AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ

Sachin Pilot: ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು.

‘ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್​..!’-ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರ ಹೇಳಿಕೆ
ಸಚಿನ ಪೈಲಟ್​
TV9 Web
| Edited By: |

Updated on: Aug 09, 2021 | 5:00 PM

Share

ಜೈಪುರ: ಕಾಂಗ್ರೆಸ್ ನಾಯಕ ಸಚಿನ್​ ಪೈಲಟ್ (Sachin Pilot)​ ಭಾರತೀಯ ಜನತಾ ಪಾರ್ಟಿ (ಬಿಜೆಪಿ) (BJP) ಸೇರ್ಪಡೆಯಾಗುತ್ತಾರಾ? ಹೀಗೊಂದು ಊಹಾಪೋಹಗಳು ಮತ್ತೆ ಎದ್ದಿವೆ. ಅದಕ್ಕೆ ಕಾರಣ ಬಿಜೆಪಿ ಹಿರಿಯ ನಾಯಕರೊಬ್ಬರ ಮಾತು. ಮುಂಬರುವ ದಿನಗಳಲ್ಲಿ ಸಚಿನ್ ಪೈಲಟ್​ ಖಂಡಿತವಾಗಿಯೂ ಬಿಜೆಪಿ ಸೇರುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದು ಈಗ ಮತ್ತೆ ಚರ್ಚೆಯನ್ನು ಹುಟ್ಟುಹಾಕಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ರಾಜಸ್ತಾನ ಬಿಜೆಪಿ ಮುಖ್ಯಸ್ಥನಾಗಿರುವ ಎಪಿ ಅಬ್ದುಲ್ಲಾಕುಟ್ಟಿ ಈ ಮಾತುಗಳನ್ನಾಡಿದ್ದಾರೆ. ಸಚಿನ್ ಪೈಲಟ್​ ನಿಜಕ್ಕೂ ಒಳ್ಳೆಯ ನಾಯಕ. ಮುಂಬರುವ ದಿನಗಳಲ್ಲಿ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂದು ನನಗೆ ಬಲವಾಗಿ ಅನ್ನಿಸುತ್ತಿದೆ ಎಂದು ಮಾಧ್ಯಮಗಳೆದುರು ಹೇಳಿದ್ದಾರೆ.

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾದಾಗಾಲೇ, ಮುಂದಿನ ಸರದಿ ಸಚಿನ್​ ಪೈಲಟ್​ ಎಂದು ಹೇಳಲಾಗುತ್ತಿತ್ತು. ಅದರಲ್ಲೂ ಕಳೆದ ವರ್ಷ, ಸಚಿನ್​ ಪೈಲಟ್ ಮತ್ತು ಅವರಿ ನಿಷ್ಠ ಶಾಸಕರು ಬಂಡಾಯ ಎದ್ದಾಗ ಈ ಮಾತುಗಳು ಬಲವಾಗಿಯೇ ಕೇಳಿಬಂದಿದ್ದವು. ಆದರೆ ನನಗೆ ಬಿಜೆಪಿ ಸೇರುವ ಯಾವುದೇ ಯೋಚನೆಯೂ ಇಲ್ಲ ಎಂದು ಹೇಳುವ ಮೂಲಕ ಸಚಿನ್​ ಪೈಲಟ್​ ಊಹಾಪೋಹಗಳಿಗೆ ತೆರೆ ಎಳೆದಿದ್ದರು ಮತ್ತು ಹಾಗೇ ನಡೆದುಕೊಂಡಿದ್ದರು. ಈಗ ಬಿಜೆಪಿ ನಾಯಕರು ಹೇಳಿದ ಮಾತಿನಿಂದ ಕುತೂಹಲ ಎದ್ದಿದೆ.

ಇದನ್ನೂ ಓದಿ: ದೆಹಲಿಯ ಜಂತರ್ ಮಂತರ್​​ನಲ್ಲಿ ನಡೆದ ಮೆರವಣಿಗೆಯಲ್ಲಿ ಮುಸ್ಲಿಂ ವಿರೋಧಿ ಘೋಷಣೆ, ಎಫ್ಐಆರ್ ದಾಖಲು

Love You Racchu: ಫೈಟರ್​ ವಿವೇಕ್​ ಸಾವು; ನಿರ್ದೇಶಕ ಶಂಕರ್​, ಸಾಹಸ ನಿರ್ದೇಶಕ ವಿನೋದ್​ ಪೊಲೀಸರ ವಶಕ್ಕೆ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ