Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯದ್ದು ಭಾರತ್ ಜೋಡೋ ಅಲ್ಲ, ಭಾರತ್ ತೋಡೋ ಯಾತ್ರೆ: ಮಣಿಪುರ ಸಿಎಂ ಬಿರೇನ್ ಸಿಂಗ್

ಪರಿಸ್ಥಿತಿ ಸುಧಾರಿಸುತ್ತಿದೆ. ಆದರೆ ರಾಹುಲ್ ಗಾಂಧಿ ಇದನ್ನೆಲ್ಲ ಕೆಡಿಸಲು ಬಂದಿದ್ದಾರೆಯೇ ಎಂಬ ಅನುಮಾನ ನಮಗಿದೆ. ಈ ಬಾರಿ ಮಣಿಪುರ ಅಲರ್ಟ್ ಆಗಿದೆ. ಅವರು ಬಂದರೆ, ಅಂತದ್ದೇನೂ ಅನಾಹುತ ಆಗದಂತೆ ಎಚ್ಚರವಹಿಸಬೇಕು ಎಂದು ಸಿಎಂ ಹೇಳಿದರು .ಕಾಂಗ್ರೆಸ್ ನಾಯಕ 'ಭಾರತ್ ತೋಡೋ' (ಬ್ರೇಕ್ ಇಂಡಿಯಾ) ಯಾತ್ರೆ ಕೈಗೊಂಡಿದ್ದಾರೆ ಎಂದ ಬಿರೇನ್ ಸಿಂಗ್.

ರಾಹುಲ್ ಗಾಂಧಿಯದ್ದು ಭಾರತ್ ಜೋಡೋ ಅಲ್ಲ, ಭಾರತ್ ತೋಡೋ ಯಾತ್ರೆ: ಮಣಿಪುರ ಸಿಎಂ ಬಿರೇನ್ ಸಿಂಗ್
ಬಿರೇನ್ ಸಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on: Jan 14, 2024 | 9:41 PM

ಇಂಫಾಲ್ ಜನವರಿ 14: ಭಾನುವಾರ ಮಣಿಪುರದಿಂದ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು (Bharat Jodo Nyay Yatra) ಮಣಿಪುರ (Manipur)  ಮುಖ್ಯಮಂತ್ರಿ ಬಿರೇನ್ ಸಿಂಗ್ (Biren Singh) ಟೀಕಿಸಿದ್ದಾರೆ. ಈಶಾನ್ಯ ರಾಜ್ಯದ ಬಿಜೆಪಿ ಸರ್ಕಾರದ ನೇತೃತ್ವ ವಹಿಸಿರುವ ಬಿರೇನ್ ಸಿಂಗ್, ರಾಹುಲ್ ಗಾಂಧಿ ಮಣಿಪುರಕ್ಕೆ ಬಂದಿದ್ದು ಪ್ರಸ್ತುತ ಪರಿಸ್ಥಿತಿ ಸುಧಾರಿಸುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ. ಇಂಫಾಲ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಂಗ್, “ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಗಮನಿಸಿದರೆ, ಇದು ರ್ಯಾಲಿ ನಡೆಸುವ ಮೂಲಕ ರಾಜಕೀಯ ಮಾಡುವ ಸಮಯವೇ? ಜೀವಗಳು ಮತ್ತು ಆಸ್ತಿಗಳನ್ನು ರಕ್ಷಿಸುವ ಮತ್ತು ಸಾಂತ್ವನ ನೀಡುವ ಸಮಯ ಇದು.

ಪರಿಸ್ಥಿತಿ ಸುಧಾರಿಸುತ್ತಿದೆ. ಆದರೆ ರಾಹುಲ್ ಗಾಂಧಿ ಇದನ್ನೆಲ್ಲ ಕೆಡಿಸಲು ಬಂದಿದ್ದಾರೆಯೇ ಎಂಬ ಅನುಮಾನ ನಮಗಿದೆ. ಈ ಬಾರಿ ಮಣಿಪುರ ಅಲರ್ಟ್ ಆಗಿದೆ. ಅವರು ಬಂದರೆ, ಅಂತದ್ದೇನೂ ಅನಾಹುತ ಆಗದಂತೆ ಎಚ್ಚರವಹಿಸಬೇಕು ಎಂದು ಸಿಎಂ ಹೇಳಿದರು.ಕಾಂಗ್ರೆಸ್ ನಾಯಕ ‘ಭಾರತ್ ತೋಡೋ’ (ಬ್ರೇಕ್ ಇಂಡಿಯಾ) ಯಾತ್ರೆ ಕೈಗೊಂಡಿದ್ದಾರೆ. ಅದು ಭಾರತ್ ಜೋಡೋ ಯಾತ್ರೆ ಅಲ್ಲ ಎಂದಿದ್ದಾರೆ ಬಿರೇನ್ ಸಿಂಗ್.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ಹಿರಿಯ ನಾಯಕರು ಭಾನುವಾರ ಮಣಿಪುರದ ತೌಬಲ್‌ನಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಚಾಲನೆ ನೀಡಿದರು. ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ನಾವು ನಿಮಗೆ ನಮ್ಮ ‘ಮನ್ ಕಿ ಬಾತ್’ ಬಗ್ಗೆ ಹೇಳಲು ಬಯಸುವುದಿಲ್ಲ. ಆದರೆ ನಿಮ್ಮ ‘ಮನ್ ಕಿ ಬಾತ್’ ಬಗ್ಗೆ ಕೇಳಲು ಬಯಸುತ್ತೇವೆ. ನಿಮ್ಮ ನೋವಿನ ಬಗ್ಗೆ ನಾವು ತಿಳಿದುಕೊಳ್ಳಲು ಬಯಸುತ್ತೇವೆ. ನಾವು ಸಹೋದರತ್ವ ಮತ್ತು ಸಾಮರಸ್ಯದ ದೃಷ್ಟಿಕೋನವನ್ನು ಹಂಚಿಕೊಳ್ಳಲು ಬಯಸುತ್ತೇವೆ.

ನಾನು 2004 ರಿಂದ ರಾಜಕೀಯದಲ್ಲಿದ್ದೇನೆ. ಮೊದಲ ಬಾರಿಗೆ ನಾನು ಭಾರತದಲ್ಲಿ ಸಂಪೂರ್ಣ ಆಡಳಿತದ ಮೂಲಸೌಕರ್ಯ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಜೂನ್ 29 ರ ನಂತರ (ರಾಜ್ಯಕ್ಕೆ ಅವರ ಭೇಟಿ), ಮಣಿಪುರವು ಇನ್ನು ಮುಂದೆ ಮಣಿಪುರವಾಗಿರಲಿಲ್ಲ, ಅದು ವಿಭಜನೆಯಾಯಿತು ಮತ್ತು ಎಲ್ಲೆಡೆ ದ್ವೇಷ ಹರಡಿತು, ಲಕ್ಷಾಂತರ ಜನರು ನಷ್ಟವನ್ನು ಅನುಭವಿಸಿದರು. ಇಲ್ಲಿಯವರೆಗೆ, ಭಾರತದ ಪ್ರಧಾನಿ ನಿಮ್ಮ ಕಣ್ಣೀರು ಒರೆಸಲು ಮತ್ತು ನಿಮ್ಮ ಕೈ ಹಿಡಿಯಲು ಇಲ್ಲಿಗೆ ಬಂದಿಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ರಾಹುಲ್ ಹೇಳಿದರು.

ಇದನ್ನೂ ಓದಿ:Rahul Gandhi: ಅಂದು ಕನ್ಯಾಕುಮಾರಿ, ಇಂದು ಮಣಿಪುರ; ರಾಹುಲ್ ಗಾಂಧಿಯ ಎರಡನೇ ಆವೃತ್ತಿಯ ಭಾರತ್ ಜೋಡೋ ಯಾತ್ರೆ ಕಾಂಗ್ರೆಸ್​ಗೆ ಗೆಲುವಿನ ವಿಶ್ವಾಸ ಮೂಡಿಸುತ್ತಾ?

ಕಳೆದ ವರ್ಷ ಜೂನ್‌ನಲ್ಲಿ ರಾಜ್ಯದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಗಾಂಧಿಯವರು ಮಣಿಪುರಕ್ಕೆ ಎರಡು ದಿನಗಳ ಭೇಟಿ ನೀಡಿದ್ದರು. ತಮ್ಮ ಭೇಟಿಯ ವೇಳೆ ಅವರು ವಿವಿಧ ಜಿಲ್ಲೆಗಳಲ್ಲಿ ಪರಿಹಾರ ಶಿಬಿರಗಳಲ್ಲಿ ನೆಲೆಸಿರುವ ಸಂತ್ರಸ್ತ ವ್ಯಕ್ತಿಗಳನ್ನು ಭೇಟಿ ಮಾಡಿದರು. ಅದೇನೇ ಇದ್ದರೂ, ಮಾರ್ಗದುದ್ದಕ್ಕೂ ಸಂಭವನೀಯ ಹಿಂಸಾಚಾರದ ಆತಂಕದಿಂದಾಗಿ ಪೊಲೀಸರು ಮಧ್ಯಪ್ರವೇಶಿಸಿ ಇಂಫಾಲ್‌ನಿಂದ ಚುರಾಚಂದ್‌ಪುರಕ್ಕೆ ಹೋಗುವ ಮಾರ್ಗದಲ್ಲಿ ಬೆಂಗಾವಲು ಪಡೆಯನ್ನು ನಿಲ್ಲಿಸಿದರು. ಇದರಿಂದಾಗಿ ಹಲವು ಗಂಟೆಗಳ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಅಂತಿಮವಾಗಿ, ಕಾಂಗ್ರೆಸ್ ನಾಯಕ ಚುರಾಚಂದಪುರವನ್ನು ತಲುಪಲು ಹೆಲಿಕಾಪ್ಟರ್ ಪ್ರಯಾಣವನ್ನು ಆರಿಸಿಕೊಂಡರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ