AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುತ್ವವನ್ನು ಐಸಿಸ್​​ಗೆ ಹೋಲಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್​ ಖುರ್ಷಿದ್​; ವಿವಾದ ಸೃಷ್ಟಿಸಿದ ಪುಸ್ತಕ

ಸನ್​ರೈಸ್​ ಓವರ್​ ಅಯೋಧ್ಯಾ ಪುಸ್ತಕದ ಸ್ಯಾಫ್ರನ್​ ಸ್ಕೈ ಎಂಬ ಅಧ್ಯಾಯದಲ್ಲಿ, ಪೇಜ್​ ನಂಬರ್​ 113ರಲ್ಲಿ ಖುರ್ಷಿದ್​ ಹಿಂದುತ್ವದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹಿಂದುತ್ವವನ್ನು ಉಗ್ರ ಸಂಘಟನೆಗಳಾದ ಐಸಿಸ್​ ಮತ್ತು ಬೋಕೊ ಹರಾಮ್​ಗೆ ಹೋಲಿಸಿದ್ದಾರೆ.

ಹಿಂದುತ್ವವನ್ನು ಐಸಿಸ್​​ಗೆ ಹೋಲಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್​ ಖುರ್ಷಿದ್​; ವಿವಾದ ಸೃಷ್ಟಿಸಿದ ಪುಸ್ತಕ
ಸಲ್ಮಾನ್​ ಖುರ್ಷಿದ್​
TV9 Web
| Updated By: Lakshmi Hegde|

Updated on:Nov 11, 2021 | 12:10 PM

Share

ಹಿಂದುತ್ವಕ್ಕೆ ಅವಮಾನ ಮಾಡಿದ ಆರೋಪದಡಿ ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ವಿರುದ್ಧ ದೆಹಲಿ  ಪೊಲೀಸರಿಗೆ ದೂರು ನೀಡಲಾಗಿದೆ. ಸಲ್ಮಾನ್​ ಖುರ್ಷಿದ್​ ಬರೆದಿರುವ ಸನ್​ರೈಸ್​ ಓವರ್​ ಅಯೋಧ್ಯಾ ಎಂಬ ಪುಸ್ತಕ ಬುಧವಾರ ಬಿಡುಗಡೆಯಾಗಿದೆ. ಅದರಲ್ಲಿ ಖುರ್ಷಿದ್​ ಹಿಂದುತ್ವವನ್ನು ಉಗ್ರವಾದಕ್ಕೆ ಹೋಲಿಸಿಲಾಗಿದೆ ಎಂದು ದೆಹಲಿ ಮೂಲದ ವಕೀಲ ವಿವೇಕ್​ ಜಾರ್ಜ್​ ದೂರು ನೀಡಿದ್ದಾರೆ. ಹಿಂದುತ್ವವನ್ನು ತುಂಬ ಕೀಳಾಗಿ ನೋಡಿದ್ದಾರೆ ಎಂದು ಆರೋಪಿಸಿರುವ ವಿವೇಕ್​ ಜಾರ್ಜ್​, ನೇರವಾಗಿ ದೆಹಲಿ ಪೊಲೀಸ್​ ಆಯುಕ್ತರಿಗೇ ದೂರು ನೀಡಿ, ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ. 

ಸನ್​ರೈಸ್​ ಓವರ್​ ಅಯೋಧ್ಯಾ ಪುಸ್ತಕದ ಸ್ಯಾಫ್ರನ್​ ಸ್ಕೈ ಎಂಬ ಅಧ್ಯಾಯದಲ್ಲಿ, ಪೇಜ್​ ನಂಬರ್​ 113ರಲ್ಲಿ ಖುರ್ಷಿದ್​ ಹಿಂದುತ್ವದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಹಿಂದುತ್ವವನ್ನು ಉಗ್ರ ಸಂಘಟನೆಗಳಾದ ಐಸಿಸ್​ ಮತ್ತು ಬೋಕೊ ಹರಾಮ್​ಗೆ ಹೋಲಿಸಿದ್ದಾರೆ. ಹಿಂದಿನ ಋಷಿ-ಮುನಿಗಳು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂವಾದವನ್ನು ಈಗ ಪಕ್ಕಕ್ಕೆ ತಳ್ಳಲಾಗಿದೆ. ಹಿಂದುತ್ವದ ಪುರಾತನ ಕಲ್ಪನೆ ಈಗ ಉಳಿದಿಲ್ಲ. ಈಗೇನಿದ್ದರೂ ರಾಜಕೀಯ ದೃಷ್ಟಿಯಿಂದಲೇ ನೋಡಲಾಗುತ್ತಿದ್ದು, ಹಿಂದುತ್ವವೆಂಬುದು ಇಸ್ಲಾಂನ ಜಿಹಾದಿ ಗುಂಪುಗಳಾದ ಐಸಿಸ್​​ ಮತ್ತು ಬೋಕೋ ಹರಾಮ್​ಗೆ ಸಮಾನವಾಗಿದೆ ಎಂದು ಬರೆದಿದ್ದಾರೆ.   ಸಲ್ಮಾನ್​ ಖುರ್ಷಿದ್​ ವಿರುದ್ಧ ದೆಹಲಿ ಠಾಣೆಯಲ್ಲಿ ಕ್ರಿಮಿನಲ್​ ದೂರು ದಾಖಲಾಗಿದೆ.

ಬಿಜೆಪಿ ಖಂಡನೆ ಪುಸ್ತಕ ಬಿಡುಗಡೆಯಾಗುತ್ತಿದ್ದಂತೆ ಈ ಸಾಲುಗಳು ವಿವಾದ ಸೃಷ್ಟಿಸಿವೆ. ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಟ್ವೀಟ್​ ಮಾಡಿದ್ದು, ಕಾಂಗ್ರೆಸ್​ ನೈಜ ಮನಸ್ಥಿತಿಗೆ ಈ ಸಾಲುಗಳು ಸಾಕ್ಷಿ. ಐಸಿಸ್​ ಸಿದ್ಧಾಂತವನ್ನು ಹಿಂದುತ್ವದೊಂದಿಗೆ ಹೋಲಿಸುವ ಮೂಲಕ ಅದನ್ನೂ ಕಾನೂನು ಬದ್ಧಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.  ಬಿಜೆಪಿಯ ಹಿರಿಯ ನಾಯಕ ಮತ್ತು ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಪುಸ್ತಕದ 113ನೇ ಪುಟವನ್ನು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿ ಬಹಳ ಒಳ್ಳೆ ರೀತಿಯಲ್ಲಿ ಆಗಿದೆ; ಬೆಂಗಳೂರಿಗೆ ಬರಲು ಆಹ್ವಾನಿಸಿದ್ದೇನೆ- ಸಿಎಂ ಬೊಮ್ಮಯಿ

Published On - 12:05 pm, Thu, 11 November 21

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್