಡೋ’ (ಬ್ರೇಕ್ ಇಂಡಿಯಾ) ಯಾತ್ರೆ ಕೈಗೊಂಡಿದ್ದಾರೆ. ಅದು ಭಾರತ್ ಜೋಡೋ ಯಾತ್ರೆ ಅಲ್ಲ ಎಂದಿದ್ದಾರೆ ಬಿರೇನ್ ಸಿಂಗ್.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ಹಿರಿಯ ನಾಯಕರು ಭಾನುವಾರ ಮಣಿಪುರದ ತೌಬಲ್‌ನಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಚಾಲನೆ ನೀಡಿದರು. ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾವು ನಿಮಗೆ ನಮ್ಮ ‘ಮನ್ ಕಿ ಬಾತ್’ ಬಗ್ಗೆ ಹೇಳಲು ಬಯಸುವುದಿಲ್ಲ. ಆದರೆ ನಿಮ್ಮ ‘ಮನ್ ಕಿ ಬಾತ್’ ಬಗ್ಗೆ ಕೇಳಲು ಬಯಸುತ್ತೇವೆ. ನಿಮ್ಮ ನೋವಿನ ಬಗ್ಗೆ ನಾವು ತಿಳಿದುಕೊಳ್ಳಲು ಬಯಸುತ್ತೇವೆ. ನಾವು ಸಹೋದರತ್ವ ಮತ್ತು ಸಾಮರಸ್ಯದ ದೃಷ್ಟಿಕೋನವನ್ನು ಹಂಚಿಕೊಳ್ಳಲು ಬಯಸುತ್ತೇವೆ.

ನಾನು 2004 ರಿಂದ ರಾಜಕೀಯದಲ್ಲಿದ್ದೇನೆ. ಮೊದಲ ಬಾರಿಗೆ ನಾನು ಭಾರತದಲ್ಲಿ ಸಂಪೂರ್ಣ ಆಡಳಿತದ ಮೂಲಸೌಕರ್ಯ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಜೂನ್ 29 ರ ನಂತರ (ರಾಜ್ಯಕ್ಕೆ ಅವರ ಭೇಟಿ), ಮಣಿಪುರವು ಇನ್ನು ಮುಂದೆ ಮಣಿಪುರವಾಗಿರಲಿಲ್ಲ, ಅದು ವಿಭಜನೆಯಾಯಿತು ಮತ್ತು ಎಲ್ಲೆಡೆ ದ್ವೇಷ ಹರಡಿತು, ಲಕ್ಷಾಂತರ ಜನರು ನಷ್ಟವನ್ನು ಅನುಭವಿಸಿದರು. ಇಲ್ಲಿಯವರೆಗೆ, ಭಾರತದ ಪ್ರಧಾನಿ ನಿಮ್ಮ ಕಣ್ಣೀರು ಒರೆಸಲು ಮತ್ತು ನಿಮ್ಮ ಕೈ ಹಿಡಿಯಲು ಇಲ್ಲಿಗೆ ಬಂದಿಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ರಾಹುಲ್ ಹೇಳಿದರು.

ಇದನ್ನೂ ಓದಿ:Rahul Gandhi: ಅಂದು ಕನ್ಯಾಕುಮಾರಿ, ಇಂದು ಮಣಿಪುರ; ರಾಹುಲ್ ಗಾಂಧಿಯ ಎರಡನೇ ಆವೃತ್ತಿಯ ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್​ಗೆ ಗೆಲುವಿನ ವಿಶ್ವಾಸ ಮೂಡಿಸುತ್ತಾ?

ಕಳೆದ ವರ್ಷ ಜೂನ್‌ನಲ್ಲಿ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಗಾಂಧಿಯವರು ಮಣಿಪುರಕ್ಕೆ ಎರಡು ದಿನಗಳ ಭೇಟಿ ನೀಡಿದ್ದರು. ತಮ್ಮ ಭೇಟಿಯ ವೇಳೆ ಅವರು ವಿವಿಧ ಜಿಲ್ಲೆಗಳಲ್ಲಿ ಪರಿಹಾರ ಶಿಬಿರಗಳಲ್ಲಿ ನೆಲೆಸಿರುವ ಸಂತ್ರಸ್ತ ವ್ಯಕ್ತಿಗಳನ್ನು ಭೇಟಿ ಮಾಡಿದರು. ಅದೇನೇ ಇದ್ದರೂ, ಮಾರ್ಗದುದ್ದಕ್ಕೂ ಸಂಭವನೀಯ ಹಿಂಸಾಚಾರದ ಆತಂಕದಿಂದಾಗಿ ಪೊಲೀಸರು ಮಧ್ಯಪ್ರವೇಶಿಸಿ ಇಂಫಾಲ್‌ನಿಂದ ಚುರಾಚಂದ್‌ಪುರಕ್ಕೆ ಹೋಗುವ ಮಾರ್ಗದಲ್ಲಿ ಬೆಂಗಾವಲು ಪಡೆಯನ್ನು ನಿಲ್ಲಿಸಿದರು. ಇದರಿಂದಾಗಿ ಹಲವು ಗಂಟೆಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಅಂತಿಮವಾಗಿ, ಕಾಂಗ್ರೆಸ್ ನಾಯಕ ಚುರಾಚಂದಪುರವನ್ನು ತಲುಪಲು ಹೆಲಿಕಾಪ್ಟರ್ ಪ್ರಯಾಣವನ್ನು ಆರಿಸಿಕೊಂಡರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ