AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುತ್ವವನ್ನು ಐಸಿಸ್​​ಗೆ ಹೋಲಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್​ ಖುರ್ಷಿದ್​; ವಿವಾದ ಸೃಷ್ಟಿಸಿದ ಪುಸ್ತಕ

ಸನ್​ರೈಸ್​ ಓವರ್​ ಅಯೋಧ್ಯಾ ಪುಸ್ತಕದ ಸ್ಯಾಫ್ರನ್​ ಸ್ಕೈ ಎಂಬ ಅಧ್ಯಾಯದಲ್ಲಿ, ಪೇಜ್​ ನಂಬರ್​ 113ರಲ್ಲಿ ಖುರ್ಷಿದ್​ ಹಿಂದುತ್ವದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹಿಂದುತ್ವವನ್ನು ಉಗ್ರ ಸಂಘಟನೆಗಳಾದ ಐಸಿಸ್​ ಮತ್ತು ಬೋಕೊ ಹರಾಮ್​ಗೆ ಹೋಲಿಸಿದ್ದಾರೆ.

ಹಿಂದುತ್ವವನ್ನು ಐಸಿಸ್​​ಗೆ ಹೋಲಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್​ ಖುರ್ಷಿದ್​; ವಿವಾದ ಸೃಷ್ಟಿಸಿದ ಪುಸ್ತಕ
ಸಲ್ಮಾನ್​ ಖುರ್ಷಿದ್​
TV9 Web
| Edited By: |

Updated on:Nov 11, 2021 | 12:10 PM

Share

ಹಿಂದುತ್ವಕ್ಕೆ ಅವಮಾನ ಮಾಡಿದ ಆರೋಪದಡಿ ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ವಿರುದ್ಧ ದೆಹಲಿ  ಪೊಲೀಸರಿಗೆ ದೂರು ನೀಡಲಾಗಿದೆ. ಸಲ್ಮಾನ್​ ಖುರ್ಷಿದ್​ ಬರೆದಿರುವ ಸನ್​ರೈಸ್​ ಓವರ್​ ಅಯೋಧ್ಯಾ ಎಂಬ ಪುಸ್ತಕ ಬುಧವಾರ ಬಿಡುಗಡೆಯಾಗಿದೆ. ಅದರಲ್ಲಿ ಖುರ್ಷಿದ್​ ಹಿಂದುತ್ವವನ್ನು ಉಗ್ರವಾದಕ್ಕೆ ಹೋಲಿಸಿಲಾಗಿದೆ ಎಂದು ದೆಹಲಿ ಮೂಲದ ವಕೀಲ ವಿವೇಕ್​ ಜಾರ್ಜ್​ ದೂರು ನೀಡಿದ್ದಾರೆ. ಹಿಂದುತ್ವವನ್ನು ತುಂಬ ಕೀಳಾಗಿ ನೋಡಿದ್ದಾರೆ ಎಂದು ಆರೋಪಿಸಿರುವ ವಿವೇಕ್​ ಜಾರ್ಜ್​, ನೇರವಾಗಿ ದೆಹಲಿ ಪೊಲೀಸ್​ ಆಯುಕ್ತರಿಗೇ ದೂರು ನೀಡಿ, ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. 

ಸನ್​ರೈಸ್​ ಓವರ್​ ಅಯೋಧ್ಯಾ ಪುಸ್ತಕದ ಸ್ಯಾಫ್ರನ್​ ಸ್ಕೈ ಎಂಬ ಅಧ್ಯಾಯದಲ್ಲಿ, ಪೇಜ್​ ನಂಬರ್​ 113ರಲ್ಲಿ ಖುರ್ಷಿದ್​ ಹಿಂದುತ್ವದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹಿಂದುತ್ವವನ್ನು ಉಗ್ರ ಸಂಘಟನೆಗಳಾದ ಐಸಿಸ್​ ಮತ್ತು ಬೋಕೊ ಹರಾಮ್​ಗೆ ಹೋಲಿಸಿದ್ದಾರೆ. ಹಿಂದಿನ ಋಷಿ-ಮುನಿಗಳು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂವಾದವನ್ನು ಈಗ ಪಕ್ಕಕ್ಕೆ ತಳ್ಳಲಾಗಿದೆ. ಹಿಂದುತ್ವದ ಪುರಾತನ ಕಲ್ಪನೆ ಈಗ ಉಳಿದಿಲ್ಲ. ಈಗೇನಿದ್ದರೂ ರಾಜಕೀಯ ದೃಷ್ಟಿಯಿಂದಲೇ ನೋಡಲಾಗುತ್ತಿದ್ದು, ಹಿಂದುತ್ವವೆಂಬುದು ಇಸ್ಲಾಂನ ಜಿಹಾದಿ ಗುಂಪುಗಳಾದ ಐಸಿಸ್​​ ಮತ್ತು ಬೋಕೋ ಹರಾಮ್​ಗೆ ಸಮಾನವಾಗಿದೆ ಎಂದು ಬರೆದಿದ್ದಾರೆ.   ಸಲ್ಮಾನ್​ ಖುರ್ಷಿದ್​ ವಿರುದ್ಧ ದೆಹಲಿ ಠಾಣೆಯಲ್ಲಿ ಕ್ರಿಮಿನಲ್​ ದೂರು ದಾಖಲಾಗಿದೆ.

ಬಿಜೆಪಿ ಖಂಡನೆ ಪುಸ್ತಕ ಬಿಡುಗಡೆಯಾಗುತ್ತಿದ್ದಂತೆ ಈ ಸಾಲುಗಳು ವಿವಾದ ಸೃಷ್ಟಿಸಿವೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಟ್ವೀಟ್​ ಮಾಡಿದ್ದು, ಕಾಂಗ್ರೆಸ್​ ನೈಜ ಮನಸ್ಥಿತಿಗೆ ಈ ಸಾಲುಗಳು ಸಾಕ್ಷಿ. ಐಸಿಸ್​ ಸಿದ್ಧಾಂತವನ್ನು ಹಿಂದುತ್ವದೊಂದಿಗೆ ಹೋಲಿಸುವ ಮೂಲಕ ಅದನ್ನೂ ಕಾನೂನು ಬದ್ಧಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಬಿಜೆಪಿಯ ಹಿರಿಯ ನಾಯಕ ಮತ್ತು ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಪುಸ್ತಕದ 113ನೇ ಪುಟವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ; ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ- ಸಿಎಂ ಬೊಮ್ಮಯಿ

Published On - 12:05 pm, Thu, 11 November 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ