AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುತ್ವವನ್ನು ಐಸಿಸ್​​ಗೆ ಹೋಲಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್​ ಖುರ್ಷಿದ್​; ವಿವಾದ ಸೃಷ್ಟಿಸಿದ ಪುಸ್ತಕ

ಸನ್​ರೈಸ್​ ಓವರ್​ ಅಯೋಧ್ಯಾ ಪುಸ್ತಕದ ಸ್ಯಾಫ್ರನ್​ ಸ್ಕೈ ಎಂಬ ಅಧ್ಯಾಯದಲ್ಲಿ, ಪೇಜ್​ ನಂಬರ್​ 113ರಲ್ಲಿ ಖುರ್ಷಿದ್​ ಹಿಂದುತ್ವದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹಿಂದುತ್ವವನ್ನು ಉಗ್ರ ಸಂಘಟನೆಗಳಾದ ಐಸಿಸ್​ ಮತ್ತು ಬೋಕೊ ಹರಾಮ್​ಗೆ ಹೋಲಿಸಿದ್ದಾರೆ.

ಹಿಂದುತ್ವವನ್ನು ಐಸಿಸ್​​ಗೆ ಹೋಲಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್​ ಖುರ್ಷಿದ್​; ವಿವಾದ ಸೃಷ್ಟಿಸಿದ ಪುಸ್ತಕ
ಸಲ್ಮಾನ್​ ಖುರ್ಷಿದ್​
TV9 Web
| Edited By: |

Updated on:Nov 11, 2021 | 12:10 PM

Share

ಹಿಂದುತ್ವಕ್ಕೆ ಅವಮಾನ ಮಾಡಿದ ಆರೋಪದಡಿ ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ವಿರುದ್ಧ ದೆಹಲಿ  ಪೊಲೀಸರಿಗೆ ದೂರು ನೀಡಲಾಗಿದೆ. ಸಲ್ಮಾನ್​ ಖುರ್ಷಿದ್​ ಬರೆದಿರುವ ಸನ್​ರೈಸ್​ ಓವರ್​ ಅಯೋಧ್ಯಾ ಎಂಬ ಪುಸ್ತಕ ಬುಧವಾರ ಬಿಡುಗಡೆಯಾಗಿದೆ. ಅದರಲ್ಲಿ ಖುರ್ಷಿದ್​ ಹಿಂದುತ್ವವನ್ನು ಉಗ್ರವಾದಕ್ಕೆ ಹೋಲಿಸಿಲಾಗಿದೆ ಎಂದು ದೆಹಲಿ ಮೂಲದ ವಕೀಲ ವಿವೇಕ್​ ಜಾರ್ಜ್​ ದೂರು ನೀಡಿದ್ದಾರೆ. ಹಿಂದುತ್ವವನ್ನು ತುಂಬ ಕೀಳಾಗಿ ನೋಡಿದ್ದಾರೆ ಎಂದು ಆರೋಪಿಸಿರುವ ವಿವೇಕ್​ ಜಾರ್ಜ್​, ನೇರವಾಗಿ ದೆಹಲಿ ಪೊಲೀಸ್​ ಆಯುಕ್ತರಿಗೇ ದೂರು ನೀಡಿ, ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. 

ಸನ್​ರೈಸ್​ ಓವರ್​ ಅಯೋಧ್ಯಾ ಪುಸ್ತಕದ ಸ್ಯಾಫ್ರನ್​ ಸ್ಕೈ ಎಂಬ ಅಧ್ಯಾಯದಲ್ಲಿ, ಪೇಜ್​ ನಂಬರ್​ 113ರಲ್ಲಿ ಖುರ್ಷಿದ್​ ಹಿಂದುತ್ವದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹಿಂದುತ್ವವನ್ನು ಉಗ್ರ ಸಂಘಟನೆಗಳಾದ ಐಸಿಸ್​ ಮತ್ತು ಬೋಕೊ ಹರಾಮ್​ಗೆ ಹೋಲಿಸಿದ್ದಾರೆ. ಹಿಂದಿನ ಋಷಿ-ಮುನಿಗಳು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂವಾದವನ್ನು ಈಗ ಪಕ್ಕಕ್ಕೆ ತಳ್ಳಲಾಗಿದೆ. ಹಿಂದುತ್ವದ ಪುರಾತನ ಕಲ್ಪನೆ ಈಗ ಉಳಿದಿಲ್ಲ. ಈಗೇನಿದ್ದರೂ ರಾಜಕೀಯ ದೃಷ್ಟಿಯಿಂದಲೇ ನೋಡಲಾಗುತ್ತಿದ್ದು, ಹಿಂದುತ್ವವೆಂಬುದು ಇಸ್ಲಾಂನ ಜಿಹಾದಿ ಗುಂಪುಗಳಾದ ಐಸಿಸ್​​ ಮತ್ತು ಬೋಕೋ ಹರಾಮ್​ಗೆ ಸಮಾನವಾಗಿದೆ ಎಂದು ಬರೆದಿದ್ದಾರೆ.   ಸಲ್ಮಾನ್​ ಖುರ್ಷಿದ್​ ವಿರುದ್ಧ ದೆಹಲಿ ಠಾಣೆಯಲ್ಲಿ ಕ್ರಿಮಿನಲ್​ ದೂರು ದಾಖಲಾಗಿದೆ.

ಬಿಜೆಪಿ ಖಂಡನೆ ಪುಸ್ತಕ ಬಿಡುಗಡೆಯಾಗುತ್ತಿದ್ದಂತೆ ಈ ಸಾಲುಗಳು ವಿವಾದ ಸೃಷ್ಟಿಸಿವೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಟ್ವೀಟ್​ ಮಾಡಿದ್ದು, ಕಾಂಗ್ರೆಸ್​ ನೈಜ ಮನಸ್ಥಿತಿಗೆ ಈ ಸಾಲುಗಳು ಸಾಕ್ಷಿ. ಐಸಿಸ್​ ಸಿದ್ಧಾಂತವನ್ನು ಹಿಂದುತ್ವದೊಂದಿಗೆ ಹೋಲಿಸುವ ಮೂಲಕ ಅದನ್ನೂ ಕಾನೂನು ಬದ್ಧಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಬಿಜೆಪಿಯ ಹಿರಿಯ ನಾಯಕ ಮತ್ತು ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಪುಸ್ತಕದ 113ನೇ ಪುಟವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ; ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ- ಸಿಎಂ ಬೊಮ್ಮಯಿ

Published On - 12:05 pm, Thu, 11 November 21

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್