AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್ಎಫ್ ಅಧಿಕಾರ ವ್ಯಾಪ್ತಿ ವಿಸ್ತರಣೆ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್; ‘ಕ್ರೊನೊಲಜಿ’ ಟ್ವೀಟ್ ಮಾಡಿದ ಸುರ್ಜೇವಾಲಾ

ಪಂಜಾಬ್, ಬಂಗಾಳ ಮತ್ತು ಅಸ್ಸಾಂ ಎಂಬ ಮೂರು ರಾಜ್ಯಗಳಲ್ಲಿ ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯು ಅಂತಾರಾಷ್ಟ್ರೀಯ ಗಡಿಯ 50 ಕಿಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರದೇಶಗಳನ್ನು ಒಳಗೊಳ್ಳುತ್ತದೆ ಎಂದು ಗೃಹ ಸಚಿವಾಲಯದ ಆದೇಶ ಬೆನ್ನಲ್ಲೇ ಸುರ್ಜೇವಾಲಾ ಈ ಟೀಕೆ ಮಾಡಿದ್ದಾರೆ.

ಬಿಎಸ್ಎಫ್ ಅಧಿಕಾರ ವ್ಯಾಪ್ತಿ ವಿಸ್ತರಣೆ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್; ‘ಕ್ರೊನೊಲಜಿ’ ಟ್ವೀಟ್ ಮಾಡಿದ ಸುರ್ಜೇವಾಲಾ
ರಣದೀಪ್ ಸುರ್ಜೇವಾಲಾ (ಸಂಗ್ರಹ ಚಿತ್ರ)
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 14, 2021 | 1:13 PM

Share

ದೆಹಲಿ: ಪಂಜಾಬ್‌ನಲ್ಲಿ ಗಡಿ ಭದ್ರತಾ ಪಡೆಯ (BSF) ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸುವ ಏಕಪಕ್ಷೀಯ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ (Randeep Surjewala) ಕೇಂದ್ರ ಸರ್ಕಾರವನ್ನು  ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವರ್ಷ ಗುಜರಾತ್‌ನ ಅದಾನಿ ನಡೆಸುವ ಮುಂದ್ರಾ ಬಂದರಿನಲ್ಲಿ (Mundra Port) ವಶಪಡಿಸಿಕೊಳ್ಳಲಾದ ಹೆರಾಯಿನ್ (heroin) ಪ್ರಕರಣದ ಗಮನವನ್ನು ಬೇರೆಡೆಗೆ ಸೆಳೆಯಲು ಈ ರೀತಿ ಕೇಂದ್ರ ಸರ್ಕಾರ ಮಾಡಿದೆ ಎಂದು ಸುರ್ಜೇವಾಲಾ ಆರೋಪಿಸಿದ್ದಾರೆ. ಮುಂದಿನ ವರ್ಷ ಎರಡೂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಪಂಜಾಬ್‌ನಲ್ಲಿ ಅಧಿಕಾರದಲ್ಲಿದೆ. ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ.  ಹೀಗಿರುವಾಗಬಿಜೆಪಿ ತಮ್ಮ ರಾಜ್ಯಗಳಲ್ಲಿ ಮರು ಚುನಾವಣೆಗೆ ಬಿಡ್ ಮಾಡುತ್ತವೆ ಮತ್ತು ಇನ್ನೊಂದರಲ್ಲಿ ಪ್ರಬಲ ಪ್ರದರ್ಶನ ನೀಡುತ್ತವೆ ಎಂದಿದ್ದಾರೆ ಸುರ್ಜೇವಾಲಾ.

ಗೃಹ ಸಚಿವ ಅಮಿತ್ ಶಾ ಅವರ ‘ಕ್ರೊನೊಲಜಿ ಸಮಜಿಯೇ’ (ಕ್ರೊನೊಲಜಿ ಅರ್ಥ ಮಾಡಿಕೊಳ್ಳಿ ) ಹೇಳಿಕೆಯಿಂದ ಸ್ಫೂರ್ತಿ ಪಡೆದ ಸುರ್ಜೇವಾಲಾ 9/6/2021 ರಂದು 25,000 ಕೆಜಿ ಹೆರಾಯಿನ್ ಮುಂದ್ರಾ ಬಂದರಿನ ಮೂಲಕ ಬಂದಿದೆ. 13/9/2021ರಂದು 3,000 ಕೆಜಿ (₹ 20,000 ಕೋಟಿ ಮೌಲ್ಯದ  ಡ್ರಗ್ಸ್ ಅನ್ನು ಇದೇ ಬಂದರಿನಲ್ಲಿ ಸೆಪ್ಟೆಂಬರ್‌ನಲ್ಲಿ ವಶಪಡಿಸಿಕೊಂಡಿದ್ದಾರೆ. ಪಂಜಾಬ್‌ನಲ್ಲಿ ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯನ್ನು ಏಕಪಕ್ಷೀಯವಾಗಿ 15 ಕಿಮೀ ನಿಂದ 50 ಕಿಮೀಗೆ ಹೆಚ್ಚಿಸಲಾಗಿದೆ. ಒಕ್ಕೂಟ ಸತ್ತಿದೆ, ಪಿತೂರಿ ಸ್ಪಷ್ಟವಾಗಿದೆ ಎಂದು ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಪಂಜಾಬ್, ಬಂಗಾಳ ಮತ್ತು ಅಸ್ಸಾಂ ಎಂಬ ಮೂರು ರಾಜ್ಯಗಳಲ್ಲಿ ಬಿಎಸ್‌ಎಫ್ ಅಧಿಕಾರ ವ್ಯಾಪ್ತಿಯು ಅಂತಾರಾಷ್ಟ್ರೀಯ ಗಡಿಯ 50 ಕಿಮೀ ವ್ಯಾಪ್ತಿಯಲ್ಲಿರುವ ಎಲ್ಲಾ ಪ್ರದೇಶಗಳನ್ನು ಒಳಗೊಳ್ಳುತ್ತದೆ ಎಂದು ಗೃಹ ಸಚಿವಾಲಯದ ಆದೇಶ ಬೆನ್ನಲ್ಲೇ ಸುರ್ಜೇವಾಲಾ ಈ ಟೀಕೆ ಮಾಡಿದ್ದಾರೆ.

ಈ ಹಿಂದೆ ಪಂಜಾಬ್‌ನಲ್ಲಿ ಬಿಎಸ್‌ಎಫ್ ಪಾಕಿಸ್ತಾನದ ಗಡಿಯಿಂದ 15 ಕಿಮೀ ವರೆಗೆ ಅಧಿಕಾರ ವ್ಯಾಪ್ತಿಯನ್ನು ಹೊಂದಿತ್ತು. ಹೊಸ ಆದೇಶದ ಪ್ರಕಾರ ಹೆಚ್ಚಿನ ಪ್ರದೇಶಗಳಲ್ಲಿ ಬಿಎಸ್‌ಎಫ್ ಶೋಧಗಳನ್ನು ನಡೆಸಬಹುದು ಮತ್ತು ಬಂಧಿಸಬಹುದು.

ಇದು ಪಂಜಾಬ್‌ನಲ್ಲಿ ಸಂಭಾವ್ಯ ಸ್ಫೋಟಕ ಸನ್ನಿವೇಶವನ್ನು ಸ್ಥಾಪಿಸುತ್ತದೆ, ಮುಂದಿನ ವರ್ಷದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಮುಖಾಮುಖಿಯಾಗುವ ರಾಜ್ಯದಲ್ಲಿ ಬಿಎಸ್‌ಎಫ್ ಮತ್ತು ಪೊಲೀಸರು ನ್ಯಾಯವ್ಯಾಪ್ತಿಯಲ್ಲಿ ಘರ್ಷಣೆ ನಡೆಸುವ ಸಾಧ್ಯತೆಯಿದೆ.

ಪಂಜಾಬ್ ಮುಖ್ಯಮಂತ್ರಿ ಚರಣ್​​ಜಿತ್ ಚನ್ನಿ  ಆಡಳಿತ ಪಕ್ಷದೊಳಗಿನ ಭಿನ್ನಾಭಿಪ್ರಾಯ ಹೆಚ್ಚಾದಂತೆ ಅವರದೇ ಪಕ್ಷದ ಸಹೋದ್ಯೋಗಿಗಳಿಂದ ಟೀಕೆಗೊಳಗಾಗಿದ್ದುಇದನ್ನು “ಫೆಡರಲಿಸಂ ಮೇಲೆ ನೇರ ದಾಳಿ” ಎಂದು ಕರೆದಿದ್ದಾರೆ.

ಸುರ್ಜೇವಾಲಾ ಅವರ ಟ್ವೀಟ್ ಗುಜರಾತ್‌ನ ಮತದಾರರಿಗೆ ತಮ್ಮ ರಾಜ್ಯದಲ್ಲಿ ಡ್ರಗ್ಸ್ ಸಾಗಾಣಿಕೆ ನೆನಪಿಸುವ ಪ್ರಯತ್ನವಾಗಿದೆ . ದೇಶದ ಎರಡು ಶಕ್ತಿಶಾಲಿ ಹುದ್ದೆಗಳಲ್ಲಿ ಬಿಜೆಪಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ.

ಸೆಪ್ಟೆಂಬರ್​​ನಲ್ಲಿ ಅಧಿಕಾರಿಗಳು ಮುಂದ್ರಾ ಬಂದರಿನಿಂದ 3,000 ಕೆಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡರು. ಅಪ್ಘಾನಿಸ್ತಾನದಿಂದ ಇರಾನ್ ಮೂಲಕ ಈ ಸರಕು ಬಂದಿತು, ಇದು ವಿಶ್ವದ ಅತಿ ದೊಡ್ಡ ಅಫೀಮು ಉತ್ಪಾದಕರಲ್ಲಿ ಒಂದಾಗಿದೆ. ವಿದೇಶಿ ಪ್ರಜೆ ಸೇರಿದಂತೆ ಎಂಟು ಜನರನ್ನು ಇದುವರೆಗೆ ಬಂಧಿಸಲಾಗಿದೆ ಮತ್ತು ದೆಹಲಿ ಹಲವು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿದೆ.

ಕಳೆದ ತಿಂಗಳು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಮಾದಕ ವಸ್ತುಗಳು ದೇಶವನ್ನು ಪ್ರವೇಶಿಸುವುದನ್ನು ನಿಲ್ಲಿಸುವಲ್ಲಿ ಕೇಂದ್ರದ “ವಿಫಲತೆ” ಯನ್ನು ಪ್ರಶ್ನಿಸಿದರು ಮತ್ತು ಡ್ರಗ್ಸ್ ಪ್ರಮಾಣವು ತೀವ್ರವಾಗಿ ಹೆಚ್ಚಾಗಿದೆ ಎಂದು ಆರೋಪಿಸಿದರು. “ಗುಜರಾತ್ ಏಕೆ ಮಾದಕವಸ್ತು ಕಳ್ಳಸಾಗಾಣಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು (ಬಿಜೆಪಿ) ನಮಗೆ ಹೇಳಬಹುದೇ.  ಈ ರಾಕೆಟ್ ಅನ್ನು ಏಕೆ ಭೇದಿಸುತ್ತಿಲ್ಲ?  ಇದು ಗಂಭೀರ ವಿಷಯ ಎಂದು ಪವನ್ ಖೇರಾ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್​ನ ಮುಂದ್ರಾ ಬಂದರಿನಲ್ಲಿ 2,100 ಕೋಟಿ ರೂ. ಮೌಲ್ಯದ 3,000 ಕೆಜಿ ಡ್ರಗ್ಸ್ ವಶ

ಇದನ್ನೂ ಓದಿ: ಆರ್ಯನ್ ಖಾನ್ ಜತೆ ಸೆಲ್ಫಿ ಕ್ಲಿಕ್ಕಿಸಿದ ‘ಡಿಟೆಕ್ಟಿವ್’ ಕಿರಣ್ ಗೋಸಾವಿಗೆ ಪುಣೆ ಪೊಲೀಸರಿಂದ ಲುಕೌಟ್ ನೋಟಿಸ್

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?