AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟುಹಬ್ಬಕ್ಕೆ ಕರೆ ಮಾಡಿ ಶುಭಾಶಯ ಕೋರಿದ್ದಾರೆ ಅಮಿತ್ ಶಾ; ಏನೋ ವಿಶೇಷ ಇರಬೇಕು ಎಂದ ಶಶಿ ತರೂರ್

ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿರುವುದಾಗಿ ತರೂರ್ ಹೇಳಿದ್ದಾರೆ.

ಹುಟ್ಟುಹಬ್ಬಕ್ಕೆ ಕರೆ ಮಾಡಿ ಶುಭಾಶಯ ಕೋರಿದ್ದಾರೆ ಅಮಿತ್ ಶಾ; ಏನೋ ವಿಶೇಷ ಇರಬೇಕು ಎಂದ ಶಶಿ ತರೂರ್
ಶಶಿ ತರೂರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Mar 09, 2022 | 7:40 PM

Share

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)  ಅವರಿಂದ ದೂರವಾಣಿ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್(Shashi Tharoor) ಬುಧವಾರ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಕೇಂದ್ರ ಗೃಹ ಸಚಿವರಿಂದ ಕರೆಯನ್ನು ನಿರೀಕ್ಷಿಸಿರಲಿಲ್ಲ ಎಂಬುದು ಅವರ ಟ್ವೀಟ್​​ನಿಂದಲೇ ತಿಳಿಯುತ್ತಿದೆ. “66 ನೇ ವರ್ಷಕ್ಕೆ ಕಾಲಿಡುವುದರಲ್ಲಿ ಏನೋ ವಿಶೇಷತೆ ಇರಬೇಕು! ಒಳ್ಳೆಯ ಮಾತುಗಳಿಗೆ ಅತ್ಯಂತ ಕೃತಜ್ಞರಾಗಿರುತ್ತೇನೆ” ಎಂದು ತರೂರ್ ಟ್ವೀಟ್ ಮಾಡಿದ್ದಾರೆ.  ಪ್ರಧಾನಿ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿರುವುದಾಗಿ ತರೂರ್ ಹೇಳಿದ್ದಾರೆ. ನರೇಂದ್ರ ಮೋದಿಜಿಯವರಿಂದ ಈ ಚಿಂತನಶೀಲ ಶುಭಾಶಯಗಳನ್ನು ಸ್ವೀಕರಿಸಿ ಖುಷಿಯಾಗಿದೆ. ಅವರು ಯಾವತ್ತೂ ಈ ರೀತಿಯ ಸೌಜನ್ಯವನ್ನು ತೋರುತ್ತಾರೆ” ಎಂದು ತರೂರ್ ಟ್ವೀಟ್ ಮಾಡಿದ್ದಾರೆ.  ತರೂರ್ ಅವರಿಗೆ ಬರೆದ ಪತ್ರದಲ್ಲಿ ಪ್ರಧಾನಿ ಮೋದಿ ಅವರು ತರೂರ್ ಅವರಿಗೆ ಸಮಾಧಾನ ಮತ್ತು ಸಂತೋಷಕ್ಕಾಗಿ ಪ್ರಾರ್ಥಿಸಿದ್ದಾರೆ. “ಜನ್ಮದಿನವು ಹಿಂದಿನ ನೆನಪುಗಳನ್ನು ನೆನಪಿಸಿಕೊಳ್ಳುವ ಒಂದು ವಿಶೇಷ ಸಂದರ್ಭವಾಗಿದೆ. ಅದೇ ಸಮಯದಲ್ಲಿ, ನಮ್ಮ ಕುಟುಂಬ, ಸಮಾಜ ಮತ್ತು ರಾಷ್ಟ್ರದ ಕಡೆಗೆ ನಮ್ಮ ಕರ್ತವ್ಯಗಳನ್ನು ಹೊಸ ಉತ್ಸಾಹದಿಂದ ಪೂರೈಸಲು ಪ್ರೇರೇಪಿಸುವ ದಿನವಾಗಿದೆ” ಎಂದು ಪತ್ರದಲ್ಲಿ ಬರೆಯಲಾಗಿದೆ.

ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರ ಜನ್ಮದಿನದಂದು ಶುಭಾಶಯ ಕೋರಿದ್ದಕ್ಕಾಗಿ ಕಾಂಗ್ರೆಸ್ ನಾಯಕ ಈ ಹಿಂದೆ ಟ್ವಿಟರ್‌ನಲ್ಲಿ ಟೀಕೆಗಳನ್ನು ಎದುರಿಸಿದ್ದರು.ತರೂರ್ ಈ ಟೀಕೆಗಳನ್ನು ಅವರು ತೀವ್ರವಾಗಿ ವಿರೋಧಿಸಿದರು ಮತ್ತು ವಿಭಿನ್ನ ರಾಜಕೀಯ ದೃಷ್ಟಿಕೋನಗಳ ಕಾರಣ ಸೌಜನ್ಯವನ್ನು ಎಂದಿಗೂ ತಪ್ಪಿಸುವುದಿಲ್ಲ ಎಂದು ಹೇಳಿದ್ದರು. “ಹೌದು, ನಾನು ಎಲ್.ಕೆ. ಅಡ್ವಾಣಿ ಮತ್ತು ನರೇಂದ್ರ ಮೋದಿಯವರ ಜನ್ಮದಿನದಂದು ಶುಭ ಹಾರೈಸುವುದನ್ನು ಮುಂದುವರಿಸಲು ಉದ್ದೇಶಿಸಿದ್ದೇನೆ. ಅದೇ ವೇಳೆ ಅವರು ರಾಜಕೀಯ ನಿಲುವುಗಳನ್ನು ನಾನು ವಿರೋಧಿಸುತ್ತೇನೆ. ನನ್ನ 40 ವರ್ಷಗಳ ಬರವಣಿಗೆ ನಾನು ನಂಬಿದ್ದನ್ನು ಸ್ಪಷ್ಟಪಡಿಸುತ್ತದೆ. ನನ್ನನ್ನು ಓದದವರು ಮಾತ್ರ ನನ್ನನ್ನು ಸಂಘಿ ಎಂದು ಕರೆಯುತ್ತಾರೆ. ಅವರಿಗಾಗಿ ನನ್ನ ಮೌಲ್ಯಗಳನ್ನು ತಿರಸ್ಕರಿಸಲಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ:Assembly Election Results 2022: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ನಾಳೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ