AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ

Sachin Pilot: ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ
ಸಚಿನ ಪೈಲಟ್​
TV9 Web
| Edited By: |

Updated on: Aug 09, 2021 | 5:00 PM

Share

ಜೈಪುರ: ಕಾಂಗ್ರೆಸ್ ನಾಯಕ ಸಚಿನ್​ ಪೈಲಟ್ (Sachin Pilot)​ ಭಾರತೀಯ ಜನತಾ ಪಾರ್ಟಿ (ಬಿಜೆಪಿ) (BJP) ಸೇರ್ಪಡೆಯಾಗುತ್ತಾರಾ? ಹೀಗೊಂದು ಊಹಾಪೋಹಗಳು ಮತ್ತೆ ಎದ್ದಿವೆ. ಅದಕ್ಕೆ ಕಾರಣ ಬಿಜೆಪಿ ಹಿರಿಯ ನಾಯಕರೊಬ್ಬರ ಮಾತು. ಮುಂಬರುವ ದಿನಗಳಲ್ಲಿ ಸಚಿನ್ ಪೈಲಟ್​ ಖಂಡಿತವಾಗಿಯೂ ಬಿಜೆಪಿ ಸೇರುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದು ಈಗ ಮತ್ತೆ ಚರ್ಚೆಯನ್ನು ಹುಟ್ಟುಹಾಕಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಜಸ್ತಾನ ಬಿಜೆಪಿ ಮುಖ್ಯಸ್ಥನಾಗಿರುವ ಎಪಿ ಅಬ್ದುಲ್ಲಾಕುಟ್ಟಿ ಈ ಮಾತುಗಳನ್ನಾಡಿದ್ದಾರೆ. ಸಚಿನ್ ಪೈಲಟ್​ ನಿಜಕ್ಕೂ ಒಳ್ಳೆಯ ನಾಯಕ. ಮುಂಬರುವ ದಿನಗಳಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ನನಗೆ ಬಲವಾಗಿ ಅನ್ನಿಸುತ್ತಿದೆ ಎಂದು ಮಾಧ್ಯಮಗಳೆದುರು ಹೇಳಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾದಾಗಾಲೇ, ಮುಂದಿನ ಸರದಿ ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು. ಆದರೆ ನನಗೆ ಬಿಜೆಪಿ ಸೇರುವ ಯಾವುದೇ ಯೋಚನೆಯೂ ಇಲ್ಲ ಎಂದು ಹೇಳುವ ಮೂಲಕ ಸಚಿನ್​ ಪೈಲಟ್​ ಊಹಾಪೋಹಗಳಿಗೆ ತೆರೆ ಎಳೆದಿದ್ದರು ಮತ್ತು ಹಾಗೇ ನಡೆದುಕೊಂಡಿದ್ದರು. ಈಗ ಬಿಜೆಪಿ ನಾಯಕರು ಹೇಳಿದ ಮಾತಿನಿಂದ ಕುತೂಹಲ ಎದ್ದಿದೆ.

ಇದನ್ನೂ ಓದಿ: ದೆಹಲಿಯ ಜಂತರ್ ಮಂತರ್​​ನಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ, ಎಫ್ಐಆರ್ ದಾಖಲು

Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

Follow Us
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ