ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ, ಇಂದಿನ ಕಲಾಪದಲ್ಲಿ ಭಾಗಿ

|

Updated on: Aug 07, 2023 | 10:43 AM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸಂಸತ್ತಿಗೆ ಯಾವಾಗ ಮರಳುತ್ತಾರೆ ಎನ್ನುವ ಪ್ರಶ್ನೆ ಎಲ್ಲರಲ್ಲಿದೆ

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಪುನಃಸ್ಥಾಪನೆ, ಇಂದಿನ ಕಲಾಪದಲ್ಲಿ ಭಾಗಿ
ರಾಹುಲ್
Follow us on

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದ್ದು, ಇಂದಿನಿಂದ ಕಲಾಪದಲ್ಲಿ ಪಾಲ್ಗೊಳ್ಳಲಿದ್ದಾರೆ.  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸಂಸತ್ತಿಗೆ ಯಾವಾಗ ಮರಳುತ್ತಾರೆ ಎನ್ನುವ ಪ್ರಶ್ನೆ ಎಲ್ಲರಲ್ಲಿತ್ತು. ಲೋಕಸಭೆಯಲ್ಲಿ ಇಂದು ಸದಸ್ಯತ್ವವನ್ನು ಮರುಸ್ಥಾಪಿಸುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ.  ಹೀಗಾಗಿ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ರದ್ದುಗೊಳಿಸುವ ವಿಚಾರ ಕುರಿತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ನಿರ್ಧಾರವನ್ನು ಎಲ್ಲರೂ ಕಾದು ನೋಡುತ್ತಿದ್ದರು.

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮಂಡಿಸಿರುವ ಅವಿಶ್ವಾಸ ಗೊತ್ತುವಳಿಯಲ್ಲಿ ರಾಹುಲ್ ಗಾಂಧಿ ಕೂಡ ಪಾಲ್ಗೊಳ್ಳಬೇಕು ಎಂಬುದು ಕಾಂಗ್ರೆಸ್ ನಾಯಕರ ಒತ್ತಾಯವಾಗಿತ್ತು. ಲೋಕಸಭೆಯ ಸಚಿವಾಲಯವು ಕಾನೂನು ಸಚಿವಾಲಯದ ಅಭಿಪ್ರಾಯವನ್ನು ತೆಗೆದುಕೊಳ್ಳಲು ನಿರ್ಧರಿಸಿದರೆ, ನಂತರ ರಾಹುಲ್ ಗಾಂಧಿಯವರ ಸಂಸತ್ತಿನ ಸದಸ್ಯತ್ವವನ್ನು ಮರುಸ್ಥಾಪಿಸುವುದು ದೀರ್ಘ ಪ್ರಕ್ರಿಯೆಯಾಗಿ ಬದಲಾಗಬಹುದು ಎಂದು ಊಹಿಸಲಾಗಿತ್ತು.

ಇಂದು ಸಂಜೆಯೊಳಗೆ ರಾಹುಲ್ ಗಾಂಧಿಯವರ ಸದಸ್ಯತ್ವವನ್ನು ಮರುಸ್ಥಾಪಿಸದಿದ್ದರೆ, ಕಾಂಗ್ರೆಸ್ ಪಕ್ಷವು ಆಗಸ್ಟ್ 8 ರಂದು ಸುಪ್ರೀಂ ಕೋರ್ಟ್‌ಗೆ ತೆರಳುವ ಸಾಧ್ಯತೆಯಿದೆ ಎಂದು ಎಎನ್‌ಐ ವರದಿ ಮಾಡಿತ್ತು.

ಮತ್ತಷ್ಟು ಓದಿ: ಶಿಕ್ಷೆಗೆ ಸುಪ್ರೀಂ ತಡೆಯಾಜ್ಞೆ: ಸಂಸತ್​​ನ ಮುಂಗಾರು ಅಧಿವೇಶನದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲು ಸಾಧ್ಯವಾಗಬಹುದೇ?

ಈ ವರ್ಷದ ಆರಂಭದಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದ ಮೊಹಮ್ಮದ್ ಫೈಜಲ್ ಪ್ರಕರಣದಲ್ಲಿ ಲಕ್ಷದ್ವೀಪದ ಸಂಸದರು ಜನವರಿಯಲ್ಲಿ ಕೇರಳ ಹೈಕೋರ್ಟ್​ ಶಿಕ್ಷೆಗೆ ತಡೆನೀಡಿದ್ದರೂ ಸಂಸತ್ ಸದಸ್ಯತ್ವಕ್ಕೆ ಮರಳಲು ಸುಮಾರು ಎರಡು ತಿಂಗಳ ಸಮಯ ಬೇಕಾಯಿತು.
ಕಾಂಗ್ರೆಸ್ ಸೇರಿದಂತೆ ಎಲ್ಲರ ಕಣ್ಣು ಲೋಕಸಭೆ ಸೆಕ್ರೆಟರಿಯೇಟ್ ಮೇಲೆ ನೆಟ್ಟಿತ್ತು.

-1999ರಲ್ಲಿ ಕಾಂಗ್ರೆಸ್ 453 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ 114 ಸ್ಥಾನಗಳನ್ನು ಗೆದ್ದಿತ್ತು.
-2004ರಲ್ಲಿ ಕಾಂಗ್ರೆಸ್ 417 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ 145ರಲ್ಲಿ ಗೆಲುವು ಸಾಧಿಸಿತ್ತು.
-2009ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 440 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತು ಮತ್ತು ಪಕ್ಷವು 206 ಸ್ಥಾನಗಳನ್ನು ಗೆದ್ದುಕೊಂಡಿತು.
-2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 414 ಸ್ಥಾನಗಳಲ್ಲಿ ಸ್ಪರ್ಧಿಸಿ 44 ಸ್ಥಾನಗಳಿಗೆ ಕುಸಿದಿತ್ತು.
-2019 ರಲ್ಲಿ ಕಾಂಗ್ರೆಸ್ 421 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು ಮತ್ತು ಕೇವಲ 52 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು.

ಇಂದು ವಿಪಕ್ಷ ಮೈತ್ರಿಕೂಟ ಸಭೆ
ಸೋಮವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ INDIA ನಾಯಕರು ಸಭೆ ನಡೆಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಭೆ ಆರಂಭವಾಗಿದೆ.

ಇಂಡಿಯಾ ಮತ್ತು ಕಾಂಗ್ರೆಸ್‌ನ ಮುಂಬರುವ ಎರಡೂ ಸಭೆಗಳಲ್ಲಿ, ವಿರೋಧ ಪಕ್ಷದ ನಾಯಕರು ಗಾಂಧಿಯವರ ಅನರ್ಹತೆಯನ್ನು ಶೀಘ್ರವಾಗಿ ಹಿಂತೆಗೆದುಕೊಳ್ಳದಿದ್ದರೆ ಭವಿಷ್ಯದ ಕ್ರಮಗಳ ಯೋಜನೆಯನ್ನು ಚರ್ಚಿಸುತ್ತಾರೆ.

ಲೋಕಸಭೆ ಸ್ಪೀಕರ್ ಆದಷ್ಟು ಬೇಗ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಾವೆಲ್ಲರೂ ಭಾವಿಸುತ್ತೇವೆ ಎಂದು ಕಾಂಗ್ರೆಸ್ ಲೋಕಸಭಾ ಶಾಸಕ ಮಾಣಿಕ್ಕಂ ಟ್ಯಾಗೋರ್ ಹೇಳಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 10:32 am, Mon, 7 August 23