AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುತ್ವವನ್ನು ಐಸಿಸ್​​ಗೆ ಹೋಲಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್​ ಖುರ್ಷಿದ್​; ವಿವಾದ ಸೃಷ್ಟಿಸಿದ ಪುಸ್ತಕ

ಸನ್​ರೈಸ್​ ಓವರ್​ ಅಯೋಧ್ಯಾ ಪುಸ್ತಕದ ಸ್ಯಾಫ್ರನ್​ ಸ್ಕೈ ಎಂಬ ಅಧ್ಯಾಯದಲ್ಲಿ, ಪೇಜ್​ ನಂಬರ್​ 113ರಲ್ಲಿ ಖುರ್ಷಿದ್​ ಹಿಂದುತ್ವದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹಿಂದುತ್ವವನ್ನು ಉಗ್ರ ಸಂಘಟನೆಗಳಾದ ಐಸಿಸ್​ ಮತ್ತು ಬೋಕೊ ಹರಾಮ್​ಗೆ ಹೋಲಿಸಿದ್ದಾರೆ.

ಹಿಂದುತ್ವವನ್ನು ಐಸಿಸ್​​ಗೆ ಹೋಲಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್​ ಖುರ್ಷಿದ್​; ವಿವಾದ ಸೃಷ್ಟಿಸಿದ ಪುಸ್ತಕ
ಸಲ್ಮಾನ್​ ಖುರ್ಷಿದ್​
TV9 Web
| Edited By: |

Updated on:Nov 11, 2021 | 12:10 PM

Share

ಹಿಂದುತ್ವಕ್ಕೆ ಅವಮಾನ ಮಾಡಿದ ಆರೋಪದಡಿ ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ವಿರುದ್ಧ ದೆಹಲಿ  ಪೊಲೀಸರಿಗೆ ದೂರು ನೀಡಲಾಗಿದೆ. ಸಲ್ಮಾನ್​ ಖುರ್ಷಿದ್​ ಬರೆದಿರುವ ಸನ್​ರೈಸ್​ ಓವರ್​ ಅಯೋಧ್ಯಾ ಎಂಬ ಪುಸ್ತಕ ಬುಧವಾರ ಬಿಡುಗಡೆಯಾಗಿದೆ. ಅದರಲ್ಲಿ ಖುರ್ಷಿದ್​ ಹಿಂದುತ್ವವನ್ನು ಉಗ್ರವಾದಕ್ಕೆ ಹೋಲಿಸಿಲಾಗಿದೆ ಎಂದು ದೆಹಲಿ ಮೂಲದ ವಕೀಲ ವಿವೇಕ್​ ಜಾರ್ಜ್​ ದೂರು ನೀಡಿದ್ದಾರೆ. ಹಿಂದುತ್ವವನ್ನು ತುಂಬ ಕೀಳಾಗಿ ನೋಡಿದ್ದಾರೆ ಎಂದು ಆರೋಪಿಸಿರುವ ವಿವೇಕ್​ ಜಾರ್ಜ್​, ನೇರವಾಗಿ ದೆಹಲಿ ಪೊಲೀಸ್​ ಆಯುಕ್ತರಿಗೇ ದೂರು ನೀಡಿ, ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. 

ಸನ್​ರೈಸ್​ ಓವರ್​ ಅಯೋಧ್ಯಾ ಪುಸ್ತಕದ ಸ್ಯಾಫ್ರನ್​ ಸ್ಕೈ ಎಂಬ ಅಧ್ಯಾಯದಲ್ಲಿ, ಪೇಜ್​ ನಂಬರ್​ 113ರಲ್ಲಿ ಖುರ್ಷಿದ್​ ಹಿಂದುತ್ವದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹಿಂದುತ್ವವನ್ನು ಉಗ್ರ ಸಂಘಟನೆಗಳಾದ ಐಸಿಸ್​ ಮತ್ತು ಬೋಕೊ ಹರಾಮ್​ಗೆ ಹೋಲಿಸಿದ್ದಾರೆ. ಹಿಂದಿನ ಋಷಿ-ಮುನಿಗಳು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂವಾದವನ್ನು ಈಗ ಪಕ್ಕಕ್ಕೆ ತಳ್ಳಲಾಗಿದೆ. ಹಿಂದುತ್ವದ ಪುರಾತನ ಕಲ್ಪನೆ ಈಗ ಉಳಿದಿಲ್ಲ. ಈಗೇನಿದ್ದರೂ ರಾಜಕೀಯ ದೃಷ್ಟಿಯಿಂದಲೇ ನೋಡಲಾಗುತ್ತಿದ್ದು, ಹಿಂದುತ್ವವೆಂಬುದು ಇಸ್ಲಾಂನ ಜಿಹಾದಿ ಗುಂಪುಗಳಾದ ಐಸಿಸ್​​ ಮತ್ತು ಬೋಕೋ ಹರಾಮ್​ಗೆ ಸಮಾನವಾಗಿದೆ ಎಂದು ಬರೆದಿದ್ದಾರೆ.   ಸಲ್ಮಾನ್​ ಖುರ್ಷಿದ್​ ವಿರುದ್ಧ ದೆಹಲಿ ಠಾಣೆಯಲ್ಲಿ ಕ್ರಿಮಿನಲ್​ ದೂರು ದಾಖಲಾಗಿದೆ.

ಬಿಜೆಪಿ ಖಂಡನೆ ಪುಸ್ತಕ ಬಿಡುಗಡೆಯಾಗುತ್ತಿದ್ದಂತೆ ಈ ಸಾಲುಗಳು ವಿವಾದ ಸೃಷ್ಟಿಸಿವೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಟ್ವೀಟ್​ ಮಾಡಿದ್ದು, ಕಾಂಗ್ರೆಸ್​ ನೈಜ ಮನಸ್ಥಿತಿಗೆ ಈ ಸಾಲುಗಳು ಸಾಕ್ಷಿ. ಐಸಿಸ್​ ಸಿದ್ಧಾಂತವನ್ನು ಹಿಂದುತ್ವದೊಂದಿಗೆ ಹೋಲಿಸುವ ಮೂಲಕ ಅದನ್ನೂ ಕಾನೂನು ಬದ್ಧಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಬಿಜೆಪಿಯ ಹಿರಿಯ ನಾಯಕ ಮತ್ತು ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಪುಸ್ತಕದ 113ನೇ ಪುಟವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ; ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ- ಸಿಎಂ ಬೊಮ್ಮಯಿ

Published On - 12:05 pm, Thu, 11 November 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!